Andolana originals

ರಾಜಕೀಯದಿಂದ ದೂರವಾಗಿ ಕೃಷಿಯಲ್ಲಿ ಸಾಧಿಸಿದ ರೈತ

ಮಹೇಂದ್ರ ಹಸಗೂಲಿ

ಸೂರ್ಯಕಾಂತಿ, ಬಾಳೆ, ಆಲೂಗಡ್ಡೆ ಅರಿಶಿನ, ಈರುಳ್ಳಿ ಬೆಳೆದು ಸೂರ್ತಿಯಾದ ಎಚ್.ಎಂ.ನಂದೀಶ್

ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಎಚ್. ಎಂ.ನಂದೀಶ್ ಎಂಬವರು ಮೈಸೂರಿನ ಶ್ರೀ ಜಯಚಾಮ ರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಬಿಎ ಪದವಿ ಪಡೆದು ನಂತರ ರಾಜಕೀಯಕ್ಕೆ ಬಂದು ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಯಾಗಿ ಸೇವೆ ಸಲ್ಲಿಸಿ ಹಂಗಳ ಗ್ರಾಪಂ ಸದಸ್ಯರಾಗಿದ್ದರು. ಇದರ ಮಧ್ಯೆ ರಾಜಕೀಯದಿಂದ ದೂರವಾಗಿ ಕಳೆದ ಎರಡು ವರ್ಷಗಳಲ್ಲಿ ಕೃಷಿಯ ಕಡೆ ಒಲವು ತೋರಿಸಿ ಅನೇಕ ಯುವಕರಿಗೆ ಕೃಷಿಯ ಬಗ್ಗೆ ಆಸಕ್ತಿ ಮೂಡುವಂತೆ ಬೆಳೆಗಳನ್ನು ಬೆಳೆದಿದ್ದಾರೆ.

ತಾಲ್ಲೂಕಿನ ಹಂಗಳ ಗ್ರಾಮದ ಮರಿಯಪ್ಪ ಮಹ ದೇವಪ್ಪ ಅವರದ್ದು ರೈತಾಪಿ ಕುಟುಂಬ. ನಂತರದ ದಿನಗಳಲ್ಲಿ ವ್ಯವಸಾಯದ ಬಗ್ಗೆ ಆಸಕ್ತಿ ಕ್ಷೀಣಿಸಿತ್ತು. ಆದರೆ ನಂದೀಶ್ ಮತ್ತೆ ವ್ಯವಸಾಯದಲ್ಲೇ ಸಾಧನೆ ಮಾಡಬೇಕು ಎಂಬ ಸಂಕಲ್ಪ ತೊಟ್ಟು ಕೃಷಿಗೆ ಇಳಿದು ಲಕ್ಷಾಂತರ ರೂ. ಬಂಡವಾಳ ಹಾಕಿ ಕೋಟ್ಯಂತರ ರೂ. ಸಂಪಾದಿಸುತ್ತಿದ್ದಾರೆ.

ಎಚ್.ಎಂ.ನಂದೀಶ್ ಗ್ರಾಮದಲ್ಲಿ ಸುಮಾರು ಐವತ್ತು ಎಕರೆಯಷ್ಟು ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದು, ೨ ವರ್ಷಗಳಲ್ಲಿ ಒಂದೂವರೆ ಕೋಟಿ ರೂ.ಗಳನ್ನು ವ್ಯವಸಾಯದಿಂದ ಗಳಿಸಿದ್ದಾರೆ. ಕೃಷಿಗೆ ಲಕ್ಷಾಂತರ ರೂ. ವಿನಿಯೋಗಿಸಿದ್ದಾರೆ.

ಇಪ್ಪತ್ತು ಎಕರೆಯಲ್ಲಿ ಬಾಳೆ, ಅರಿಶಿನ, ಆಲೂಗಡ್ಡೆ, ಸಾಂಬಾರ್ ಸೌತೆ, ಈರುಳ್ಳಿ, ಬೀಟ್ರೂಟ್, ತೆಂಗು, ಕಲ್ಲಂಗಡಿ ಬೆಳೆಗಳನ್ನು ಬೆಳೆದು ವ್ಯವಸಾಯದಲ್ಲಿ ಕೋಟ್ಯಂತರ ರೂ. ಸಂಪಾದಿಸಬಹುದು ಎಂದು ತೋರಿಸುವ ಮೂಲಕ ವ್ಯವಸಾಯದಿಂದ ವಿಮುಖರಾಗುತ್ತಿರುವ ಯುವಕರಿಗೆ ಪ್ರೇರಣೆಯಾಗಿದ್ದಾರೆ.

ಭೂಮಿ ತಾಯಿ ನಂಬಿದರೆ ಒಂದಲ್ಲ ಒಂದು ರೀತಿಯಲ್ಲಿ ನಮ್ಮ ಕೈ ಹಿಡಿಯುತ್ತಾಳೆ. ಆದ್ದರಿಂದ ಯಾರೂ ಕೃಷಿಯ ಕುರಿತು ಬೇಸರ ಹೊಂದಬಾರದು. ಈಗಿನ ತಂತ್ರಜ್ಞಾನವನ್ನು ಬಳಸಿಕೊಂಡು ಮತ್ತು ಯಾವ ಸಮಯದಲ್ಲಿ ಯಾವ ಬೆಳೆ ಬೆಳೆಯಬೇಕು ಎಂಬುದನ್ನು ಅರಿತು ಕೃಷಿ ಮಾಡಿದರೆ ಲಾಭ ಕಟ್ಟಿಟ್ಟ ಬುತ್ತಿ ಎಂದು ಪ್ರಗತಿಪರ ರೈತ ನಂದೀಶ್ ಹೇಳುತ್ತಾರೆ.

೧೦೦ ಕ್ವಿಂಟಾಲ್ ಸೂರ್ಯಕಾಂತಿ ಬೆಳೆದ ರೈತ: ಕಳೆದ ವರ್ಷ ತಮ್ಮ ಜಮೀನಿನಲ್ಲಿ ೧೦೦ ಕ್ವಿಂಟಾಲ್ ಸೂರ್ಯಕಾಂತಿ ಬೆಳೆದು ಲಕ್ಷಾಂತರ ರೂ. ಸಂಪಾದಿಸಿದ್ದರು. ಅಲ್ಲದೆ ತಾಲ್ಲೂಕಿನಲ್ಲಿ ಸೂರ್ಯಕಾಂತಿ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯುವಂತೆ ಒತ್ತಾಯಿಸಿದ್ದರು.

ಕಳೆದ ಒಂದೂವರೆ ವರ್ಷದಲ್ಲಿ ಏಲಕ್ಕಿ, ನೇಂದ್ರ, ಪಚ್ಚಬಾಳೆ ಹಾಕಿ ಸುಮಾರು ೩೦ ಲಕ್ಷ ರೂ.ಗಳಿಗೂ ಹೆಚ್ಚು ಹಣವನ್ನು ಗಳಿಸಿದ್ದಾರೆ. ಜೊತೆಗೆ ಕಲ್ಲಂಗಡಿ, ಬೀಟ್ರೂಟ್, ಸಾಂಬಾರ್ ಸೌತೆ, ಈರುಳ್ಳಿಯಿಂದ ಲಕ್ಷಾಂತರ ರೂ. ಸಂಪಾದಿಸಿದ್ದಾರೆ. ಜತೆಗೆ ಈ ವರ್ಷ ಜಮೀನಿನಲ್ಲಿ ೨೫೦ ಕ್ವಿಂಟಾಲ್ ಅರಿಶಿನ ಬೆಳೆದು, ಲಕ್ಷಾಂತರ ರೂ. ಸಂಪಾದಿಸಿದ್ದಾರೆ.

” ಕೃಷಿ ಮತ್ತು ತೋಟಗಾರಿಕೆಗಳ ಸಬ್ಸಿಡಿಗಳನ್ನು ಸಣ್ಣ ರೈತರಿಗೆ ಮಾತ್ರ ನೀಡುತ್ತಾರೆ. ದೊಡ್ಡಮಟ್ಟದಲ್ಲೂ ಕೃಷಿ ಮಾಡುವ ರೈತರಿಗೆ ಸಬ್ಸಿಡಿ ನೀಡಬೇಕು. ಅಲ್ಲದೆ ಪ್ರಗತಿಪರ ರೈತರ ಬೆಳವಣಿಗೆಗೆ ಸರ್ಕಾರಗಳ ಸಹಕಾರ ಅಗತ್ಯ. ಸರಿಯಾದ ಬೆಲೆ ಸಿಕ್ಕರೆ ರೈತನಿಗೆ ಸರಿಸಾಟಿ ಯಾರೂ ಇಲ್ಲ.”

-ಎಚ್.ಎಂ.ನಂದೀಶ್, ಪ್ರಗತಿಪರ ರೈತ

 

 

ಆಂದೋಲನ ಡೆಸ್ಕ್

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

2 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

2 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

3 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

6 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

6 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

6 hours ago