Andolana originals

ನಾಗರಹೊಳೆಗೆ ಸ್ತ್ರೀ ಸಂರಕ್ಷಕಿ

ಅರಣ್ಯ, ಕಾಡುಪ್ರಾಣಿಗಳ ಸಂರಕ್ಷಣೆ ಎಂಬುದು ಅಷ್ಟು ಸುಲಭದ ಕೆಲಸವಲ್ಲ. ಸಾಕಷ್ಟು ಸವಾಲುಗಳಿರುತ್ತವೆ. ಸ್ಥಳೀಯ ಜನರ ವಿಶ್ವಾಸ ಗಳಿಸುವುದಲ್ಲದೆ, ಅರಣ್ಯ ಪ್ರದೇಶದ ಇಂಚಿಂಚೂ ಭೂಮಿಯನ್ನು ಕಾಪಾಡಬೇಕು. ಇಂತಹ ಕ್ಲಿಷ್ಟಕರವಾದ ಜವಾಬ್ದಾರಿಯನ್ನು ಮಹಿಳಾ ಅಧಿಕಾರಿಗಳು ಸಮರ್ಥವಾಗಿ ನಿಭಾಯಿಸಬಹುದು ಎಂಬುದನ್ನು ಸಾಧಿಸಿದ್ದಾರೆ ಉಪ ಅರಣ್ಯ ಸಂರಕ್ಷಕರಾದ ಸೀಮಾ.

ಪ್ರತಿ ಕ್ಷೇತ್ರದಲ್ಲಿಯೂ ಮಹಿಳೆಯರು ಯಶಸ್ವಿಯಾಗುತ್ತಾರೆ ಎಂಬುದಕ್ಕೆ ಸೀಮಾರವರೇ ಉದಾಹರಣೆ. ಹೆಚ್ಚು ಹುಲಿಗಳು, ಆನೆಗಳ ಪ್ರಮುಖ ತಾಣವಾಗಿರುವ 7 ಅಪಾರ ವನ್ಯ ಸಂಪತ್ತನ್ನು ತನ್ನ ಒಡಲಲ್ಲಿಟ್ಟುಕೊಂಡು ಪೋಷಿಸುತ್ತಿರುವ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಮೊದಲ ಮಹಿಳಾ ನಿರ್ದೇಶಕರಾಗಿ ಐಎಫ್‌ಎಸ್ ಅಧಿಕಾರಿ ಪಿ.ಎ.ಸೀಮಾ ಅಧಿಕಾರ ವಹಿಸಿಕೊಂಡಿರುವುದು ಅರಣ್ಯ ಸಂರಕ್ಷಣೆಯ ವಿಷಯದಲ್ಲಿಯೂ ಮಹಿಳೆಯರು ಮೇಲುಗೈ ಸಾಧಿಸಿದಂತಾಗಿದೆ.

ರಾಜ್ಯದ ಅರಣ್ಯ ಇಲಾಖೆಯಲ್ಲಿ ಐಎಫ್‌ಎಸ್ ಬಡ್ತಿ ಪಡೆದ ಹಲವು ಮಹಿಳಾ ಅಧಿಕಾರಿಗಳಿಗೆ ಸಾಮಾನ್ಯ ವಿಭಾಗಗಳು ಇಲ್ಲವೆ ಸಾಮಾಜಿಕ ಆರಣ್ಯಕ್ಕೆ ನಿಯೋಜನೆ ಮಾಡಲಾಗುತ್ತಿತ್ತು. ರಾಷ್ಟ್ರೀಯ ಉದ್ಯಾನ, ಹುಲಿ ಯೋಜನೆಗಳ ನಿರ್ದೇಶಕರು ಹಾಗೂ ಮುಖ್ಯಸ್ಥರ ಹುದ್ದೆಗಳಲ್ಲಿ ಪುರುಷ ಅಧಿಕಾರಿಗಳೇ ಹೆಚ್ಚಾಗಿದ್ದರು. ಆದರೆ ಇದೀಗ ಮಹಿಳಾ ಅಧಿಕಾರಿಯಾಗಿ ಸೀಮಾ ನಾಗರಹೊಳೆಗೆ ನೇಮಕವಾಗಿರುವುದು ಇತಿಹಾಸ ಬರೆದಂತಾಗಿದೆ.

ಕರ್ನಾಟಕದಲ್ಲಿ ಕಾಡಾನೆ ಮತ್ತು ಮಾನವ ಸಂಘರ್ಷವನ್ನು ತಪ್ಪಿಸಲು ಮೊದಲ ಬಾರಿಗೆ ‘ಆನೆ ಕಾವಲು ಪಡೆ’ಯನ್ನು ರಚಿಸಿದಾಗ ನಾಗರಹೊಳೆ ವಿಭಾಗದ ಆನೆ ಕಾವಲು ಪಡೆಯ ಮುಖ್ಯಸ್ಥರಾಗಿ ಪಿ.ಎ.ಸೀಮಾ ನೇಮಕಗೊಂಡು ಯಶಸ್ವಿಯಾಗಿ ನಿಭಾಯಿಸಿದ್ದರು. ಮೂಲತಃ ಕೊಡಗಿನವರಾದ ಸೀಮಾ ಒಂದೂವರೆ ದಶಕದಿಂದ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಮಂಡ್ಯ, ಮೈಸೂರು, ಹುಣಸೂರು ವಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ಅನೇಕ ಆನೆ, ಚಿರತೆ, ಹುಲಿ ಸೆರೆಯ ಕಾರ್ಯಾಚರಣೆಗಳಲ್ಲಿ ಭಾಗವಹಿಸಿ ಅವುಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ.

ಸಾಲುಸಾಲು ಜವಾಬ್ದಾರಿಗಳ ಇವರ ಮುಂದಿವೆ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿಯೂ ಸಾಕಷ್ಟು ಸವಾಲುಗಳಿವೆ. ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಹಂಚಿರುವ ಈ ಹು ರಕ್ಷಿತ ಪ್ರದೇಶ ಕೇರಳದವರೆಗೂ ವಿಸ್ತರಿಸಿಹೆ. ಇಲ್ಲಿ ಕಳ್ಳಬೇಟೆ, ಹುಲಿ, ಆನೆಗಳು ಕಾಡಿನಿಂದ ಹೊರಬಂದು ಮಾನವನೊಂದಿಗೆ ಸಂಘರ್ಷಕ್ಕಿಳಿಯುತ್ತವೆ. ಈ ವೇಳೆ ಅದನ್ನು ನಿಭಾಯಿಸಿ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರಾಣಿಗಳನ್ನು ಸಂರಕ್ಷಿಸುವುದು ಅವರ ಜವಾಬ್ದಾರಿಗಳು. ಅಲ್ಲದೆ ಕಾಡುಪ್ರಾಣಿಗಳ ಹಾವಳಿಯಿಂದ ರೈತರ ಬೆಳೆ ನಷ್ಟವಾದಗಲೂ ಅವರೊಂದಿಗೆ ಮಾತುಕತೆ ನಡೆಸಿ ಪರಿಹಾರ ಕೊಡಿಸಬೇಕಿದೆ.

ಹುಲಿ ಯೋಜನೆಯ ಮೊದಲ ಮಹಿಳಾ ನಿರ್ದೇಶಕಿ: ಪುನರ್ವಸತಿ, ಆನೆ ಶಿಬಿರಗಳಲ್ಲಿ ಸಾಕಾನೆಗಳ ಸಾಲು ಸಾಲು ಸಾವು, ಇವೆಲ್ಲ ಘಟನೆಗಳು ನಾಗರಹೊಳೆಯನ್ನು ಸವಾಲುಗಳ ಗೂಡಾಗಿಸಿದೆ. ಈ ಸವಾಲಿನ ಗೂಡಿಗೆ ಮಹಿಳಾ ದಕ್ಷ ಅಧಿಕಾರಿಯಾಗಿ ಮೊದಲ ನಿರ್ದೇಶಕರಾಗಿ ಪಿ.ಎ.ಸೀಮಾ ಅಧಿಕಾರ ವಹಿಸಿಕೊಂಡಿದ್ದಾರೆ. ಹಿಂದೆ ನಾಗರಹೊಳೆಯಲ್ಲಿ ಮಾಲತಿಪ್ರಿಯಾ, ಆನುಷಾ ಮತ್ತಿತರರು ಎಸಿಎಫ್‌ಗಳಾಗಿ ಕೆಲಸ ಮಾಡಿದ್ದರೂ ನಿರ್ದೇಶಕರಾಗಿರಲಿಲ್ಲ. ಮೊದಲ ಬಾರಿಗೆ ಸೀಮಾ ಅವರು ಆ ಸ್ಥಾನವನ್ನು ತುಂಬಿದ್ದು, ಸವಾಲುಗಳನ್ನು ಹೇಗೆ ನಿಭಾಯಿಸುತ್ತಾರೋ ಕಾದುನೋಡಬೇಕಿದೆ.

ಕೋಟ್ಸ್‌))

ಅರಣ್ಯ ಇಲಾಖೆ ದೊಡ್ಡ ಜವಾಬ್ದಾರಿ ನೀಡಿದ್ದು, ಅದನ್ನು ನಿಭಾಯಿಸುತ್ತೇನೆ ಎಂಬ ವಿಶ್ವಾಸವಿದೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನದೊಂದಿಗೆ ನಾಗರಹೊಳೆ ಅಧಿಕಾರಿಗಳು, ಸಿಬ್ಬಂದಿ, ಸ್ಥಳೀಯ ಜನರ ಸಹಕಾರದೊಂದಿಗೆ ಸೇವೆ ಸಲ್ಲಿಸುತ್ತೇನೆ.

-ಪಿ.ಎ.ಸೀಮಾ, ಹುಲಿ ಯೋಜನೆ ನಿರ್ದೇಶಕರು, ನಾಗರಹೊಳೆ.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

26 mins ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

10 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

15 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

15 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

15 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

20 hours ago