Andolana originals

ಸಾಂಸ್ಕೃತಿಕ ನಗರಿಯಲ್ಲಿ ಸಂಭ್ರಮದ ಕ್ರಿಸ್ ಮಸ್

ಸಂತ ಫಿಲೋಮಿನಾ ಚರ್ಚ್ ಸೇರಿದಂತೆ ಎಲ್ಲ ಚರ್ಚ್‌ಗಳಲ್ಲೂ ಆಚರಣೆ; ಪರಸ್ಪರ ಶುಭಾಶಯ ವಿನಿಮಯ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕ್ರಿಸ್‌ಮಸ್ ಹಬ್ಬವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಯಿತು. ಕ್ರೈಸ್ತರು ವಿಶೇಷ ಖಾದ್ಯ ತಯಾರಿಸಿ ಸವಿದರು. ಬಗೆ ಬಗೆಯ ಕೇಕ್‌ಗಳನ್ನು ತಯಾರಿಸಿ ಹಂಚಿದರು.

ಐತಿಹಾಸಿಕ ಸಂತ ಫಿಲೋಮಿನಾ ಚರ್ಚ್ ಸೇರಿ ದಂತೆ ನಗರದ ಎಲ್ಲ ಚರ್ಚ್‌ಗಳಲ್ಲಿ ಯೇಸುವಿನ ಸ್ಮರಣೆ ಮಾಡಲಾಯಿತು. ಮಾಗಿಯ ಚಳಿಯಲ್ಲೂ ಕ್ರೈಸ್ತರು ಮಂಗಳವಾರ ಮಧ್ಯರಾತ್ರಿ ಚರ್ಚ್‌ಗಳಿಗೆ ತೆರಳಿ ತಮ್ಮ ಆರಾಧ್ಯ ದೈವ ಯೇಸುವಿಗೆ ಪ್ರಾರ್ಥನೆ ಸಲ್ಲಿಸಿದರು.

ಬುಧವಾರ ಮಧ್ಯರಾತ್ರಿ ೧೨ ಗಂಟೆ(ಡಿ. ೨೫)ಗೆ ಕ್ರೈಸ್ತ ಸಮುದಾಯದವರೊಟ್ಟಿಗೆ ಅನ್ಯ ಧರ್ಮೀ ಯರೂ ಚರ್ಚ್‌ಗೆ ಭೇಟಿ ನೀಡಿ ಕ್ರಿಸ್‌ಮಸ್ ಆಚರ ಣೆಯಲ್ಲಿ ಭಾಗಿಯಾಗುವ ಮೂಲಕ ಸಾಮರಸ್ಯ ಮೆರೆದರು. ಹೂವು-ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿರುವ ಚರ್ಚ್‌ನ ಸೊಬಗನ್ನು ಕಣ್ತುಂಬಿಕೊಂಡರು. ಮಧ್ಯರಾತ್ರಿ ೧೨ ಗಂಟೆಗೆ ಶ್ವೇತ ವಸ್ತ್ರಧಾರಿ ಮೈಸೂರು ಪ್ರಾಂತ್ಯದ ಡಾ. ಬರ್ನಾರ್ಡ್ ಮೊರಾಸ್ ಅವರು ಚರ್ಚ್‌ನ ಪರಿವಾರ, ಛತ್ರಿ ಚಾಮರಗಳ ಹಿಮ್ಮೇಳ ಸಹಿತ ಮೆರವಣಿಗೆಯೊಂದಿಗೆ ಬಾಲ ಯೇಸುವಿನ ಪುಟ್ಟ ಮೂರ್ತಿಯನ್ನು ತಂದು ಗೋದಲಿಯಲ್ಲಿ ಮಲಗಿಸಿ, ನಮಿಸುತ್ತಿದ್ದಂತೆ ಕ್ರಿಸ್ ಮಸ್ ಸಂಭ್ರಮ ಇಮ್ಮಡಿಗೊಂಡಿತು. ಬಾಲ ಯೇಸುವನ್ನು ಹೊತ್ತು ತರುವ ಸಂದರ್ಭದಲ್ಲಿ ಮಾರ್ಗದ ಇಕ್ಕೆಲಗಳಲ್ಲಿ ನೆರೆದಿದ್ದವರು ದೇವರ ಪಾದ ಮುಟ್ಟಿ ನಮಸ್ಕರಿಸಿದರು.

ಎಲ್ಲೆಡೆ ಅರ್ಥ ಪೂರ್ಣ ಆಚರಣೆ
ಕ್ರೈಸ್ತ ಸಮುದಾಯದವರು ಚರ್ಚ್‌ಗಳ ಜತೆಗೆ ತಮ್ಮ ಮನೆಗಳನ್ನೂ ಸಿಂಗರಿಸಿಕೊಂಡು ಯೇಸುವಿನ ಜಪ ಮಾಡಿದರು. ಶಾಂತಿ, ಪ್ರೀತಿ, ಸಹನೆ, ಕ್ಷಮೆಯನ್ನು ಸಾರಿದ ಯೇಸು, ಎಲ್ಲರ ಮನೆ-ಮನಗಳನ್ನು ಬೆಳಗಲಿ ಎಂದು ನಕ್ಷತ್ರ ಪ್ರತಿಕೃತಿಗಳನ್ನು ತಮ್ಮ ಮನೆಗಳ ಮುಂದೆ ಅಳವಡಿಸಿದ್ದರು. ಹೊಸ ಉಡುಪುಗಳನ್ನು ಧರಿಸಿ ಸಿಹಿ ಹಂಚಿ, ಶುಭಾಶಯ ವಿನಿಮಯ ಮಾಡಿಕೊಂಡರು.

ನಗರದ ವಿವಿಧೆಡೆ ಆಚರಣೆ
ನಗರದ ಬೆಂಗಳೂರು-ಮೈಸೂರು ರಸ್ತೆಯ ವೆಸ್ಲಿ ಚರ್ಚ್, ಸಂತ ಬಾರ್ಥ ಲೋಮಿಯೋ ಚರ್ಚ್, ಹಿನಕಲ್‌ನ ಇನ್‌ಫ್ಯಾಂಟ್ ಜೀಸಸ್ ಚರ್ಚ್, ಲಕ್ಷ್ಮಿಪುರಂನ ಹಾರ್ಡ್ವಿಕ್ ಚರ್ಚ್, ರಾಮಕೃಷ್ಣ ನಗರದ ಯೇಸು ಕೃಪಾ ಲಯ ಚರ್ಚ್ ಸೇರಿದಂತೆ ನಗರದ ಎಲ್ಲ ಕ್ರೈಸ್ತ ದೇವಾಲಯಗಳು ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದ್ದು, ಎಲ್ಲೆಡೆ ಸಡಗರ ಹೆಚ್ಚಿತ್ತು. ಎಲ್ಲ ಕ್ರೈಸ್ತ ದೇವಾಲಯಗಳಲ್ಲಿ ಯೇಸು ಸ್ಮರಣೆ ಮಾಡಲಾಯಿತು.

 

AddThis Website Tools
ಆಂದೋಲನ ಡೆಸ್ಕ್

Recent Posts

ಕೊಳ್ಳೇಗಾಲ| ಮಾವನಿಂದ ದೈಹಿಕ ಕಿರುಕುಳ ಆರೋಪ: ಸೊಸೆ ಆತ್ಮಹತ್ಯೆ?

ಕೊಳ್ಳೇಗಾಲ: ಮಾವನಿಂದ ದೈಹಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಸೊಸೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ…

7 mins ago

ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌: ಸರ್ಕಾರಿ ವಾಹನದಲ್ಲೇ ಚಿನ್ನ ಸಾಗಾಟ?

ಬೆಂಗಳೂರು: ನಟಿ ರನ್ಯಾರಾವ್‌ ಅವರನ್ನು ಗೋಲ್ಟ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದಾರೆ. ಈ ತನಿಖೆಯಲ್ಲಿ ದುಬೈನಿಂದ ಅಕ್ರಮವಾಗಿ ತಂದ…

9 mins ago

ಎಚ್.ಡಿ.ಕೋಟೆ: ಜಿಂಕೆ ಬೇಟೆಯಾಡಿದ ಹುಲಿ

ಎಚ್.ಡಿ.ಕೋಟೆ: ಹುಲಿಯೊಂದು ಜಿಂಕೆಯನ್ನು ಬೇಟೆಯಾಡಿರುವ ಅಪರೂಪದ ದೃಶ್ಯ ಪ್ರವಾಸಿಗರ ಕ್ಯಾಮರಾ ಕಣ್ಣಿಗೆ ಸೆರೆಯಾಗಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಕಾಕನಕೋಟೆ ಸಫಾರಿ ವೇಳೆ…

23 mins ago

ಅಪಘಾತದಲ್ಲಿ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ: ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಶಿಫ್ಟ್‌

ದಾವಣಗೆರೆ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ವಿಧಾನಸಭೆ ಉಪಸ್ಪೀಕರ್‌ ರುದ್ರಪ್ಪ ಲಮಾಣಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲು…

53 mins ago

ಕೆನಡಾ ನೂತನ ಪ್ರಧಾನಿಯಾಗಿ ಮಾರ್ಕ್‌ ಕಾರ್ನಿ ಪ್ರಮಾಣ ವಚನ ಸ್ವೀಕಾರ

ಒಟ್ಟಾವಾ: ಕೆನಡಾದ ನೂತನ ಪ್ರಧಾನಿಯಾಗಿ ಮಾರ್ಕ್‌ ಕಾರ್ನಿ ಶುಕ್ರವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇದಕ್ಕೂ ಮೊದಲು ಮಾರ್ಕ್‌ ಕಾರ್ನಿ ಬ್ಯಾಂಕ್‌…

1 hour ago

ಬಹುಭಾಷಾ ಪಂಡಿತ ಪಂಚಾಕ್ಷರಿ ಹಿರೇಮಠ ನಿಧನ

ಕೊಪ್ಪಳ: ಹೈದರಾಬಾದ್‌ ಕರ್ನಾಟಕ ವಿಮೋಚನಾ ಹೋರಾಟಗಾರ ಹಾಗೂ ಬಹುಭಾಷಾ ಪಂಡಿತ ಡಾ.ಪಂಚಾಕ್ಷರಿ ಹಿರೇಮಠ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.…

1 hour ago