Andolana originals

ಸಾಂಸ್ಕೃತಿಕ ನಗರಿಯಲ್ಲಿ ಸಂಭ್ರಮದ ಕ್ರಿಸ್ ಮಸ್

ಸಂತ ಫಿಲೋಮಿನಾ ಚರ್ಚ್ ಸೇರಿದಂತೆ ಎಲ್ಲ ಚರ್ಚ್‌ಗಳಲ್ಲೂ ಆಚರಣೆ; ಪರಸ್ಪರ ಶುಭಾಶಯ ವಿನಿಮಯ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕ್ರಿಸ್‌ಮಸ್ ಹಬ್ಬವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಯಿತು. ಕ್ರೈಸ್ತರು ವಿಶೇಷ ಖಾದ್ಯ ತಯಾರಿಸಿ ಸವಿದರು. ಬಗೆ ಬಗೆಯ ಕೇಕ್‌ಗಳನ್ನು ತಯಾರಿಸಿ ಹಂಚಿದರು.

ಐತಿಹಾಸಿಕ ಸಂತ ಫಿಲೋಮಿನಾ ಚರ್ಚ್ ಸೇರಿ ದಂತೆ ನಗರದ ಎಲ್ಲ ಚರ್ಚ್‌ಗಳಲ್ಲಿ ಯೇಸುವಿನ ಸ್ಮರಣೆ ಮಾಡಲಾಯಿತು. ಮಾಗಿಯ ಚಳಿಯಲ್ಲೂ ಕ್ರೈಸ್ತರು ಮಂಗಳವಾರ ಮಧ್ಯರಾತ್ರಿ ಚರ್ಚ್‌ಗಳಿಗೆ ತೆರಳಿ ತಮ್ಮ ಆರಾಧ್ಯ ದೈವ ಯೇಸುವಿಗೆ ಪ್ರಾರ್ಥನೆ ಸಲ್ಲಿಸಿದರು.

ಬುಧವಾರ ಮಧ್ಯರಾತ್ರಿ ೧೨ ಗಂಟೆ(ಡಿ. ೨೫)ಗೆ ಕ್ರೈಸ್ತ ಸಮುದಾಯದವರೊಟ್ಟಿಗೆ ಅನ್ಯ ಧರ್ಮೀ ಯರೂ ಚರ್ಚ್‌ಗೆ ಭೇಟಿ ನೀಡಿ ಕ್ರಿಸ್‌ಮಸ್ ಆಚರ ಣೆಯಲ್ಲಿ ಭಾಗಿಯಾಗುವ ಮೂಲಕ ಸಾಮರಸ್ಯ ಮೆರೆದರು. ಹೂವು-ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿರುವ ಚರ್ಚ್‌ನ ಸೊಬಗನ್ನು ಕಣ್ತುಂಬಿಕೊಂಡರು. ಮಧ್ಯರಾತ್ರಿ ೧೨ ಗಂಟೆಗೆ ಶ್ವೇತ ವಸ್ತ್ರಧಾರಿ ಮೈಸೂರು ಪ್ರಾಂತ್ಯದ ಡಾ. ಬರ್ನಾರ್ಡ್ ಮೊರಾಸ್ ಅವರು ಚರ್ಚ್‌ನ ಪರಿವಾರ, ಛತ್ರಿ ಚಾಮರಗಳ ಹಿಮ್ಮೇಳ ಸಹಿತ ಮೆರವಣಿಗೆಯೊಂದಿಗೆ ಬಾಲ ಯೇಸುವಿನ ಪುಟ್ಟ ಮೂರ್ತಿಯನ್ನು ತಂದು ಗೋದಲಿಯಲ್ಲಿ ಮಲಗಿಸಿ, ನಮಿಸುತ್ತಿದ್ದಂತೆ ಕ್ರಿಸ್ ಮಸ್ ಸಂಭ್ರಮ ಇಮ್ಮಡಿಗೊಂಡಿತು. ಬಾಲ ಯೇಸುವನ್ನು ಹೊತ್ತು ತರುವ ಸಂದರ್ಭದಲ್ಲಿ ಮಾರ್ಗದ ಇಕ್ಕೆಲಗಳಲ್ಲಿ ನೆರೆದಿದ್ದವರು ದೇವರ ಪಾದ ಮುಟ್ಟಿ ನಮಸ್ಕರಿಸಿದರು.

ಎಲ್ಲೆಡೆ ಅರ್ಥ ಪೂರ್ಣ ಆಚರಣೆ
ಕ್ರೈಸ್ತ ಸಮುದಾಯದವರು ಚರ್ಚ್‌ಗಳ ಜತೆಗೆ ತಮ್ಮ ಮನೆಗಳನ್ನೂ ಸಿಂಗರಿಸಿಕೊಂಡು ಯೇಸುವಿನ ಜಪ ಮಾಡಿದರು. ಶಾಂತಿ, ಪ್ರೀತಿ, ಸಹನೆ, ಕ್ಷಮೆಯನ್ನು ಸಾರಿದ ಯೇಸು, ಎಲ್ಲರ ಮನೆ-ಮನಗಳನ್ನು ಬೆಳಗಲಿ ಎಂದು ನಕ್ಷತ್ರ ಪ್ರತಿಕೃತಿಗಳನ್ನು ತಮ್ಮ ಮನೆಗಳ ಮುಂದೆ ಅಳವಡಿಸಿದ್ದರು. ಹೊಸ ಉಡುಪುಗಳನ್ನು ಧರಿಸಿ ಸಿಹಿ ಹಂಚಿ, ಶುಭಾಶಯ ವಿನಿಮಯ ಮಾಡಿಕೊಂಡರು.

ನಗರದ ವಿವಿಧೆಡೆ ಆಚರಣೆ
ನಗರದ ಬೆಂಗಳೂರು-ಮೈಸೂರು ರಸ್ತೆಯ ವೆಸ್ಲಿ ಚರ್ಚ್, ಸಂತ ಬಾರ್ಥ ಲೋಮಿಯೋ ಚರ್ಚ್, ಹಿನಕಲ್‌ನ ಇನ್‌ಫ್ಯಾಂಟ್ ಜೀಸಸ್ ಚರ್ಚ್, ಲಕ್ಷ್ಮಿಪುರಂನ ಹಾರ್ಡ್ವಿಕ್ ಚರ್ಚ್, ರಾಮಕೃಷ್ಣ ನಗರದ ಯೇಸು ಕೃಪಾ ಲಯ ಚರ್ಚ್ ಸೇರಿದಂತೆ ನಗರದ ಎಲ್ಲ ಕ್ರೈಸ್ತ ದೇವಾಲಯಗಳು ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದ್ದು, ಎಲ್ಲೆಡೆ ಸಡಗರ ಹೆಚ್ಚಿತ್ತು. ಎಲ್ಲ ಕ್ರೈಸ್ತ ದೇವಾಲಯಗಳಲ್ಲಿ ಯೇಸು ಸ್ಮರಣೆ ಮಾಡಲಾಯಿತು.

 

ಆಂದೋಲನ ಡೆಸ್ಕ್

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

7 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

7 hours ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

8 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

8 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

8 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

8 hours ago