Andolana originals

ಸಾಂಸ್ಕೃತಿಕ ನಗರಿಯಲ್ಲಿ ಸಂಭ್ರಮದ ಕ್ರಿಸ್ ಮಸ್

ಸಂತ ಫಿಲೋಮಿನಾ ಚರ್ಚ್ ಸೇರಿದಂತೆ ಎಲ್ಲ ಚರ್ಚ್‌ಗಳಲ್ಲೂ ಆಚರಣೆ; ಪರಸ್ಪರ ಶುಭಾಶಯ ವಿನಿಮಯ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕ್ರಿಸ್‌ಮಸ್ ಹಬ್ಬವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಯಿತು. ಕ್ರೈಸ್ತರು ವಿಶೇಷ ಖಾದ್ಯ ತಯಾರಿಸಿ ಸವಿದರು. ಬಗೆ ಬಗೆಯ ಕೇಕ್‌ಗಳನ್ನು ತಯಾರಿಸಿ ಹಂಚಿದರು.

ಐತಿಹಾಸಿಕ ಸಂತ ಫಿಲೋಮಿನಾ ಚರ್ಚ್ ಸೇರಿ ದಂತೆ ನಗರದ ಎಲ್ಲ ಚರ್ಚ್‌ಗಳಲ್ಲಿ ಯೇಸುವಿನ ಸ್ಮರಣೆ ಮಾಡಲಾಯಿತು. ಮಾಗಿಯ ಚಳಿಯಲ್ಲೂ ಕ್ರೈಸ್ತರು ಮಂಗಳವಾರ ಮಧ್ಯರಾತ್ರಿ ಚರ್ಚ್‌ಗಳಿಗೆ ತೆರಳಿ ತಮ್ಮ ಆರಾಧ್ಯ ದೈವ ಯೇಸುವಿಗೆ ಪ್ರಾರ್ಥನೆ ಸಲ್ಲಿಸಿದರು.

ಬುಧವಾರ ಮಧ್ಯರಾತ್ರಿ ೧೨ ಗಂಟೆ(ಡಿ. ೨೫)ಗೆ ಕ್ರೈಸ್ತ ಸಮುದಾಯದವರೊಟ್ಟಿಗೆ ಅನ್ಯ ಧರ್ಮೀ ಯರೂ ಚರ್ಚ್‌ಗೆ ಭೇಟಿ ನೀಡಿ ಕ್ರಿಸ್‌ಮಸ್ ಆಚರ ಣೆಯಲ್ಲಿ ಭಾಗಿಯಾಗುವ ಮೂಲಕ ಸಾಮರಸ್ಯ ಮೆರೆದರು. ಹೂವು-ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿರುವ ಚರ್ಚ್‌ನ ಸೊಬಗನ್ನು ಕಣ್ತುಂಬಿಕೊಂಡರು. ಮಧ್ಯರಾತ್ರಿ ೧೨ ಗಂಟೆಗೆ ಶ್ವೇತ ವಸ್ತ್ರಧಾರಿ ಮೈಸೂರು ಪ್ರಾಂತ್ಯದ ಡಾ. ಬರ್ನಾರ್ಡ್ ಮೊರಾಸ್ ಅವರು ಚರ್ಚ್‌ನ ಪರಿವಾರ, ಛತ್ರಿ ಚಾಮರಗಳ ಹಿಮ್ಮೇಳ ಸಹಿತ ಮೆರವಣಿಗೆಯೊಂದಿಗೆ ಬಾಲ ಯೇಸುವಿನ ಪುಟ್ಟ ಮೂರ್ತಿಯನ್ನು ತಂದು ಗೋದಲಿಯಲ್ಲಿ ಮಲಗಿಸಿ, ನಮಿಸುತ್ತಿದ್ದಂತೆ ಕ್ರಿಸ್ ಮಸ್ ಸಂಭ್ರಮ ಇಮ್ಮಡಿಗೊಂಡಿತು. ಬಾಲ ಯೇಸುವನ್ನು ಹೊತ್ತು ತರುವ ಸಂದರ್ಭದಲ್ಲಿ ಮಾರ್ಗದ ಇಕ್ಕೆಲಗಳಲ್ಲಿ ನೆರೆದಿದ್ದವರು ದೇವರ ಪಾದ ಮುಟ್ಟಿ ನಮಸ್ಕರಿಸಿದರು.

ಎಲ್ಲೆಡೆ ಅರ್ಥ ಪೂರ್ಣ ಆಚರಣೆ
ಕ್ರೈಸ್ತ ಸಮುದಾಯದವರು ಚರ್ಚ್‌ಗಳ ಜತೆಗೆ ತಮ್ಮ ಮನೆಗಳನ್ನೂ ಸಿಂಗರಿಸಿಕೊಂಡು ಯೇಸುವಿನ ಜಪ ಮಾಡಿದರು. ಶಾಂತಿ, ಪ್ರೀತಿ, ಸಹನೆ, ಕ್ಷಮೆಯನ್ನು ಸಾರಿದ ಯೇಸು, ಎಲ್ಲರ ಮನೆ-ಮನಗಳನ್ನು ಬೆಳಗಲಿ ಎಂದು ನಕ್ಷತ್ರ ಪ್ರತಿಕೃತಿಗಳನ್ನು ತಮ್ಮ ಮನೆಗಳ ಮುಂದೆ ಅಳವಡಿಸಿದ್ದರು. ಹೊಸ ಉಡುಪುಗಳನ್ನು ಧರಿಸಿ ಸಿಹಿ ಹಂಚಿ, ಶುಭಾಶಯ ವಿನಿಮಯ ಮಾಡಿಕೊಂಡರು.

ನಗರದ ವಿವಿಧೆಡೆ ಆಚರಣೆ
ನಗರದ ಬೆಂಗಳೂರು-ಮೈಸೂರು ರಸ್ತೆಯ ವೆಸ್ಲಿ ಚರ್ಚ್, ಸಂತ ಬಾರ್ಥ ಲೋಮಿಯೋ ಚರ್ಚ್, ಹಿನಕಲ್‌ನ ಇನ್‌ಫ್ಯಾಂಟ್ ಜೀಸಸ್ ಚರ್ಚ್, ಲಕ್ಷ್ಮಿಪುರಂನ ಹಾರ್ಡ್ವಿಕ್ ಚರ್ಚ್, ರಾಮಕೃಷ್ಣ ನಗರದ ಯೇಸು ಕೃಪಾ ಲಯ ಚರ್ಚ್ ಸೇರಿದಂತೆ ನಗರದ ಎಲ್ಲ ಕ್ರೈಸ್ತ ದೇವಾಲಯಗಳು ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದ್ದು, ಎಲ್ಲೆಡೆ ಸಡಗರ ಹೆಚ್ಚಿತ್ತು. ಎಲ್ಲ ಕ್ರೈಸ್ತ ದೇವಾಲಯಗಳಲ್ಲಿ ಯೇಸು ಸ್ಮರಣೆ ಮಾಡಲಾಯಿತು.

 

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

7 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

8 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

9 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

10 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

10 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

11 hours ago