Andolana originals

ಸಾಂಸ್ಕೃತಿಕ ನಗರಿಯಲ್ಲಿ ಸಂಭ್ರಮದ ಕ್ರಿಸ್ ಮಸ್

ಸಂತ ಫಿಲೋಮಿನಾ ಚರ್ಚ್ ಸೇರಿದಂತೆ ಎಲ್ಲ ಚರ್ಚ್‌ಗಳಲ್ಲೂ ಆಚರಣೆ; ಪರಸ್ಪರ ಶುಭಾಶಯ ವಿನಿಮಯ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕ್ರಿಸ್‌ಮಸ್ ಹಬ್ಬವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಯಿತು. ಕ್ರೈಸ್ತರು ವಿಶೇಷ ಖಾದ್ಯ ತಯಾರಿಸಿ ಸವಿದರು. ಬಗೆ ಬಗೆಯ ಕೇಕ್‌ಗಳನ್ನು ತಯಾರಿಸಿ ಹಂಚಿದರು.

ಐತಿಹಾಸಿಕ ಸಂತ ಫಿಲೋಮಿನಾ ಚರ್ಚ್ ಸೇರಿ ದಂತೆ ನಗರದ ಎಲ್ಲ ಚರ್ಚ್‌ಗಳಲ್ಲಿ ಯೇಸುವಿನ ಸ್ಮರಣೆ ಮಾಡಲಾಯಿತು. ಮಾಗಿಯ ಚಳಿಯಲ್ಲೂ ಕ್ರೈಸ್ತರು ಮಂಗಳವಾರ ಮಧ್ಯರಾತ್ರಿ ಚರ್ಚ್‌ಗಳಿಗೆ ತೆರಳಿ ತಮ್ಮ ಆರಾಧ್ಯ ದೈವ ಯೇಸುವಿಗೆ ಪ್ರಾರ್ಥನೆ ಸಲ್ಲಿಸಿದರು.

ಬುಧವಾರ ಮಧ್ಯರಾತ್ರಿ ೧೨ ಗಂಟೆ(ಡಿ. ೨೫)ಗೆ ಕ್ರೈಸ್ತ ಸಮುದಾಯದವರೊಟ್ಟಿಗೆ ಅನ್ಯ ಧರ್ಮೀ ಯರೂ ಚರ್ಚ್‌ಗೆ ಭೇಟಿ ನೀಡಿ ಕ್ರಿಸ್‌ಮಸ್ ಆಚರ ಣೆಯಲ್ಲಿ ಭಾಗಿಯಾಗುವ ಮೂಲಕ ಸಾಮರಸ್ಯ ಮೆರೆದರು. ಹೂವು-ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿರುವ ಚರ್ಚ್‌ನ ಸೊಬಗನ್ನು ಕಣ್ತುಂಬಿಕೊಂಡರು. ಮಧ್ಯರಾತ್ರಿ ೧೨ ಗಂಟೆಗೆ ಶ್ವೇತ ವಸ್ತ್ರಧಾರಿ ಮೈಸೂರು ಪ್ರಾಂತ್ಯದ ಡಾ. ಬರ್ನಾರ್ಡ್ ಮೊರಾಸ್ ಅವರು ಚರ್ಚ್‌ನ ಪರಿವಾರ, ಛತ್ರಿ ಚಾಮರಗಳ ಹಿಮ್ಮೇಳ ಸಹಿತ ಮೆರವಣಿಗೆಯೊಂದಿಗೆ ಬಾಲ ಯೇಸುವಿನ ಪುಟ್ಟ ಮೂರ್ತಿಯನ್ನು ತಂದು ಗೋದಲಿಯಲ್ಲಿ ಮಲಗಿಸಿ, ನಮಿಸುತ್ತಿದ್ದಂತೆ ಕ್ರಿಸ್ ಮಸ್ ಸಂಭ್ರಮ ಇಮ್ಮಡಿಗೊಂಡಿತು. ಬಾಲ ಯೇಸುವನ್ನು ಹೊತ್ತು ತರುವ ಸಂದರ್ಭದಲ್ಲಿ ಮಾರ್ಗದ ಇಕ್ಕೆಲಗಳಲ್ಲಿ ನೆರೆದಿದ್ದವರು ದೇವರ ಪಾದ ಮುಟ್ಟಿ ನಮಸ್ಕರಿಸಿದರು.

ಎಲ್ಲೆಡೆ ಅರ್ಥ ಪೂರ್ಣ ಆಚರಣೆ
ಕ್ರೈಸ್ತ ಸಮುದಾಯದವರು ಚರ್ಚ್‌ಗಳ ಜತೆಗೆ ತಮ್ಮ ಮನೆಗಳನ್ನೂ ಸಿಂಗರಿಸಿಕೊಂಡು ಯೇಸುವಿನ ಜಪ ಮಾಡಿದರು. ಶಾಂತಿ, ಪ್ರೀತಿ, ಸಹನೆ, ಕ್ಷಮೆಯನ್ನು ಸಾರಿದ ಯೇಸು, ಎಲ್ಲರ ಮನೆ-ಮನಗಳನ್ನು ಬೆಳಗಲಿ ಎಂದು ನಕ್ಷತ್ರ ಪ್ರತಿಕೃತಿಗಳನ್ನು ತಮ್ಮ ಮನೆಗಳ ಮುಂದೆ ಅಳವಡಿಸಿದ್ದರು. ಹೊಸ ಉಡುಪುಗಳನ್ನು ಧರಿಸಿ ಸಿಹಿ ಹಂಚಿ, ಶುಭಾಶಯ ವಿನಿಮಯ ಮಾಡಿಕೊಂಡರು.

ನಗರದ ವಿವಿಧೆಡೆ ಆಚರಣೆ
ನಗರದ ಬೆಂಗಳೂರು-ಮೈಸೂರು ರಸ್ತೆಯ ವೆಸ್ಲಿ ಚರ್ಚ್, ಸಂತ ಬಾರ್ಥ ಲೋಮಿಯೋ ಚರ್ಚ್, ಹಿನಕಲ್‌ನ ಇನ್‌ಫ್ಯಾಂಟ್ ಜೀಸಸ್ ಚರ್ಚ್, ಲಕ್ಷ್ಮಿಪುರಂನ ಹಾರ್ಡ್ವಿಕ್ ಚರ್ಚ್, ರಾಮಕೃಷ್ಣ ನಗರದ ಯೇಸು ಕೃಪಾ ಲಯ ಚರ್ಚ್ ಸೇರಿದಂತೆ ನಗರದ ಎಲ್ಲ ಕ್ರೈಸ್ತ ದೇವಾಲಯಗಳು ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದ್ದು, ಎಲ್ಲೆಡೆ ಸಡಗರ ಹೆಚ್ಚಿತ್ತು. ಎಲ್ಲ ಕ್ರೈಸ್ತ ದೇವಾಲಯಗಳಲ್ಲಿ ಯೇಸು ಸ್ಮರಣೆ ಮಾಡಲಾಯಿತು.

 

ಆಂದೋಲನ ಡೆಸ್ಕ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

1 hour ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

8 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

8 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

8 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

8 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

8 hours ago