Andolana originals

ಉದ್ಯಮಿಯ ಪರಿಶ್ರಮದಿಂದ ಕಾಯಕಲ್ಪ ಪಡೆದ ಉದ್ಯಾನ

ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ ಪಡೆದು ಸಾರ್ವಜನಿಕರ ಉಪಯೋಗಕ್ಕೆ ಸಿದ್ಧವಾಗುತ್ತಿದೆ.

ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನಕ್ಕೆ ಹೊಂದಿಕೊಂಡಂತಿರುವ ಪಟ್ಟಣದ ಏಕೈಕ ಉದ್ಯಾನವನವಾದ ಈ ಪಾರ್ಕ್ ಈ ಹಿಂದೆ ಅರಣ್ಯದಂತೆ ಮರ-ಗಿಡಗಳಿಂದ ಆವೃತವಾಗಿ ನಿರುಪಯುಕ್ತವಾಗಿತ್ತು.

ಇದನ್ನು ನವೀಕರಣ ಮಾಡುವ ಉದ್ದೇಶದಿಂದ ಸಂಸ್ಥೆಯೊಂದು ಮುಂದೆ ಬಂದಿತ್ತಾದರೂ ಅವರಿಗೆ ನಿರ್ವಹಣೆ ಸಾಧ್ಯವಾಗಲಿಲ್ಲ. ಹಾಗಾಗಿ ಪಾರ್ಕ್‌ನಲ್ಲಿ ಮತ್ತಷ್ಟು ಗಿಡ ಮರಗಳು, ಮುಳ್ಳು ಗಿಡಗಳು ಬೆಳೆದು ನೋಡಲು ಅರಣ್ಯದಂತೆ ಕಾಣಿಸುತ್ತಿತ್ತು. ಜೊತೆಗೆ ಪಾರ್ಕಿನ ತುಂಬಾ ಹಾವು-ಚೇಳುಗಳ ಓಡಾಟ ಕಂಡು ಬಂದಿತ್ತು. ಬಿಡಾಡಿ ಹಸುಗಳು ಪಾಕ್ ಅನ್ನು ನೆಲೆಯಾಗಿ ಮಾಡಿಕೊಂಡಿದ್ದವು. ಕಳೆಗುಂದಿದ ಪಾರ್ಕ್‌ಗೆ ಕಾಯಕಲ್ಪ ನೀಡಬೇಕೆಂಬ ಉದ್ದೇಶ ಹೊಂದಿದ್ದ ಪಟ್ಟಣದ ಹರೀಶ್ ಮಿಲ್ಟ್ರಿ ಹೋಟೆಲ್ ಮಾಲೀಕರಾದ ಸದಾಶಿವ ಅವರು ತಮ್ಮ ಸ್ವಂತ ಖರ್ಚಿನಲ್ಲಿ ಅರಣ್ಯದಂತೆ ಬೆಳೆದು ನಿಂತಿದ್ದ ಗಿಡಗಂಟಿಗಳನ್ನು ತೆರವುಗೊಳಿಸಿ, ಉದ್ಯಾನವನ್ನು ಅಂದಗೊಳಿಸಿದ್ದಾರೆ.

ಅಲ್ಲದೆ, ಪಾರ್ಕ್‌ನಲ್ಲಿ ವಾಕಿಂಗ್ ಪಾತ್ ನಿರ್ಮಾಣದ ಜೊತೆಗೆ ಅಲಂಕಾರಿಕ ಗಿಡಗಳನ್ನೂ ನೆಡಲಾಗಿದೆ. ಕೆಲ ಗಿಡಗಳ ಸುತ್ತ ಕಾಂಕ್ರೀಟ್ ಹಾಕಿ ಸಾರ್ವಜನಿಕರು ಕೂರಲು ವ್ಯವಸ್ಥೆ ಕಲ್ಪಿಸಲಾಗಿದೆ.

ಸುಂದರವಾದ ಫಲಕಗಳನ್ನು ಅಳವಡಿಸಿ ಪಾರ್ಕಿನ ಅಂದವನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ಅಲ್ಲದೆ ಉದ್ಯಾನಕ್ಕೆ ನೀರಿನ ಸಂಪರ್ಕ ಕಲ್ಪಿಸಿ, ಅಲಂಕಾರಿಕ ಹುಲ್ಲು ಹಾಸನ್ನು ಬೆಳೆಸಲು ಮುಂದಾಗಿದ್ದಾರೆ.

ಪಟ್ಟಣದಲ್ಲಿ ಸಾರ್ವಜನಿಕರಿಗೆ ಉತ್ತಮವಾದ ಯಾವುದೇ ಒಂದು ಪಾರ್ಕ್ ಇಲ್ಲ. ಇರುವ ಪಾರ್ಕ್ ನಿರ್ವಹಣೆ ಯನ್ನೂ ಯಾರೂ ಮಾಡುತ್ತಿಲ್ಲ. ಸಾರ್ವಜನಿಕರು ಸ್ವಲ್ಪ ಮಟ್ಟಿನ ವಿಶ್ರಾಂತಿ ಪಡೆಯಬೇಕೆಂದು ಇಲ್ಲಿಗೆ ಬರುತ್ತಾರೆ.

ಹಾಗಾಗಿ ಪಾರ್ಕ್‌ನ ನವೀಕರಣ ಕಾರ್ಯಕ್ಕೆ ಮುಂದಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸೌಲಭ್ಯಗಳನ್ನು ಒದಗಿಸಿ ಕೊಡಲು ಪ್ರಯತ್ನ ಮಾಡುತ್ತೇನೆ ಎಂದು ಸದಾಶಿವ ಪತ್ರಿಕೆಗೆ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

13 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…

16 hours ago

ಓದುಗರ ಪತ್ರ: ಗ್ರಂಥಪಾಲಕರಿಲ್ಲದ ಗ್ರಂಥಾಲಯಗಳು

ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…

16 hours ago

ಓದುಗರ ಪತ್ರ: ಮುಚ್ಚಿರುವ ಪಿಎಚ್‌ಸಿ ಕೇಂದ್ರ ತೆರೆಯುವುದು ಎಂದು?

ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…

16 hours ago

ಇದು ನಮಿತ್ ಮಲ್ಹೋತ್ರ ‘ರಾಮಾಯಣ’ ದರ್ಶನ

 ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ  ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…

16 hours ago

ಮಡಿಕೇರಿಯಲ್ಲಿ ಬಳಂಜಿಗಿಲ್ಲ ಬೇಡಿಕೆ

ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ  ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…

16 hours ago