Andolana originals

ಉದ್ಯಮಿಯ ಪರಿಶ್ರಮದಿಂದ ಕಾಯಕಲ್ಪ ಪಡೆದ ಉದ್ಯಾನ

ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ ಪಡೆದು ಸಾರ್ವಜನಿಕರ ಉಪಯೋಗಕ್ಕೆ ಸಿದ್ಧವಾಗುತ್ತಿದೆ.

ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನಕ್ಕೆ ಹೊಂದಿಕೊಂಡಂತಿರುವ ಪಟ್ಟಣದ ಏಕೈಕ ಉದ್ಯಾನವನವಾದ ಈ ಪಾರ್ಕ್ ಈ ಹಿಂದೆ ಅರಣ್ಯದಂತೆ ಮರ-ಗಿಡಗಳಿಂದ ಆವೃತವಾಗಿ ನಿರುಪಯುಕ್ತವಾಗಿತ್ತು.

ಇದನ್ನು ನವೀಕರಣ ಮಾಡುವ ಉದ್ದೇಶದಿಂದ ಸಂಸ್ಥೆಯೊಂದು ಮುಂದೆ ಬಂದಿತ್ತಾದರೂ ಅವರಿಗೆ ನಿರ್ವಹಣೆ ಸಾಧ್ಯವಾಗಲಿಲ್ಲ. ಹಾಗಾಗಿ ಪಾರ್ಕ್‌ನಲ್ಲಿ ಮತ್ತಷ್ಟು ಗಿಡ ಮರಗಳು, ಮುಳ್ಳು ಗಿಡಗಳು ಬೆಳೆದು ನೋಡಲು ಅರಣ್ಯದಂತೆ ಕಾಣಿಸುತ್ತಿತ್ತು. ಜೊತೆಗೆ ಪಾರ್ಕಿನ ತುಂಬಾ ಹಾವು-ಚೇಳುಗಳ ಓಡಾಟ ಕಂಡು ಬಂದಿತ್ತು. ಬಿಡಾಡಿ ಹಸುಗಳು ಪಾಕ್ ಅನ್ನು ನೆಲೆಯಾಗಿ ಮಾಡಿಕೊಂಡಿದ್ದವು. ಕಳೆಗುಂದಿದ ಪಾರ್ಕ್‌ಗೆ ಕಾಯಕಲ್ಪ ನೀಡಬೇಕೆಂಬ ಉದ್ದೇಶ ಹೊಂದಿದ್ದ ಪಟ್ಟಣದ ಹರೀಶ್ ಮಿಲ್ಟ್ರಿ ಹೋಟೆಲ್ ಮಾಲೀಕರಾದ ಸದಾಶಿವ ಅವರು ತಮ್ಮ ಸ್ವಂತ ಖರ್ಚಿನಲ್ಲಿ ಅರಣ್ಯದಂತೆ ಬೆಳೆದು ನಿಂತಿದ್ದ ಗಿಡಗಂಟಿಗಳನ್ನು ತೆರವುಗೊಳಿಸಿ, ಉದ್ಯಾನವನ್ನು ಅಂದಗೊಳಿಸಿದ್ದಾರೆ.

ಅಲ್ಲದೆ, ಪಾರ್ಕ್‌ನಲ್ಲಿ ವಾಕಿಂಗ್ ಪಾತ್ ನಿರ್ಮಾಣದ ಜೊತೆಗೆ ಅಲಂಕಾರಿಕ ಗಿಡಗಳನ್ನೂ ನೆಡಲಾಗಿದೆ. ಕೆಲ ಗಿಡಗಳ ಸುತ್ತ ಕಾಂಕ್ರೀಟ್ ಹಾಕಿ ಸಾರ್ವಜನಿಕರು ಕೂರಲು ವ್ಯವಸ್ಥೆ ಕಲ್ಪಿಸಲಾಗಿದೆ.

ಸುಂದರವಾದ ಫಲಕಗಳನ್ನು ಅಳವಡಿಸಿ ಪಾರ್ಕಿನ ಅಂದವನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ಅಲ್ಲದೆ ಉದ್ಯಾನಕ್ಕೆ ನೀರಿನ ಸಂಪರ್ಕ ಕಲ್ಪಿಸಿ, ಅಲಂಕಾರಿಕ ಹುಲ್ಲು ಹಾಸನ್ನು ಬೆಳೆಸಲು ಮುಂದಾಗಿದ್ದಾರೆ.

ಪಟ್ಟಣದಲ್ಲಿ ಸಾರ್ವಜನಿಕರಿಗೆ ಉತ್ತಮವಾದ ಯಾವುದೇ ಒಂದು ಪಾರ್ಕ್ ಇಲ್ಲ. ಇರುವ ಪಾರ್ಕ್ ನಿರ್ವಹಣೆ ಯನ್ನೂ ಯಾರೂ ಮಾಡುತ್ತಿಲ್ಲ. ಸಾರ್ವಜನಿಕರು ಸ್ವಲ್ಪ ಮಟ್ಟಿನ ವಿಶ್ರಾಂತಿ ಪಡೆಯಬೇಕೆಂದು ಇಲ್ಲಿಗೆ ಬರುತ್ತಾರೆ.

ಹಾಗಾಗಿ ಪಾರ್ಕ್‌ನ ನವೀಕರಣ ಕಾರ್ಯಕ್ಕೆ ಮುಂದಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸೌಲಭ್ಯಗಳನ್ನು ಒದಗಿಸಿ ಕೊಡಲು ಪ್ರಯತ್ನ ಮಾಡುತ್ತೇನೆ ಎಂದು ಸದಾಶಿವ ಪತ್ರಿಕೆಗೆ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

45 mins ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

2 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

3 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

8 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

8 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

9 hours ago