Andolana originals

ಕಾವೇರಿ ನದಿಯಲ್ಲಿ ಬರೀ ಬಂಡೆಗಲ್ಲುಗಳ ದರ್ಶನ

ಭೇರ್ಯ ಮಹೇಶ್

ಬಿರುಬಿಸಿಲಿಗೆ ನದಿಯಲ್ಲಿ ಕಡಿಮೆಯಾದ ನೀರಿನ ಹರಿವು; ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ 

ಕೆ.ಆರ್.ನಗರ: ಬಿರುಬಿಸಿಲಿನ ಝಳಕ್ಕೆ ಭತ್ತದ ನಾಡು ಕಾದ ಕಾವಲಿಯಂತಾಗಿದ್ದು, ಕಾವೇರಿ ನದಿಯಲ್ಲಿ ಬಂಡೆಗಲ್ಲುಗಳೇ ಕಾಣಿಸುತ್ತಿವೆ. ಕಾವೇರಿ ನದಿ ನಾಡಿನ ಜೀವನದಿಯಾಗಿದೆ. ಆದರೆ, ಮಳೆ ಕೊರತೆಯಿಂದಾಗಿ ನದಿಯಲ್ಲಿ ನೀರಿನ ಹರಿವು ತೀವ್ರವಾಗಿ ಕ್ಷೀಣಿಸಿದೆ.

ಸಾಲಿಗ್ರಾಮ ತಾಲ್ಲೂಕಿನ ಕರ್ತಾಳು ಗ್ರಾಮದಿಂದ ಆರಂಭವಾಗಿ ಕೆ.ಆರ್. ಎಸ್. ಜಲಾಶಯದವರೆಗೆ ಕಾವೇರಿ ನದಿ ಕಾಲುವೆ ರೀತಿಯಲ್ಲಿ ಸಣ್ಣ ಪ್ರಮಾಣದಲ್ಲಿ ಹರಿಯುತ್ತಿದೆ. ಸಣ್ಣ ಸಣ್ಣ ಹಳ್ಳಗಳು ಬತ್ತಿರುವುದು ಕಾವೇರಿ ನದಿಯ ಹರಿವು ಕ್ಷೀಣಿಸಲು ಕಾರಣವಾಗಿದೆ. ಭತ್ತದ ನಾಡು ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಹರಿ ಯುವ ಜೀವನದಿ ಕಾವೇರಿ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿ ಬರೀ ಕಲ್ಲುಬಂಡೆಗಳೇ ಕಾಣುತ್ತಿವೆ.

ಈಗಾಗಲೇ ಈ ಭಾಗದಲ್ಲಿ ಕುಡಿಯುವ ನೀರಿಗೆ ಪರದಾಡುವ ಸ್ಥಿತಿ ಎದುರಾಗಿದೆ. ಅಲ್ಲದೆ ಬೇಸಿಗೆಯಲ್ಲಿ ಪ್ರಾಣಿ, ಪಕ್ಷಿ ಸಂಕುಲಕ್ಕೆ ಜೀವಜಲ ದೊರಕದಿದ್ದರೆ ಹೇಗೆ? ಎಂಬ ಚಿಂತೆ ಎದುರಾಗಿದೆ. ಜಾನುವಾರುಗಳಿಗೆ ಮತ್ತು ಜನವಸತಿ ಪ್ರದೇಶಕ್ಕೆ ಕುಡಿಯುವ ನೀರು ಪೂರೈಕೆಯಲ್ಲಿ ಸ್ಥಳಿಯ ಸಂಸ್ಥೆಗಳು ಈಗಾಗಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೂ ಮುಂದಿನ ಮೇ ತಿಂಗಳೊಳಗೆ ಮಳೆಯಾಗದಿದ್ದರೆ ಬರ ಮತ್ತು ಬೇಸಿಗೆಯನ್ನು ಹೇಗೆ ಎದುರಿಸಬೇಕೆಂಬುದು ಸಂಬಂಧಪಟ್ಟ ಅಧಿಕಾರಿ ವರ್ಗಕ್ಕೆ ತಲೆನೋವಾಗಿ ಪರಿಣಮಿಸಿದೆ.

ತಾಪಮಾನ ಏರಿಕೆ: ಮಳೆಯ ಅಭಾವ, ನೆತ್ತಿ ಸುಡುವ ಬಿಸಿಲಿನಿಂದ ಭತ್ತದ ನಾಡು ಬಳಲಿದೆ. ಜಾನುವಾರುಗಳು ನೀರು ಹಾಗೂ ಮೇವಿನ ಕೊರತೆ ಎದುರಿಸುತ್ತಿವೆ. ನ್ಯಾನೋ ಬಿಸಿಲಿನಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹೈನುಗಾರಿಕೆ ಮಾಡುವ ರೈತರು ಹಸಿರು ಮೇವುಗಾಗಿ ಪರದಾಡುತ್ತಿದ್ದಾರೆ. ಮೆಕ್ಕೆ ಜೋಳ ಟನ್‌ಗೆ ೩ ಸಾವಿರ ರೂ. ನಿಂದ ಮೂರೂವರೆ ಸಾವಿರ ರೂ. ದಾಟಿದೆ. ಕೆ. ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳ ಕೆಲವು ಗ್ರಾಮಗಳಿಂದ ನೇರವಾಗಿ ಚರಂಡಿಯ ತ್ಯಾಜ್ಯ ನೀರು ಹರಿದು ಕಾವೇರಿ ನದಿಗೆ ಸೇರುತ್ತಿದೆ. ಇದೇ ರೀತಿ ಕೆ.ಆರ್.ನಗರದ ತ್ಯಾಜ್ಯ ನೀರು ಕಾಲುವೆ ಮೂಲಕ ಸೇರುತ್ತಿದ್ದು, ನದಿ ಕಲುಷಿತಗೊಳ್ಳುವ ಆತಂಕ ಎದುರಾಗಿದೆ.

” ಬಿಸಿಲಿನ ಬೇಗೆ ಹೆಚ್ಚಾಗಿದೆ. ಆದಷ್ಟು ಮನೆಯಿಂದ ಹೊರಗೆ ಬರುವುದನ್ನು ಜನರು ಕಡಿಮೆ ಮಾಡಬೇಕು. ಹೊರಗೆ ಹೋಗುವಾಗ ಜೊತೆಯಲ್ಲಿ ಛತ್ರಿ, ಕುಡಿಯುವ ನೀರಿನ ಬಾಟಲ್ ಇರಲಿ, ತಲೆಗೆ ಟೋಪಿ ಧರಿಸಿಕೊಂಡು ಹೋಗ ಬೇಕು. ಬೆಳಿಗ್ಗೆ ಮತ್ತು ಸಂಜೆ ಎರಡು ಬಾರಿ ತಣ್ಣೀರಿನ ಸ್ನಾನ ಮಾಡಬೇಕು, ತೆಳ್ಳಗಿನ ಬಟ್ಟೆ ಧರಿಸಬೇಕು. ಬಿಗಿಯಾದ ಜೀನ್ಸ್ ಪ್ಯಾಂಟ್ ಧರಿಸಬಾರದು. ಮಲುಗುವಾಗ ಸೀಲಿಂಗ್ ಫ್ಯಾನ್ ಉಪಯೋಗಿಸಬೇಕು.”

-ಡಾ.ನಟರಾಜ್, ಎದೆರೋಗ ತಜ್ಞರು

 

 

ಆಂದೋಲನ ಡೆಸ್ಕ್

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

43 mins ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

2 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

3 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

3 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

4 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

6 hours ago