ಭೇರ್ಯ ಮಹೇಶ್
ಬಿರುಬಿಸಿಲಿಗೆ ನದಿಯಲ್ಲಿ ಕಡಿಮೆಯಾದ ನೀರಿನ ಹರಿವು; ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ
ಕೆ.ಆರ್.ನಗರ: ಬಿರುಬಿಸಿಲಿನ ಝಳಕ್ಕೆ ಭತ್ತದ ನಾಡು ಕಾದ ಕಾವಲಿಯಂತಾಗಿದ್ದು, ಕಾವೇರಿ ನದಿಯಲ್ಲಿ ಬಂಡೆಗಲ್ಲುಗಳೇ ಕಾಣಿಸುತ್ತಿವೆ. ಕಾವೇರಿ ನದಿ ನಾಡಿನ ಜೀವನದಿಯಾಗಿದೆ. ಆದರೆ, ಮಳೆ ಕೊರತೆಯಿಂದಾಗಿ ನದಿಯಲ್ಲಿ ನೀರಿನ ಹರಿವು ತೀವ್ರವಾಗಿ ಕ್ಷೀಣಿಸಿದೆ.
ಸಾಲಿಗ್ರಾಮ ತಾಲ್ಲೂಕಿನ ಕರ್ತಾಳು ಗ್ರಾಮದಿಂದ ಆರಂಭವಾಗಿ ಕೆ.ಆರ್. ಎಸ್. ಜಲಾಶಯದವರೆಗೆ ಕಾವೇರಿ ನದಿ ಕಾಲುವೆ ರೀತಿಯಲ್ಲಿ ಸಣ್ಣ ಪ್ರಮಾಣದಲ್ಲಿ ಹರಿಯುತ್ತಿದೆ. ಸಣ್ಣ ಸಣ್ಣ ಹಳ್ಳಗಳು ಬತ್ತಿರುವುದು ಕಾವೇರಿ ನದಿಯ ಹರಿವು ಕ್ಷೀಣಿಸಲು ಕಾರಣವಾಗಿದೆ. ಭತ್ತದ ನಾಡು ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಹರಿ ಯುವ ಜೀವನದಿ ಕಾವೇರಿ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿ ಬರೀ ಕಲ್ಲುಬಂಡೆಗಳೇ ಕಾಣುತ್ತಿವೆ.
ಈಗಾಗಲೇ ಈ ಭಾಗದಲ್ಲಿ ಕುಡಿಯುವ ನೀರಿಗೆ ಪರದಾಡುವ ಸ್ಥಿತಿ ಎದುರಾಗಿದೆ. ಅಲ್ಲದೆ ಬೇಸಿಗೆಯಲ್ಲಿ ಪ್ರಾಣಿ, ಪಕ್ಷಿ ಸಂಕುಲಕ್ಕೆ ಜೀವಜಲ ದೊರಕದಿದ್ದರೆ ಹೇಗೆ? ಎಂಬ ಚಿಂತೆ ಎದುರಾಗಿದೆ. ಜಾನುವಾರುಗಳಿಗೆ ಮತ್ತು ಜನವಸತಿ ಪ್ರದೇಶಕ್ಕೆ ಕುಡಿಯುವ ನೀರು ಪೂರೈಕೆಯಲ್ಲಿ ಸ್ಥಳಿಯ ಸಂಸ್ಥೆಗಳು ಈಗಾಗಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೂ ಮುಂದಿನ ಮೇ ತಿಂಗಳೊಳಗೆ ಮಳೆಯಾಗದಿದ್ದರೆ ಬರ ಮತ್ತು ಬೇಸಿಗೆಯನ್ನು ಹೇಗೆ ಎದುರಿಸಬೇಕೆಂಬುದು ಸಂಬಂಧಪಟ್ಟ ಅಧಿಕಾರಿ ವರ್ಗಕ್ಕೆ ತಲೆನೋವಾಗಿ ಪರಿಣಮಿಸಿದೆ.
ತಾಪಮಾನ ಏರಿಕೆ: ಮಳೆಯ ಅಭಾವ, ನೆತ್ತಿ ಸುಡುವ ಬಿಸಿಲಿನಿಂದ ಭತ್ತದ ನಾಡು ಬಳಲಿದೆ. ಜಾನುವಾರುಗಳು ನೀರು ಹಾಗೂ ಮೇವಿನ ಕೊರತೆ ಎದುರಿಸುತ್ತಿವೆ. ನ್ಯಾನೋ ಬಿಸಿಲಿನಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹೈನುಗಾರಿಕೆ ಮಾಡುವ ರೈತರು ಹಸಿರು ಮೇವುಗಾಗಿ ಪರದಾಡುತ್ತಿದ್ದಾರೆ. ಮೆಕ್ಕೆ ಜೋಳ ಟನ್ಗೆ ೩ ಸಾವಿರ ರೂ. ನಿಂದ ಮೂರೂವರೆ ಸಾವಿರ ರೂ. ದಾಟಿದೆ. ಕೆ. ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳ ಕೆಲವು ಗ್ರಾಮಗಳಿಂದ ನೇರವಾಗಿ ಚರಂಡಿಯ ತ್ಯಾಜ್ಯ ನೀರು ಹರಿದು ಕಾವೇರಿ ನದಿಗೆ ಸೇರುತ್ತಿದೆ. ಇದೇ ರೀತಿ ಕೆ.ಆರ್.ನಗರದ ತ್ಯಾಜ್ಯ ನೀರು ಕಾಲುವೆ ಮೂಲಕ ಸೇರುತ್ತಿದ್ದು, ನದಿ ಕಲುಷಿತಗೊಳ್ಳುವ ಆತಂಕ ಎದುರಾಗಿದೆ.
” ಬಿಸಿಲಿನ ಬೇಗೆ ಹೆಚ್ಚಾಗಿದೆ. ಆದಷ್ಟು ಮನೆಯಿಂದ ಹೊರಗೆ ಬರುವುದನ್ನು ಜನರು ಕಡಿಮೆ ಮಾಡಬೇಕು. ಹೊರಗೆ ಹೋಗುವಾಗ ಜೊತೆಯಲ್ಲಿ ಛತ್ರಿ, ಕುಡಿಯುವ ನೀರಿನ ಬಾಟಲ್ ಇರಲಿ, ತಲೆಗೆ ಟೋಪಿ ಧರಿಸಿಕೊಂಡು ಹೋಗ ಬೇಕು. ಬೆಳಿಗ್ಗೆ ಮತ್ತು ಸಂಜೆ ಎರಡು ಬಾರಿ ತಣ್ಣೀರಿನ ಸ್ನಾನ ಮಾಡಬೇಕು, ತೆಳ್ಳಗಿನ ಬಟ್ಟೆ ಧರಿಸಬೇಕು. ಬಿಗಿಯಾದ ಜೀನ್ಸ್ ಪ್ಯಾಂಟ್ ಧರಿಸಬಾರದು. ಮಲುಗುವಾಗ ಸೀಲಿಂಗ್ ಫ್ಯಾನ್ ಉಪಯೋಗಿಸಬೇಕು.”
-ಡಾ.ನಟರಾಜ್, ಎದೆರೋಗ ತಜ್ಞರು
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…