82 ಅಡಿಗಳಿಗೆ ಕುಸಿತಗೊಂಡಿದ್ದ ಜಲಾಶಯದ ನೀರಿನ ಮಟ್ಟ ಮತ್ತೆ ಗರಿಷ್ಟ ಮಟ್ಟಕ್ಕೆ
ಮಂಜು ಕೋಟೆ
ಎಚ್.ಡಿ.ಕೋಟೆ: ತಾಲ್ಲೂಕು ಮತ್ತು ಕೇರಳದ ವಯನಾಡು ಪ್ರದೇಶದಲ್ಲಿ ಹಿಂಗಾರು ಮಳೆ ಉತ್ತಮವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಲವು ದಶಕಗಳ ನಂತರ ಕಬಿನಿ ಜಲಾಶಯ ಮತ್ತೆ ಭರ್ತಿಯಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕರಾದ ಅನಿಲ್ ಚಿಕ್ಕಮಾದು ನೇತೃತ್ವದಲ್ಲಿ ಎರಡು ತಿಂಗಳ ಹಿಂದೆ ಭರ್ತಿಯಾಗಿದ್ದ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗಿತ್ತು. ಅಂದಿನಿಂದ ಕಳೆದ ಒಂದು ವಾರದವರೆಗೆ ರೈತರ ಜಮೀನುಗಳಿಗೆ ಎಡ ಮತ್ತು ಬಲದಂಡೆ ನಾಲೆಗಳ ಮೂಲಕ 1,600 ಕ್ಯೂಸೆಕ್ಸ್ ನೀರನ್ನು ಹಾಗೂ ಬೆಂಗಳೂರು ಮೈಸೂರು ಇನ್ನಿತರ ಪ್ರದೇಶಗಳಿಗೆ ಕುಡಿಯುವ ನೀರಿಗಾಗಿ 500 ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಗಿತ್ತು. ಹೀಗಾಗಿ ಜಲಾಶಯದ ನೀರಿನ ಮಟ್ಟ 82 ಅಡಿಗಳಿಗೆ ಕುಸಿತಗೊಂಡಿತ್ತು.
ಒಂದು ವಾರದಿಂದ ಜಲಾಶಯದ ಹಿನ್ನೀರಿನ ಪ್ರದೇಶ ಮತ್ತು ವಯನಾಡು ಪ್ರದೇಶದಲ್ಲಿ ಉತ್ತಮ ವಾಗಿ ಹಿಂಗಾರು ಮಳೆ ಆಗುತ್ತಿರುವು ದರಿಂದ ಮೂರೂವರೆ ಸಾವಿರ ಕ್ಯೂಸೆಕ್ಸ್ ಒಳಹರಿವು ಹರಿದುಬರುತ್ತಿದ್ದು, ಕಬಿನಿ ಜಲಾಶಯ ಮತ್ತೆ ತನ್ನ 84 ಅಡಿಗಳ ಗರಿಷ್ಟ ಮಟ್ಟಕ್ಕೆ ತಲುಪಿದೆ.
ಮುಂಗಾರು ಮತ್ತು ಹಿಂಗಾರು ಉತ್ತಮವಾಗಿ ಆಗಿರುವ ಹಿನ್ನೆಲೆಯಲ್ಲಿ ಈ ಬಾರಿ ಜಲಾಶಯದಲ್ಲಿ ನೀರಿನ ಪ್ರಮಾಣ ಭಾರಿ ಪ್ರಮಾಣದಲ್ಲಿ ಕುಸಿತ ಕಾಣುವ ಸನ್ನಿವೇಶ ಗಳಿಲ್ಲವಾಗಿದೆ. ಹೀಗಾಗಿ ಹಿನ್ನೀರಿನಲ್ಲಿರುವ ನಾಗರಹೊಳೆ ಮತ್ತು ಬಂಡೀಪುರದ ವ್ಯಾಪ್ತಿಯ ಅರಣ್ಯ ಪ್ರದೇಶದ ವನ್ಯಜೀವಿಗಳಿಗೆ ನೀರಿನ ಸಮಸ್ಯೆ ಮಳೆ ಎದುರಾಗದಂತಾಗಿದೆ.
ಹಿಂಗಾರು ಮಳೆ ಮತ್ತಷ್ಟು ಹೆಚ್ಚಾದರೆ ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವುದರಿಂದ ಜಲಾಶಯದ ಪ್ರಮುಖ ನಾಲ್ಕು ಗೇಟುಗಳನ್ನು ಮತ್ತೊಮ್ಮೆ ತೆಗೆದು ಒಳಹರಿವಿನ ಪ್ರಮಾಣದಷ್ಟು ನೀರನ್ನು ಹೊರ ಬಿಡುವ ಸಾಧ್ಯತೆ ಇದೆ.
ಜಲಾಶಯ ವ್ಯಾಪ್ತಿಯಲ್ಲಿ ಉತ್ತಮವಾಗಿ ಹಿಂಗಾರು ಮಳೆ ಆಗಿರುವುದರಿಂದ ಕಬಿನಿ ಜಲಾಶಯ ಮತ್ತೆ ಗರಿಷ್ಟ ಮಟ್ಟ ತಲುಪಿದೆ. ಜಲಾಶಯದಿಂದ ಹೊರಬಿಡಲಾಗಿದ್ದ ನೀರು ಮತ್ತೊಮ್ಮೆ ಸಂಗ್ರಹವಾಗಿರುವುದರಿಂದ ಮುಂದಿನ
ಬೇಸಿಗೆಯಲ್ಲಿ ರೈತರ ಜಮೀನುಗಳಿಗೆ ಮತ್ತು ಕುಡಿಯುವ ನೀರಿಗೆ ಸಮಸ್ಯೆಗಳು ಎದುರಾಗುವುದಿಲ್ಲ ಎಂಬ ಭರವಸೆ ಮೂಡಿದೆ.
-ಚಂದ್ರಶೇಖರ್, ಇಇ, ಕಬಿನಿ ಜಲಾಶಯ
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…