Andolana originals

137 ವರ್ಷ ದಾಟಿ ಮುನ್ನಡೆದ ಸರ್ಕಾರಿ ಶಾಲೆ!

ಹೇಮಂತ್ ಕುಮಾರ್

ಮಂಡ್ಯ: ಈ ಸರ್ಕಾರಿ ಶಾಲೆಗೆ ೧೩೭ ವರ್ಷ… ವಿದ್ಯಾರ್ಥಿಗಳ ಸಂಖ್ಯೆ ಮಾತ್ರ ೪೧… ಒಂದು ಕಾಲದಲ್ಲಿ ೫೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳ ಅಕ್ಷರ ಕಲಿಕೆಗೆ ಸಾಕ್ಷಿಯಾಗಿದ್ದ ಶಾಲೆ ಇಂದು ವಿದ್ಯಾರ್ಥಿಗಳ ಬರ ಎದುರಿಸುತ್ತಿದೆ.

ಇದು ಮಂಡ್ಯ ದಕ್ಷಿಣ ವಲಯ ವ್ಯಾಪ್ತಿಯ ಹಳೇ ನಗರದ ಟೌನ್ ಮಿಡ್ಲ್ ಸ್ಕೂಲ್ (ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ) ಸ್ಥಿತಿಗತಿ. ೧೮೮೯ರಲ್ಲಿ ಸ್ಥಾಪನೆಗೊಂಡ ಈ ಶಾಲೆಗೀಗ ೧೩೭ವರ್ಷ. ಇತ್ತೀಚಿನ ವರ್ಷಗಳವರೆಗೆ ತನ್ನದೇ ಆದ ಖದರ್ ಹೊಂದಿದ್ದ ಈ ಶಾಲೆ ಹಳೇ ಮಂಡ್ಯದ ಏಕೈಕ ಶಾಲೆಯಾಗಿದೆ. ವಿಶಾಲವಾದ ಆವರಣ ಹೊಂದಿದ್ದ ಈ ಶಾಲೆ ಬಹಳಷ್ಟು ವರ್ಷಗಳ ಕಾಲ ತಾಲ್ಲೂಕು ಕಚೇರಿಗೂ ಅವಕಾಶ ನೀಡಿತ್ತು. ಇದು ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಾಜಿ ಶಾಸಕ ದಿ.ಎಚ್.ಡಿ.ಚೌಡಯ್ಯ ಸೇರಿದಂತೆ ಅನೇಕ ಗಣ್ಯರು ಓದಿದ ಶಾಲೆ.

೫೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳ ದಾಖಲಾತಿ ಹೊಂದಿದ್ದ ಶಾಲೆಯಲ್ಲೀಗ ೪೧ ವಿದ್ಯಾರ್ಥಿಗಳಷ್ಟೇ ವ್ಯಾಸಂಗ ಮಾಡುತ್ತಿದ್ದಾರೆ. ೧೩ ಕೊಠಡಿಗಳಿವೆ! ಓರ್ವ ಮುಖ್ಯ ಶಿಕ್ಷಕ, ಮೂವರು ಶಿಕ್ಷಕರು ಇರುವ ಈ ಶಾಲೆ ಯಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗಿದೆ. ಇತ್ತೀಚೆಗೆ ಈ ಶಾಲೆಯಲ್ಲಿ ೧ನೇ ತರಗತಿಯಲ್ಲಿ ಇಂಗ್ಲಿಷ್ ಮಾಧ್ಯಮ ಕೂಡ ಆರಂಭವಾಗಿದೆ. ಸದ್ಯ ಸ್ಮಾರ್ಟ್ ಕ್ಲಾಸ್ ಸೌಲಭ್ಯಗಳನ್ನುಆರಂಭಿಸಲಾಗುತ್ತಿದ್ದು, ಟಿವಿ, ಡೆಸ್ಕ್‌ಗಳೂ, ಕುರ್ಚಿಗಳ ವ್ಯವಸ್ಥೆ ಇದೆ. ಆದರೆ ಇನ್ನೂ ಹಲವು ಸೌಲಭ್ಯಗಳ ಅಗತ್ಯವಿದೆ ಎನ್ನುತ್ತಾರೆ ಮುಖ್ಯ ಶಿಕ್ಷಕ ಡಿ.ಕೆ.ನಾಗರಾಜು ಅವರು. ಶಾಲಾವರಣದಲ್ಲಿ ನೆರಳು ನೀಡುವ ಮರಗಳಿದ್ದು, ಮಕ್ಕಳು ಊಟ ಮಾಡಲು ಸೂಕ್ತವಾದ ವಾತಾವರಣವಿದೆ. ಇತ್ತೀಚೆಗೆ ಸುಣ್ಣ ಬಣ್ಣ ಬಳಿದು ಹೊಸ ರೂಪ ನೀಡಲಾಗಿದೆ. ಹಳೆಯ ಹೆಂಚಿನ ಮನೆಯ ಎತ್ತರದ ಶಾಲೆ ಕಟ್ಟಡವು ಇಂದಿಗೂ ಸುಸ್ಥಿತಿಯ ಲ್ಲಿದ್ದು, ಹಿಂಭಾಗದಲ್ಲಿ ಹೆಚ್ಚುವರಿ ಕೊಠಡಿಗಳಿವೆ. ಆದರೆ,ಕಾಂಪೌಂಡ್ ಅಲ್ಲಲ್ಲಿ ಕುಸಿದಿದ್ದು ಸರಿಪಡಿಸಬೇಕಿದೆ.

” ಶತಮಾನ ಪೂರೈಸಿರುವ ಶಾಲೆಗಳನ್ನು ಪಾರಂಪರಿಕ ಶಾಲೆಗಳೆಂದು ಗುರುತಿಸಿ, ಕಟ್ಟಡಗಳ ಪರಂಪರೆಯನ್ನು ಸಂರಕ್ಷಿಸಿ ಮುಂದುವರಿಸಿಕೊಂಡು ಹೋಗಬೇಕಿದೆ.”

-ಮಧು ಜಿ.ಮಾದೇಗೌಡ, ವಿಧಾನಪರಿಷತ್ ಸದಸ್ಯ,

” ದಕ್ಷಿಣ ಪದವೀಧರರ ಕ್ಷೇತ್ರ ಶತಮಾನೋತ್ಸವ ಕಂಡ ಶಾಲೆಗಳನ್ನು ಗುರುತಿಸಿ ಹಂತ ಹಂತವಾಗಿ ಅನುದಾನ ದೊರಕಿಸುವ ಕೆಲಸ ನಡೆದಿದೆ. ಈಗಾಗಲೇ ಶಾಲೆಗೆ ಸೇರಿದ ಜಾಗದ ಹದ್ದುಬಸ್ತು ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ತಹಸಿಲ್ದಾರ್ ಅವರ ಗಮನಕ್ಕೆ ತರಲಾಗಿದೆ. ಶಾಲಾಭಿವೃದ್ಧಿ ಸಮಿತಿಗಳಿಗೂ ಶಾಲೆಗೆ ಸೇರಿದ ಸರ್ಕಾರಿ ಜಾಗವನ್ನು ಸಂರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲಾಗಿದೆ.”

-ಮಹದೇವು, ಬಿಇಒ, ಮಂಡ್ಯ ದಕ್ಷಿಣ ವಲಯ

” ಮಂಡ್ಯ ಹಳೇ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಾನು ಮುಖ್ಯೋಪಾಧ್ಯಾಯನಾಗಿ ಬಂದು ನಾಲ್ಕೈದು ವರ್ಷಗಳಾಗಿವೆ. ಒಂದನೇ ತರಗತಿ ಆರಂಭಿಸಿದ್ದು, ಕಟ್ಟಡವನ್ನು ಇಂದಿನ ಅಗತ್ಯಗಳಿಗೆ ಮಾರ್ಪಾಡು ಮಾಡಲಾಗಿದೆ. ಸುಣ್ಣಬಣ್ಣ ಮಾಡಿಸಿ ಒಂದು ಹೊಸ ರೂಪು ನೀಡಿದ್ದರಿಂದ ಮಕ್ಕಳ ಪ್ರವೇಶಾತಿ ಏರಿಕೆ ಕಂಡಿದೆ. ಶಾಲೆಯಲ್ಲೀಗ ೪೧ ವಿದ್ಯಾರ್ಥಿಗಳಷ್ಟೇ ವ್ಯಾಸಂಗ ಮಾಡುತ್ತಿದ್ದಾರೆ. ಮೂವರು ಶಿಕ್ಷಕರಿದ್ದಾರೆ. ಎಲ್‌ಕೆಜಿ, ಯುಕೆಜಿ ಆರಂಭಿಸಲಾಗಿದೆ. ಶೀಘ್ರದಲ್ಲೇ ಸ್ಮಾರ್ಟ್ ಕ್ಲಾಸ್ ಸೌಲಭ್ಯವನ್ನೂ ಆರಂಭಿಸಲಾಗುವುದು.”

-ಡಿ.ಕೆ.ನಾಗರಾಜು, ಮುಖ್ಯ ಶಿಕ್ಷಕ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಳೇನಗರ, ಮಂಡ್ಯ

” ಈ ಶಾಲೆಯಲ್ಲಿ ನಾವು ಓದುತ್ತಿದ್ದ ಸಂದರ್ಭದಲ್ಲಿ ಒಂದರಿಂದ ೭ನೇ ತರಗತಿಯವರೆಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದರು. ಆಗ ಆಟೋಟಗಳಿಗೆ ಸಾಕಷ್ಟು ಜಾಗವಿತ್ತು. ಸುತ್ತಮುತ್ತಲ ಹಳ್ಳಿಗಳಿಂದ ಹುಡುಗರು ಸೈಕಲ್‌ನಲ್ಲೇ ಬಂದು – ಹೋಗುತ್ತಿದ್ದರು. ಈಗ ಎಲ್ಲ ಬದಲಾವಣೆಯಾಗಿದೆ. ಶಾಲೆಯ ಜಾಗವನ್ನು ಇತರೆ ಉದ್ದೇಶಕ್ಕೆ ಸರ್ಕಾರ ಬಳಸಿಕೊಂಡಿದೆ. ವಿದ್ಯಾರ್ಥಿಗಳ ಸಂಖ್ಯೆಯೂ ಕ್ಷೀಣಿಸಿದೆ.”

-ಗುರುಮೂರ್ತಿ, ಹಿರಿಯ ವಿದ್ಯಾರ್ಥಿ, ಟೌನ್ ಮಿಡ್ಲ್ ಸ್ಕೂಲ್

” ಇದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಾದ್ದರಿಂದ ಈ ವ್ಯಾಪ್ತಿಯಲ್ಲಿ ಟೌನ್ ಮಿಡ್ಲ್ ಸ್ಕೂಲ್ ಎಂದೇ ಕರೆಯಲಾಗುತ್ತಿತ್ತು. ಆ ದಿನಗಳಲ್ಲಿ ಶಿಕ್ಷಕರು, ವಿದ್ಯಾರ್ಥಿಗಳಿಂದ ಶಾಲೆ ತುಂಬಿ ತುಳುಕುತ್ತಿತ್ತು. ವಿಶಾಲವಾದ ಜಾಗವೂ ಇತ್ತು. ಈಗ ಮಕ್ಕಳ ಸಂಖ್ಯೆ ಕ್ಷೀಣಿಸಿದಂತೆ, ಜಾಗವೂ ಕಿರಿದಾಗುತ್ತಿದೆ.”

 -ಚಂದ್ರಕುಮಾರ್, ಉದ್ಯಮಿ

ಜಿಲ್ಲಾದ್ಯಂತ ಶತಮಾನ ಪೂರೈಸಿದ ೬೬ ಶಾಲೆಗಳು:  ಮಂಡ್ಯ ಜಿಲ್ಲಾದ್ಯಂತ ಶತಮಾನ ಪೂರೈಸಿರುವ ೬೬ ಶಾಲೆಗಳಿವೆ ಎಂದು ಮಂಡ್ಯ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ. ಕೆಆರ್.ಪೇಟೆ ತಾಲ್ಲೂಕಿನಲ್ಲಿ ೧೩ ಶಾಲೆಗಳು,ಮಳವಳ್ಳಿಯಲ್ಲಿ ೪, ಮಳವಳ್ಳಿಯಲ್ಲಿ ೧೨, ಉತ್ತರ ವಲಯದಲ್ಲಿ ೪, ದಕ್ಷಿಣ ವಲಯದಲ್ಲಿ ೨, ನಾಗಮಂಗಲದಲ್ಲಿ ೧೦ ಮತ್ತು ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ೧೫ ಶಾಲೆಗಳಿವೆ ಎಂದು ತಿಳಿದುಬಂದಿದೆ.

 

 

 

ಆಂದೋಲನ ಡೆಸ್ಕ್

Recent Posts

ಹಾಸನ| ಒಂದೇ ವಾರದಲ್ಲಿ ಎರಡು ಚಿರತೆ ಸೆರೆ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ದಿಂಡಗೂರು ಗ್ರಾಮದಲ್ಲಿ ಕಳೆದ ಒಂದು ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಗ್ರಾಮಸ್ಥರು ನೆಮ್ಮದಿಯ…

11 mins ago

ಯುದ್ಧದ ನಡುವೆ ಇರಾನ್‌ನಲ್ಲಿ ಭೂಕಂಪ: 4.1 ತೀವ್ರತೆ ದಾಖಲು

ಟೆಹರಾನ್:‌ ಯುದ್ಧದ ನಡುವೆಯೇ ಇರಾನ್‌ನಲ್ಲಿ ಇಂದು ಭೂಕಂಪ ಸಂಭವಿಸಿದೆ. ಇರಾನ್‌ನ ಆಯಕಟ್ಟಿನ ಪ್ರದೇಶದವಾದ ಬಂದರ್‌ ಅಬ್ಬಾಸ್‌ ಸಮೀಪ ರಿಕ್ಟರ್‌ ಮಾಪಕದಲ್ಲಿ…

24 mins ago

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್‌ ವಿರುದ್ಧ ಬೆಂಗಳೂರಿನ ಕೆ.ಆರ್.‌ಪುರಂ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.…

3 hours ago

ಸಿಎಂ ಸಿದ್ದರಾಮಯ್ಯ ಅವರ ಇಂದಿನ ಮೈಸೂರು ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ…

3 hours ago

ಓದುಗರ ಪತ್ರ: ಯುದ್ಧ ವಿನಾಶಕಾರಿ!

ಯುದ್ಧ ವಿನಾಶಕಾರಿ! ನಿಲ್ಲುವಂತೆ ಕಾಣುವುದಿಲ್ಲ ಕೊಲ್ಲಿ ರಾಷ್ಟ್ರಗಳ ಸಂಘರ್ಷ! ಬದಲಿಗೆ ವಿಸ್ತರಿಸಿರುವುದು ನೋವು ಸಂಕಟದ ಸಂಗತಿ! ಗೆಲ್ಲಲಾಗದು ದ್ವೇಷದಲಿ ಯಾರನ್ನೂ ಪ್ರೀತಿ…

3 hours ago

ಓದುಗರ ಪತ್ರ: ಯಶಸ್ವಿನಿ : ಡಯಾಲಿಸಿಸ್ ವೆಚ್ಚ ಭರಿಸಲಿ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯಡಿಯಲ್ಲಿ ವಿಮೆ ಸೌಲಭ್ಯ ಪಡೆದಿರುವವರ ಕುಟುಂಬ ವರ್ಷಕ್ಕೆ ೫ ಲಕ್ಷರೂ. ವೆಚ್ಚದ ಚಿಕಿತ್ಸಾ ಸೌಲಭ್ಯ…

3 hours ago