Andolana originals

ಐತಿಹಾಸಿಕ ಮಡಿಕೇರಿ ದಸರಾಗೆ ಅದ್ಧೂರಿ ತೆರೆ

ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾಕ್ಕೆ ಅದ್ಧೂರಿ ತೆರೆಬಿದ್ದಿದ್ದು, ಪ್ರಮುಖ ಆಕರ್ಷಣೆಯಾಗಿದ್ದ ದಶಮಂಟಪಗಳ ಶೋಭಾಯಾತ್ರೆಯಲ್ಲಿ ಈ ಬಾರಿ ಶ್ರೀ ಕೋಟೆ ಮಹಾಗಣಪತಿ ಹಾಗೂ ಕೋಟೆ ಶ್ರೀ ಮಾರಿಯಮ್ಮ ದೇವಾಲಯಗಳ ಮಂಟಪಗಳು ಪ್ರಥಮ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿವೆ.

ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದ ಮಂಟಪಕ್ಕೆ ದ್ವಿತೀಯ ಹಾಗೂ ಶ್ರೀ ದಂಡಿನ ಮಾರಿಯಮ್ಮ ದೇವಾಲಯದ ಮಂಟಪಕ್ಕೆ ತೃತೀಯ ಬಹುಮಾನ ದೊರಕಿದೆ. ಗುರುವಾರ ರಾತ್ರಿ ೯ ಗಂಟೆಯಿಂದಲೇ ದಶಮಂಟಪಗಳ ಪ್ರದರ್ಶನಗಳು ಆರಂಭಗೊಂಡವು. ಪೇಟೆ ಶ್ರೀ ರಾಮ ಮಂದಿರ ದೇವಾಲಯದ ಮಂಟಪ ಪ್ರದರ್ಶನ ನೀಡುತ್ತಿದ್ದಂತೆ ಉಳಿದ ಮಂಟಪಗಳು ಕೂಡ ದಶಮಂಟಪ ಸಮಿತಿ ನಿಗದಿಪಡಿಸಿದ್ದ ಸ್ಥಳಕ್ಕೆ ಆಗಮಿಸಿ ಪ್ರದರ್ಶನ ನೀಡಲು ಆರಂಭಿಸಿದವು.

ಚಲನವಲಗಳನ್ನೊಳಗೊಂಡ ವಿಭಿನ್ನ ಕಲಾಕೃತಿಗಳ ಕಥಾಹಂದರವನ್ನು ಮಂಟಪಗಳಲ್ಲಿ ಪ್ರಸ್ತುತಪಡಿಸಲಾಗಿತ್ತು. ನೂಕು ನುಗ್ಗಲಿನ ನಡುವೆಯೂ ಸಾವಿರಾರು ಸಂಖ್ಯೆಯಲ್ಲಿ ಜನರು ಪ್ರದರ್ಶನವನ್ನು ಕಣ್ತುಂಬಿಕೊಂಡರು. ವಿಘ್ನರಾಜನಿಂದ ಮಮತಾಸುರ ವಧೆ ಎಂಬ ಪೌರಾಣಿಕ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಿ ಪ್ರದರ್ಶನ ನೀಡಿದ ಶ್ರೀ ಕೋಟೆ ಮಹಾಗಣಪತಿ ದೇವಾಲಯ ಹಾಗೂ ಉಗ್ರನರಸಿಂಹನ ಉಗ್ರತ್ವ ಶಮನ ಎಂಬ ಕಥಾ ಹಂದರವನ್ನು ಮಂಟಪದಲ್ಲಿ ಅಳವಡಿಸಿ ಪ್ರದರ್ಶನ ನೀಡಿದ ಶ್ರೀ ಕೋಟೆ ಮಾರಿಯಮ್ಮ ದೇವಾಲಯಗಳು ಜಂಟಿಯಾಗಿ ಪ್ರಥಮ ಬಹುಮಾನ ಪಡೆದವು. ಪರಶುರಾಮನ ಕಥೆ ಪ್ರದರ್ಶಿಸಿದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯ ದ್ವಿತೀಯ ಬಹುಮಾನ ಪಡೆದರೆ, ಅಂಧಕಾಸುರನ ಸಂಹಾರ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಿದ್ದ ಶ್ರೀ ದಂಡಿನ ಮಾರಿಯಮ್ಮ ದೇವಾಲಯ ತೃತೀಯ ಬಹುಮಾನ ಪಡೆಯುವಲ್ಲಿ ಯಶಸ್ವಿಯಾಯಿತು.

ಇದನ್ನೂ ಓದಿ :-ಕಸ ಸಂಗ್ರಹಕ್ಕೆ ಸ್ಟೇನ್‌ಲೆಸ್‌ ಡಬ್ಬಗಳ ಅಳವಡಿಕೆ

ರಾತ್ರಿಯಾಗುತ್ತಿದ್ದಂತೆ ಹೊರಜಿಲ್ಲೆ, ಹೊರ ರಾಜ್ಯಗಳಿಂದ ಆಗಮಿಸಿದ್ದ ಜನರು ನಗರದಲ್ಲಿ ಜಮಾವಣೆಗೊಂಡರು. ನಗರಕ್ಕೆ ವಾಹನ ಪ್ರವೇಶ ನಿರ್ಬಂಽಸಿದ್ದರಿಂದ ನಿಗದಿಪಡಿಸಿದ ಸ್ಥಳಗಳಲ್ಲಿ ವಾಹನ ನಿಲ್ಲಿಸಿ ನಗರದತ್ತ ಹೆಜ್ಜೆ ಹಾಕಿದರು. ಇಡೀ ರಾತ್ರಿ ನಗರದಲ್ಲಿ ನಡೆದ ದಶಮಂಟಪಗಳ ಶೋಭಾಯಾತ್ರೆ ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಯಿತು. ದೇವಾನುದೇವತೆಗಳಿಂದ ಅಸುರರ ಸಂಹಾರದ ಕಥಾ ಹಂದರಗಳು ನೋಡುಗರಿಗೆ ದೇವಲೋಕವೇ ಧರೆಗಿಳಿದಂತೆ ಭಾಸವಾಯಿತು.

ಡಿಜೆ ಇಲ್ಲದ ದಸರಾ….

ಈ ಬಾರಿಯ ದಸರಾ ಉತ್ಸವದಲ್ಲಿ ಡಿಜೆ ಬಳಸದಿದ್ದರಿಂದ ಯುವ ಸಮೂಹ ನಿರಾಸೆ ಅನುಭವಿಸುವಂತಾಯಿತು. ಪ್ರತಿ ಬಾರಿ ದಸರಾದಲ್ಲಿ ಪ್ರದರ್ಶನ ಸಂದರ್ಭ ಹೊರತುಪಡಿಸಿ ಉಳಿದ ಸಮಯದಲ್ಲಿ ಡಿಜೆ ಹಾಕಲಾಗುತ್ತಿತ್ತು. ಯುವ ಸಮೂಹ ಕುಣಿದು ಕುಪ್ಪಳಿಸಿ ಸಂಭ್ರಮಿಸುತ್ತಿದ್ದರು. ಆದರೆ, ಕಳೆದ ಬಾರಿಯಿಂದ ಡಿಜೆ ಬಳಸದಂತೆ ವಕೀಲರೊಬ್ಬರು ನ್ಯಾಯಾಲಯದ ಮೊರೆ ಹೋದ ಹಿನ್ನೆಲೆಯಲ್ಲಿ ನಿಯಮ ಉಲ್ಲಂಸಿ ಡಿಜೆ ಬಳಸಿದ ಮಂಟಪಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಬಾರಿ ಪೊಲೀಸ್ ಇಲಾಖೆ ಡಿಜೆ ಬಳಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ ಮೇರೆಗೆ ಕಡಿವಾಣ ಹಾಕಲಾಯಿತು. ಕೆಲಕಾಲ ಡಿಜೆ ಇದ್ದರೂ ಇಡೀ ರಾತ್ರಿ ಡಿಜೆ ಇಲ್ಲದೆ ಯುವ ಸಮೂಹ ಬೇಸರ ವ್ಯಕ್ತಪಡಿಸಿತು. ಇದೇ ವೇಳೆ ಕಾರೊಂದರಲ್ಲಿ ಡಿಜೆ ಹಾಕಿದ್ದನ್ನು ಗಮನಿಸಿದ ಪೊಲೀಸರು ಕಾರನ್ನು ವಶಕ್ಕೆ ಪಡೆದು ಕ್ರಮ ಕೈಗೊಂಡರು.

ಆಂದೋಲನ ಡೆಸ್ಕ್

Recent Posts

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು: ತನಿಖಾ ತಂಡಕ್ಕೆ 25 ಲಕ್ಷ ನಗದು ಬಹುಮಾನ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…

14 mins ago

ರಾಜ್ಯಪಾಲರು ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು. ಈ…

15 mins ago

ಕೇರಳದಲ್ಲಿ 3 ಅಮೃತ್‌ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ಕೇರಳ: ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ…

29 mins ago

ಫಲಪುಷ್ಪ ವಸ್ತು ಪ್ರದರ್ಶನವನ್ನು ಜಿಲ್ಲೆಯ ಸಾರ್ವಜನಿಕರು ಕಣ್ತುಂಬಿಕೊಳ್ಳಿ: ಎನ್.ಚಲುವರಾಯಸ್ವಾಮಿ ಕರೆ

ಮಂಡ್ಯ: ಕಳೆದ ಬಾರಿಗಿಂತ ಈ ಬಾರಿ ವಿಶೇಷವಾಗಿ 2 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಿಸಿ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಮಾಡಲಾಗಿದೆ…

35 mins ago

ಮೈಸೂರು| ಬಣ್ಣ ಹೊಡೆಯುವ ವೇಳೆ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಮೈಸೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್‌ ರಸ್ತೆಯಲ್ಲಿರುವ…

1 hour ago

ಸಂಜೆ 6 ರಿಂದ ಬೆಳಗಿನ ಜಾವ 6ರವರೆಗೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ನಿಷೇಧ: ಭಕ್ತರು ಸಹಕರಿಸುವಂತೆ ಎ.ಈ.ರಘು ಮನವಿ

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…

2 hours ago