ಶ್ರೀಧರ್ ಆರ್ ಭಟ್
ವರುಣ: ಮೂರು ತಿಂಗಳ ಹಿಂದೆ ಆರಂಭಗೊಂಡ ಹೈಟೆಕ್ ಕ್ರಷರ್ ಎರಡು ಗ್ರಾಮಗಳ ಪಾಲಿಗೆ ಈಗಾಗಲೇ ಸಂಕಷ್ಟ ತಂದಿಕ್ಕಲಾರಂಭಿಸಿದೆ.
ನಂಜನಗೂಡು ತಾಲ್ಲೂಕಿನ ವರುಣ ಕ್ಷೇತ್ರ ವ್ಯಾಪ್ತಿಯ ತಾಂಡವಪುರ ಬಳಿ ಕೇರಳದ ವ್ಯಕ್ತಿಯೊಬ್ಬರು ಅತ್ಯಾಧುನಿಕ ಕ್ರಷರ್ ಆರಂಭಿಸಿದ್ದಾರೆ.
ಸರ್ಕಾರದ ನಿಯಮಾವಳಿಗಳನ್ನು ಅನುಸರಿಸದೇ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳದೇ ಆರಂಭಿಸಲಾದ ಈ ಕೈಗಾರಿಕೆಯಿಂದ ಈಗ ಮೇಲೇಳು ತ್ತಿರುವ ದೂಳು ಚಿಕ್ಕಯ್ಯನಛತ್ರ ಹಾಗೂ ತಾಂಡವ ಪುರ ಗ್ರಾಮಗಳನ್ನು ಆವರಿಸಿಕೊಳ್ಳ ತೊಡಗಿದ್ದು, ೬೦ ವರ್ಷ ಮೇಲ್ಪಟ್ಟ ನಾಗರಿಕರೂ ಈ ದೂಳಿನಿಂದಾಗಿ ಈಗಾಗಲೇ ಏದುಸಿರು ಬಿಡಲಾರಂಭಿಸಿದ್ದಾರೆ. ಹಸುಗೂಸುಗಳು ಗ್ರಾಮದಲ್ಲಿ ಉಸಿರಾಟದ ತೊಂದರೆ ಯಿಂದ ನರಳುತ್ತಿದ್ದು, ಎರಡೂ ಗ್ರಾಮಗಳ ಜನತೆ ಆರೋಗ್ಯದ ಮೇಲೆ ಈ ಕ್ರಷರ್ ದುಷ್ಪರಿಣಾಮ ಬೀರಲಾರಂಭಿಸಿದೆ.
ಗುಂಡ್ಲುಪೇಟೆ ತಾಲ್ಲೂಕಿನ ಹಿರಿಕಾಟಿಯಿಂದ ತರಲಾಗುವ ಭಾರಿ ಗಾತ್ರದ ಬಂಡೆಕಲ್ಲುಗಳನ್ನು ಇಲ್ಲಿ ಪುಡಿ ಮಾಡಲಾಗುತ್ತಿದ್ದು, ಅದರಿಂದ ಏಳುವ ದೂಳಿನ ಕಣಗಳು ಎರಡೂ ಗ್ರಾಮಗಳನ್ನು ಆವರಿ ಸುತ್ತಿವೆ ಎನ್ನುವುದು ಗ್ರಾಮಸ್ಥರ ಆರೋಪ.
ದೂಳು ಕಡಿಮೆಯಾಗದಿದ್ದಲ್ಲಿ ನಾವೇ ಊರು ಖಾಲಿ ಮಾಡಬೇಕಾಗುತ್ತದೆ ಎಂಬ ಆತಂಕದಲ್ಲಿರುವ ತಾಂಡವಪುರ ಹಾಗೂ ಚಿಕ್ಕಯ್ಯನ ಛತ್ರದ ಗ್ರಾಮಸ್ಥರು ಈ ಕ್ಷೇತ್ರವನ್ನು ಪ್ರತಿನಿಽಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಕ್ಷೇತ್ರದ ಉಸ್ತುವಾರಿ ಡಾ. ಯತೀಂದ್ರ ಸಿದ್ದರಾಮಯ್ಯ ಮಧ್ಯಪ್ರವೇಶಿಸಿ ಇಲಾಖೆಯ ಅನುಮತಿ ಇಲ್ಲದೆ ದೂಳೆಬ್ಬಿ ಸುತ್ತಾ ಜನತೆಯ ಅನಾರೋಗ್ಯಕ್ಕೆ ಕಾರಣವಾಗಿರುವ ಈ ಹೈಟೆಕ್ ಕ್ರಷರ್ ಬಾಗಿಲಿಗೆ ಬೀಗ ಹಾಕಿ ನಮ್ಮ ಆರೋಗ್ಯ ಕಾಪಾಡಬೇಕೆಂದು ಮನವಿ ಮಾಡಿದ್ದಾರೆ.
” ನಾವಂತೂ ಅನುಮತಿ ನೀಡಿಲ್ಲ. ಜನರು ತಮಗೆ ದೂರು ನೀಡಿದ್ದು, ನಾವು ಸದ್ಯ ದಲ್ಲೇ ಈ ಕುರಿತು ವರದಿ ಸಿದ್ಧಪಡಿಸಿ ಮೇಲಾಧಿಕಾರಿಗಳಿಗೆ ಕಳಿಸುತ್ತೇವೆ.”
-ಪ್ರಭಾಕರ್, ಪಿಡಿಒ,ತಾಂಡವಪುರ
” ಕೈಗಾರಿಕೆ ಪ್ರಾರಂಭಿಸಲು ಪರಿಸರ ಇಲಾಖೆಯವರು ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಬೇಕು. ಗ್ರಾಪಂ ಒಪ್ಪಿಗೆಯನ್ನು ಪಡೆದುಕೊಳ್ಳಬೇಕು. ಅದ್ಯಾವುದೂ ಆಗಿಲ್ಲ. ಇದೊಂದು ಅನಧಿಕೃತ ಕೈಗಾರಿಕೆಯಾಗಿದ್ದು ಇದನ್ನು ಮುಚ್ಚಬೇಕು.”
-ಚಂದ್ರು, ಗ್ರಾಪಂ ಸದಸ್ಯ, ತಾಂಡವಪುರ
” ಈ ಕ್ರಷರ್ಗೆ ಅನುಮತಿ ನೀಡಿದವರು ಯಾರೆಂಬುದು ನಮಗೆ ತಿಳಿದಿಲ್ಲ. ಕ್ರಷರ್ನಿಂದಾಗುವ ಅನಾಹುತದ ಕುರಿತ ದೂರು ಬಂದ ಮೇಲೆಯೇ ಇದು ನನ್ನ ಗಮನಕ್ಕೆ ಬಂದಿದೆ. ತಕ್ಷಣ ಈ ಕುರಿತು ತಾಂಡವಪುರ ಗ್ರಾಪಂನಿಂದ ವರದಿ ಕೇಳಲಾಗಿದೆ.”
-ಜೆರಾಲ್ಡ್ ರಾಜೇಶ್, ತಾಪಂ ಇಒ
” ಕ್ರಷರ್ ಆರಂಭಿಸಲು ಕೆಐಎಡಿಬಿಯಿಂದ ಯಾವುದೇ ಪರವಾನಗಿ ಪಡೆದಿಲ್ಲ. ಈ ಬಗ್ಗೆ ಪರಿಶೀಲಿಸಲಾಗುವುದು.”
-ಅರುಣ, ಎಇಇ, ಕೆಐಎಡಿಬಿ
ರಾಜಕಾರಣಿಗಳು ಪ್ರತಿನಿತ್ಯ ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ವೈಯಕ್ತಿಕ ಪ್ರಚಾರ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಪೋಸ್ಟರ್, ಬ್ಯಾನರ್ಗಳನ್ನು ಅಳವಡಿಸಿ…
ಕಳೆದ ೨೫ ವರ್ಷಗಳಲ್ಲಿ ಷೇರುಪೇಟೆ ಸೇರಿದಂತೆ ಉಳಿದೆಲ್ಲ ಸ್ಥಿರಾಸ್ತಿಗಳ ಮೇಲಿನ ಹೂಡಿಕೆಗಿಂತ ಚಿನ್ನ ಮತ್ತು ಬೆಳ್ಳಿಯ ಮೇಲಿನ ಹೂಡಿಕೆ ಅತಿ…
ಮೈಸೂರಿನ ಕೆ.ಆರ್. ಆಸ್ಪತ್ರೆಯ ಕಲ್ಲು ಬಿಲ್ಡಿಂಗ್ ಬಳಿ ಕೋತಿಗಳ ಹಾವಳಿ ಮಿತಿ ಮೀರಿದ್ದು, ರೋಗಿಗಳ ಸಂಬಂಧಿಕರು ತರುವ ಊಟ, ತಿಂಡಿ…
ದಕ್ಷಿಣಕಾಶಿ ಎಂದೇ ಪ್ರಖ್ಯಾತವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ದೇಶ ವಿದೇಶಗಳಿಂದ ಭಕ್ತಾದಿಗಳು ಆಗಮಿಸುತ್ತಾರೆ. ಸರ್ಕಾರಿ ರಜಾ ದಿನಗಳಲ್ಲಿ ಭಕ್ತರ ಸಂಖ್ಯೆ…
ನವೀನ್ ಡಿಸೋಜ ಖಾಸಗಿ ಸಹಭಾಗಿತ್ವದಲ್ಲಿ ಆರಂಭಕ್ಕೆ ಸಚಿವ ಸಂಪುಟದಲ್ಲಿ ಒಪ್ಪಿಗೆ; ಟ್ರಾಫಿಕ್ ಕಿರಿಕಿರಿಗೂ ಕಡಿವಾಣ ಮಡಿಕೇರಿ: ನಗರದ ರಾಜಾಸೀಟ್ ಆವರಣದಲ್ಲಿ…
ಮಂಜು ಕೋಟೆ ಕೋಟೆ: ಹಿಮಾಲಯ, ಇನ್ನಿತರ ಪ್ರದೇಶಗಳಿಂದ ವಲಸೆ ಬಂದಿರುವ ಹಕ್ಕಿಗಳು; ಪರಿಸರ ಪ್ರಿಯರಲ್ಲಿ ಸಂತ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿರುವ ಜಲಾಶಯಗಳ…