Andolana originals

ಚಾಮುಂಡಿ ವಿಹಾರದಲ್ಲಿರುವ ಈಜುಕೊಳಕ್ಕೆ ಹೈಟೆಕ್ ಸ್ಪರ್ಶ!

ಚಿರಂಜೀವಿ ಸಿ.ಹುಲ್ಲಹಳ್ಳಿ

ದಸರಾ ವೇಳೆ ಆರಂಭವಾಗಿದ್ದ ಕಾಮಗಾರಿ ಈಗ ಪೂರ್ಣ; ಈಜು ಸ್ಪರ್ಧೆಗಳು ಆರಂಭ

ಮೈಸೂರು: ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿರುವ ಒಳಾಂಗಣ ಈಜುಕೊಳ ಇದೀಗ ‘ಹೈಟೆಕ್ಸ್ಪರ್ಶ’ದೊಂದಿಗೆ ಈಜು ಪ್ರಿಯರನ್ನು ಆಕರ್ಷಿಸುತ್ತಿದೆ.

ಈಜಲು ನೀರಿಗೆ ಇಳಿದರೂ ಬೇಸಿಗೆಯ ಬಿಸಿಲ ಹೊಡೆತದಿಂದ ಬಸವಳಿಯುತ್ತಿದ್ದ ಈಜು ಪ್ರಿಯರಿಗೆ ಅನುಕೂಲ ಕಲ್ಪಿಸಲು ೮ ಕೋಟಿ ರೂ. ವೆಚ್ಚದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಡಿ ಈಜುಕೊಳಕ್ಕೆ ಮೇಲ್ಚಾವಣಿ ಹಾಗೂ ಮೂಲ ಸೌಕರ್ಯ ಕಲ್ಪಿಸುವ ಕಾಮಗಾರಿಗೆ ದಸರಾ ವೇಳೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದರು. ಇದೀಗ ಕಾಮಗಾರಿ ಪೂರ್ಣಗೊಂಡಿದೆ.

೩.೨೫ ಕೋಟಿ ರೂ. ವೆಚ್ಚದ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ ನಿರ್ಮಾಣ ಕಾಮಗಾರಿಗೆ ೨೦೧೨ರ ಸೆಪ್ಟೆಂಬರ್ ನಲ್ಲಿ ಚಾಲನೆ ನೀಡಲಾಗಿತ್ತು. ಕಾಮಗಾರಿ ವಿಳಂಬದಿಂದಾಗಿ ೩.೨೫ ಕೋಟಿ ರೂ. ಇದ್ದ ಯೋಜನಾ ವೆಚ್ಚವನ್ನು ೪.೯೭ ಕೋಟಿ ರೂ.ಗಳಿಗೆ ಪರಿಷ್ಕರಿಸಲಾಗಿತ್ತು.

೫ ವರ್ಷಗಳ ಬಳಿಕ ಕಾಮಗಾರಿ ಪೂರ್ಣಗೊಂಡು ೨೦೧೮ರಿಂದ ಸಾರ್ವಜನಿಕರಿಗೆ ಈಜು ಕೊಳವನ್ನು ಮುಕ್ತಗೊಳಿಸಲಾ ಗಿತ್ತು. ಅಂತಾರಾಷ್ಟ್ರೀಯ ಮಟ್ಟದ ಈಜುಕೊಳದಲ್ಲಿ ಕಾಂಪಿಟೇಷನ್, ವಾರ್ಮ್‌ಅಪ್, ಚಿಲ್ಡ್ರನ್ಸ್ ನಿರ್ಮಿಸಲಾಗಿದೆ. ಉಳಿದಂತೆ ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಬಟ್ಟೆ ಬದಲಿಸುವ ಕೊಠಡಿ, ಸ್ನಾನಗೃಹ, ಶವರ್ ವ್ಯವಸ್ಥೆ ಹಾಗೂ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.

ಈಜುಕೊಳದಲ್ಲಿ ಅನುಭವಿ ತರಬೇತುದಾರರು, ಇನ್ ಸ್ಟ್ರಕ್ಟರ್, ಜೀವ ರಕ್ಷಕರು, ಸಕ್ಷನ್ ಎಳೆಯುವವರು, ಸ್ವಚ್ಛತಾಗಾರರು, ಪಾಸ್/ಟಿಕೆಟ್ ಚೆಕ್ ಮಾಡುವವರು, ಭದ್ರತಾ ಸಿಬ್ಬಂದಿ ಸೇರಿದಂತೆ ಇತರ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಾರೆ.

” ಮೈಸೂರಿನ ಚಾಮುಂಡಿವಿಹಾರ ಕ್ರೀಡಾಂಗಣದ ಆವರಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಈಜುಕೊಳಕ್ಕೆ ಮೇಲ್ಚಾವಣಿ ನಿರ್ಮಿಸುವ ಕಾಮಗಾರಿ ಪೂರ್ಣಗೊಂಡಿದ್ದು, ಎಲ್ಲ ರೀತಿಯ ಸೌಕರ್ಯಗಳೊಂದಿಗೆ ಈಜುಕೊಳಕ್ಕೆ ‘ಹೈಟೆಕ್ ಸ್ಪರ್ಶ’ ನೀಡಲಾಗಿದೆ.”

-ಭಾಸ್ಕರ್ ನಾಯಕ್, ಸಹಾಯಕ ನಿರ್ದೇಶಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ 

ಬೇಸಿಗೆ ಶಿಬಿರ ಆಯೋಜನೆ: ಈಜುಕೊಳದಲ್ಲಿ ಮಕ್ಕಳೂ ಸೇರಿದಂತೆ ಎಲ್ಲ ವಯೋಮಾನದವರ ಈಜು ತರಬೇತಿಗೆ ಬೇಸಿಗೆ ಶಿಬಿರ ಆಯೋಜಿಸಲಾಗಿದೆ. ಮಾರ್ಚ್ ೨೩ರಿಂದ ಏಪ್ರಿಲ್ ೧೨ರವರೆಗೆ ಮೊದಲ ಅವಽಯ ಶಿಬಿರ ಆರಂಭವಾಗಲಿದೆ. ಬೆಳಿಗ್ಗೆ ೬ರಿಂದ ೭, ೭ರಿಂದ ೮, ೮ರಿಂದ ೯, ೯ರಿಂದ ೧೦ ಹಾಗೂ ಮಧ್ಯಾಹ್ನ ೩.೩೦ ರಿಂದ ೪.೩೦ರವರೆಗೆ ಮಕ್ಕಳು ಮತ್ತು ವಯಸ್ಕರರಿಗೆ ಶಿಬಿರ ನಡೆಯಲಿದೆ. ಮಕ್ಕಳು ಮತ್ತು ಮಹಿಳೆಯರಿಗೆ ಬೆಳಿಗ್ಗೆ ೧೦ ರಿಂದ ೧೧, ೧೪ ವರ್ಷದ ಮಕ್ಕಳಿಗೆ ಸಂಜೆ ೪.೩೦ ರಿಂದ ೫.೩೦, ೫.೩೦ ರಿಂದ ೬.೩೦, ೧೦ ವರ್ಷದೊಳಗಿನ ಮಕ್ಕಳಿಗೆ ೬.೩೦ ರಿಂದ ೭.೩೦ ಹಾಗೂ ೭.೩೦ ರಿಂದ ೮.೩೦ರವರೆಗೆ ಕ್ಯಾಂಪ್ ನಡೆಯಲಿದೆ. ಬಳಿಕ ಏಪ್ರಿಲ್ ೧೩ ರಿಂದ ಮೇ ೯ ಹಾಗೂ ಮೇ ೪ ರಿಂದ ಮೇ ೨೪ರ ವರೆಗೆ ಎರಡನೇ ಹಾಗೂ ಮೂರನೇ ಹಂತದ ಶಿಬಿರ ನಡೆಯಲಿದೆ.

 

 

ಆಂದೋಲನ ಡೆಸ್ಕ್

Recent Posts

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

56 mins ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

8 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

8 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

12 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

12 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

12 hours ago