Andolana originals

ಕಾಯಕಲ್ಪದ ನಿರೀಕ್ಷೆಯಲ್ಲಿ ಸೊರಗುತ್ತಿರುವ ಕಲಾಮಂದಿರ

ಚಿರಂಜೀವಿ ಸಿ.ಹುಲ್ಲಹಳ್ಳಿ

ಮೈಸೂರು: ನಾಟಕ, ಸಂಗೀತ, ನಾಟ್ಯ ಕಲೆಗಳನ್ನು ಪಸರಿಸುವ ಕೇಂದ್ರವೇ ಆಗಿರುವ ನಗರದ ಕಲಾಮಂದಿರ ಕಾಯಕಲ್ಪದ ನಿರೀಕ್ಷೆಯಲ್ಲಿ ಸೊರಗುತ್ತಿದೆ. ಕಲಾಮಂದಿರದ ನವೀಕರಣಕ್ಕೆ ಕೆಲ ತಿಂಗಳ ಹಿಂದೆಯೇ ಶಂಕುಸ್ಥಾಪನೆ ನೆರವೇರಿಸಲಾಗಿದ್ದರೂ ಕಾಮಗಾರಿ ಆರಂಭ ಆಗಿಲ್ಲದಿರುವುದು ವಿಪರ್ಯಾಸ. ಇದರಿಂದ ಕಲಾಸಕ್ತರಲ್ಲಿ ನಿರಾಸೆ ಮೂಡಿದ್ದು, ಕಲಾ ಪ್ರದರ್ಶನಗಳಿಗೂ ಹಿನ್ನಡೆಯಾಗಿದೆ.

೨೦೨೫ರ ಜೂನ್ ತಿಂಗಳಲ್ಲಿ ನಡೆದ ಸರ್ಕಾರದ ಎರಡು ವರ್ಷಗಳ ‘ಸಾಧನಾ ಸಮಾವೇಶ’ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಾಮಂದಿರದ ನವೀಕರಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಕೆಲ ತಿಂಗಳುಗಳ ಹಿಂದೆಯೇ ಡಿಪಿಆರ್ ಕೂಡ ಸಿದ್ಧಪಡಿಸಲಾಗಿದೆ. ಆದರೂ ಕಾಮಗಾರಿ ಆರಂಭವಾಗಿಲ್ಲ.

ಸರ್ಕಾರದ ಅನುದಾನ ಬಿಡುಗಡೆ ಸಂಬಂಧ ಪತ್ರ ವ್ಯವಹಾರ ನಡೆದಿದ್ದು, ಇದರ ಜೊತೆಗೆ ಮುಂದಿನ ವಾರದೊಳಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಎಸ್.ಶಿವರಾಜ್ ತಂಗಡಗಿ ಅವರೊಂದಿಗೆ ಚರ್ಚಿಸಿ ಅನುದಾನ ಬಿಡುಗಡೆಗೆ ಮನವಿ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಡಿ.ಸುದರ್ಶನ್ ತಿಳಿಸಿದರು.

ಏನಿದು ಯೋಜನೆ?: ಕಲಾಮಂದಿರದ, ರಂಗಾಯಣ ಹಾಗೂ ವಿಶ್ವ ಕನ್ನಡ ಸಮ್ಮೇಳನದ ೨೨ ಅತಿಥಿ ಗೃಹಗಳ ನವೀಕರಣಕ್ಕೆ ಸಮಗ್ರ ನವೀಕರಣ ಯೋಜನೆ ರೂಪಿಸಿ ೧೪.೬೩ ಕೋಟಿ ರೂ.ಅನುದಾನ ನೀಡಲು ಸರ್ಕಾರ ಸಮ್ಮತಿಸಿ ನಾಲ್ಕೈದು ತಿಂಗಳು ಕಳೆದಿವೆ.

ಕಲಾಮಂದಿರ ನಿರ್ಮಾಣವಾಗಿ ಹಲವು ದಶಕಗಳೇ ಕಳೆದಿವೆ. ಮಳೆಗಾಲದಲ್ಲಿ ನೀರು ಸೋರುತ್ತಿದೆ. ಶೌಚಾಲಯ ವ್ಯವಸ್ಥೆ ಸರಿಯಿಲ್ಲ. ಆಸನಗಳು ಹರಿದು ಹೋಗಿದ್ದು ಜನರು ಕೂರಲ ಮರ್ಪಕವಾಗಿಲ್ಲ. ಧ್ವನಿ ಮತ್ತು ಬೆಳಕಿನ ಲೋಪವಿದ್ದು ಇದರಿಂದ ಕಲಾಮಂದಿರ ಕಳೆಗುಂದುತ್ತದೆ. ರಂಗಾಯಣದ ಶ್ರೀರಂಗವೇದಿಕೆ ಹಾಗೂ ಲಂಕೇಶ್ ಸಭಾಂಗಣ ಕೂಡ ಮಳೆಗಾಲದಲ್ಲಿ ಸೋರುತ್ತವೆ. ಸರ್ಕಾರ ಘೋಷಣೆ ಮಾಡಿರುವ ಅನುದಾನದಲ್ಲಿ ಇವುಗಳಿಗೂ ಕಾಯಕಲ್ಪ ಮಾಡಲಾಗುವುದು.

ಕಲಾಮಂದಿರದ ವೇದಿಕೆಯ ಮರದ ನೆಲಹಾಸು ಬದಲಾವಣೆ. ಗ್ರೀನ್ ರೂಂ ಹಾಗೂ ಸಾರ್ವಜನಿಕ ಶೌಚಾಲಯಗಳ ನವೀಕರಣ. ಅವುಗಳಿಗೆ ಸೆನ್ಸಾರ್ ಆಧರಿತ ನಲ್ಲಿಗಳ ಅಳವಡಿಕೆ ಮಾಡಬೇಕು. ಒಟ್ಟು ೧,೨೮೦ ಕುರ್ಚಿಗಳಿದ್ದು, ಅವುಗಳ ಬದಲಾವಣೆ, ಅಕಾಸ್ಟಿಕ್ ವಾಲ್‌ಪ್ಯಾನಲಿಂಗ್ ಮೇಲ್ದರ್ಜೆಗೇರಿಸು ವುದು, ಮೊದಲ ಮಹಡಿಗೆ ಲಿಫ್ಟ್ ಅಳವಡಿಕೆ, ದೊಡ್ಡ ಪ್ರಮಾಣದಲ್ಲಿ ಕಟ್ಟಡ ಸೋರುತ್ತಿದ್ದು ತಡೆಗಾಗಿ ಚಾವಣಿಯಲ್ಲಿ ದುರಸ್ತಿ ಮತ್ತಿತರ ಕಾರ್ಯಗಳು ನಡೆಯಲಿವೆ.

ಕಲಾ ಪ್ರದರ್ಶನಗಳು ನಡೆಯುವ ಸುಚಿತ್ರಾ ಕಲಾ ಗ್ಯಾಲರಿಯ ನವೀಕರಣ, ಪುಸ್ತಕ ಮಳಿಗೆಯ ಪಕ್ಕದಲ್ಲೊಂದು ಹೊಸದಾಗಿ ಮೀಟಿಂಗ್ ಹಾಲ್ ನಿರ್ಮಾಣ, ಪುಸ್ತಕ ಮಳಿಗೆಯ ನವೀಕರಣ, ಕಲಾಮಂದಿರದ ಇಡೀ ಪ್ಲಂಬಿಂಗ್ ಲೈನ್ ಹೊಸದಾಗಿ ನಿರ್ಮಾಣ, ಕೇಂದ್ರೀಕೃತ ಹವಾನಿಯಂತ್ರಣ ವ್ಯವಸ್ಥೆಯ (ಎಸಿ) ಕಲ್ಪಿಸಲು ಇಲಾಖೆ ನಿರ್ಧರಿಸಿದೆ. ಆ ಮೂಲಕ ಕಲಾಮಂದಿರವನ್ನು ಅತ್ಯಾಧುನಿಕವಾಗಿ ರೂಪಿಸುವುದು ನಮ್ಮ ಉದ್ದೇಶ ಎಂದು ಸುದರ್ಶನ್ ಮಾಹಿತಿ ನೀಡಿದರು.

ಕಲಾಮಂದಿರ ಪ್ರವೇಶ ದ್ವಾರದಲ್ಲಿರುವ ಗಾಜುಗಳಿಗೆ ಟೀಕ್ ಮರದ ಫ್ರೇಮ್ ಅಳವಡಿಸಿ ಆಕರ್ಷಕವಾಗಿ ವಿನ್ಯಾಸಗೊಳಿಸಲಾಗುವುದು, ಬಾಹ್ಯ ಸೌಂದರ್ಯವನ್ನು ಹೆಚ್ಚಿಸುವ ಕೆಲಸವೂ ಆಗಲಿದೆ ಎಂದು ಅವರು ವಿವರಿಸಿದರು.

ರಂಗಾಯಣ ಹೊಸ ವಿನ್ಯಾಸ: ವಸತಿ ಗೃಹಗಳನ್ನು ರಂಗಾಯಣದ ರೆಪರ್ಟರಿ ಹಾಗೂ ಭಾರತೀಯ ರಂಗ ಶಿಕ್ಷಣ ಕೇಂದ್ರದ ವಿದ್ಯಾರ್ಥಿಗಳಿಗೆ ನೀಡಲಾಗಿದೆ. ಇಲಾಖೆಯ ಸುಪರ್ದಿಯಲ್ಲಿರುವ ಮನೆಗಳಲ್ಲಿ ೬ ಮನೆಗಳು ವಾಸಕ್ಕೆ ಯೋಗ್ಯವಾಗಿಲ್ಲ. ಎಲ್ಲವನ್ನೂ ನವೀಕರಿಸಿ ಬಳಕೆಗೆ ಒದಗಿಸಲಾಗುವುದು. ಅತಿಥಿಗಳು ಬಂದಾಗ ತಂಗಲು ಅನುವಾಗುವಂತೆ ಅಭಿವೃದ್ಧಿಗೊಳಿಸಲಾಗುವುದು ಎಂದು ತಿಳಿಸಿದರು. ರಂಗಾಯಣದ ಶ್ರೀರಂಗ ವೇದಿಕೆಯನ್ನು ೧೦೦ ಆಸನಗಳ ಇಂಟಿಮೇಟ್ ಥಿಯೇಟರ್ ಆಗಿ ನವೀಕರಿಸುವುದು, ಭಾರತೀಯ ರಂಗ ಶಿಕ್ಷಣ ಕೇಂದ್ರದ ವಿದ್ಯಾರ್ಥಿಗಳಿಗೆ ಶಾಲೆ ನಡೆಯುವ ಘಟಕ ಗ್ರಂಥಾಲಯ ಲಂಕೇಶ್ ಹಾಲ್ ಹಾಗೂ ಆಡಳಿತ ಕಚೇರಿಯ ವ್ಯವಸ್ಥೆಯ ನವೀಕರಣ ಮಾಡಲಾಗುವುದು ಎಂದು ಸುದರ್ಶನ್ ವಿವರಿಸಿದರು.

೨೩ ಅತಿಥಿ ಗೃಹಗಳಿಗೆ ಹೊಸ ರೂಪ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸುಪರ್ದಿಯಲ್ಲಿ ೨೩ ಮನೆಗಳಿದ್ದು, ಇವುಗಳು ಸಂಪೂರ್ಣ ಹದಗೆಟ್ಟಿವೆ. ಮಳೆ ಬಂದರೆ ಸೋರುತ್ತಿವೆ. ಕಟ್ಟಡದಲ್ಲಿ ಬಿರುಕು ಕಾಣಿಸಿಕೊಂಡಿದೆ. ಹೀಗಾಗಿ ಇವುಗಳ ನವೀಕರಣ ಮಾಡಲು ನಿರ್ಧರಿಸಲಾಗಿದೆ ಎಂದು ಸುದರ್ಶನ್ ಮಾಹಿತಿ ನೀಡಿದರು.

” ಅನುದಾನ ಬಿಡುಗಡೆಗೆ ಈಗಾಗಲೇ ಪತ್ರ ವ್ಯವಹಾರ ನಡೆಸಲಾಗಿದೆ. ಇಲಾಖೆಯ ಸಚಿವರೊಂದಿಗೆ ಸಭೆ ನಡೆಸಿ ಅನುದಾನ ಬಿಡುಗಡೆಯ ಬಗ್ಗೆ ಚರ್ಚೆ ನಡೆಸಲಾಗುವುದು. ಮುಂದಿನ ದಿನಗಳಲ್ಲಿ ಬಹುರೂಪಿಯ ಬೆಳ್ಳಿ ಹಬ್ಬದ ಸಂಭ್ರಮ ಇರುವುದರಿಂದ ಸದ್ಯಕ್ಕೆ ಕಾಮಗಾರಿ ಆರಂಭಿಸಿ ಮುಗಿಸುವುದು ಕಷ್ಟ. ಹೀಗಾಗಿ ೨೦೨೬ರ ಜನವರಿ ತಿಂಗಳಿಂದ ಕಾಮಗಾರಿ ಪ್ರಾರಂಭಿಸಬಹುದು.”

ಎಂ.ಡಿ.ಸುದರ್ಶನ್, ಸಹಾಯಕ ನಿರ್ದೇಶಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ 

ಆಂದೋಲನ ಡೆಸ್ಕ್

Recent Posts

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

54 mins ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

1 hour ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

2 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

3 hours ago

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

5 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

5 hours ago