Andolana originals

ತನ್ನ ಕುಟುಂಬದವರನ್ನೆಲ್ಲಾ ಕಳೆದುಕೊಂಡು ಏಕಾಂಗಿಯಾದ ವೃದ್ಧೆ; ತಿ.ನರಸೀಪುರ ಮೂಲದ 9 ಮಂದಿ ಸಾವು

ಮೈಸೂರು: ಎಲ್ಲರನ್ನೂ ನೀರು ಹೊತ್ತುಕೊಂಡು ಹೋಯ್ತು ಸ್ವಾಮಿ… ಮೂರು ಮನೆಗಳೂ ಕೊಚ್ಚಿ ಹೋಗಿ ತಾರಿಸಿದಂಗೆ ಮಟ್ಟವಾಯ್ತು… ಮೂರು ಮನೆಯ ಮಕ್ಕಳೂ ಇಲ್ಲ. ಮೊಮ್ಮಗಳನ್ನು ಬಿಟ್ಟರೆ ಬೇರಾರೂ ಸಿಕ್ಕಲಿಲ್ಲ …

ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಕರೆ ಮಾಡಿ ವಯನಾಡು ಭೂ ಕುಸಿತ ದುರಂತದ ಸಂತ್ರಸ್ತರಾದ 70 ವರ್ಷ ವಯೋಮಾನದ ಮಹದೇವಿ ಅವರೊಂದಿಗೆ ಮಾತನಾಡಿದಾಗ ಕಣ್ಣೀರು ಹಾಕುತ್ತಲೇ, ಹೇಳಿದ ಮಾತುಗಳಿವು.


ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದ ಸಂತ್ರಸ್ತರಾಗಿರುವ ಮೂಲತಃ ಮೈಸೂರು ಜಿಲ್ಲೆಯ ತಿನರಸೀಪುರ ತಾಲ್ಲೂಕಿನ ಉಕ್ಕಲಗೆರೆ ಗ್ರಾಮದ ಮಹದೇವಿ ಅವರು ತಮ್ಮ ಕುಟುಂಬದ ಎಲ್ಲ 9 ಜನರನ್ನೂ ಕಳೆದುಕೊಂಡಿದ್ದು, ಮೃತದೇಹಗಳನ್ನು ಗುರುತಿಸಲು ಶವಾಗಾರದ ಬಳಿ ಕಾಯುತ್ತಿದ್ದಾಗ ದೂರವಾಣಿಯಲ್ಲಿ ಏನಾಗಿದೆ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆ, ಕಣ್ಣೀರಿನ ಕಡಲಾದರು.

ಏನು ಹೇಳಲಿ ಸ್ವಾಮಿ? ಎಲ್ಲರೂ ನೀರಿನಲ್ಲಿ ಕೊಚ್ಚಿ ಹೋದ್ರು, ಮನೆ ಎಲ್ಲ ಹೋಯ್ತು. 18 ವರ್ಷ ಇದ್ದಾಗಲೇ ಈ ಊರಿಗೆ, ಒಂದೂವರೆ ವರ್ಷದ ಮಗನನ್ನು ಕಂಕುಳಲ್ಲಿ ಇಟ್ಟುಕೊಂಡು ಬಂದೆ. ಊರಲ್ಲಿ (ಉಕ್ಕಲಗೆರೆ)ಮನೆ, ಜಮೀನು ಇರಲಿಲ್ಲ. ಮಳೆ-ಗಾಳಿ ಇರಲಿಲ್ಲ.

ಹಿಟ್ಟು- ಬಟ್ಟೆಗೆ ತೊಂದರೆಯಾಗಿ ತೋಟಕ್ಕೆ ಬಂದೆವು. ಅಲ್ಲಿಂದ ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡು ಬದುಕು ಕಟ್ಟಿಕೊಂಡು ಬಂದಿದ್ದೆವು. ಕಾಫಿ ತೋಟದಲ್ಲೇ ಮೂರು ಮನೆ ಕಟ್ಟಿಕೊಂಡು ಮೂರು ಗಂಡು ಮಕ್ಕಳು ಚೆನ್ನಾಗಿದ್ದರು. ಮೊಮ್ಮಕ್ಕಳು ಕಾಲೇಜು ಹೋಗುತ್ತಿದ್ದರು. ಒಬ್ಬ ಮೊಮ್ಮಗಳ ಮೃತದೇಹವನ್ನು ಅಡಕೆ ಮರ ತಡೆ ಹಿಡಿದಿದ್ದರಿಂದ ಸಿಕ್ಕಿಕೊಂಡಿದ್ದರಿಂದ ಸಿಕ್ಕಿದೆ. ಉಳಿದವರು ಏನಾದರು ಎನ್ನುವುದೇ ಗೊತ್ತಾಗುತ್ತಿಲ್ಲ ಅನ್ನುತ್ತಲೇ ಗಳಗಳನೆ ಕಣ್ಣೀರಿಟ್ಟರು.

 

ಇನ್ಯಾರು ನನಗೆ ದಿಕ್ಕು…
ಸಿದ್ದರಾಮಯ್ಯ ಅವರು, ಮನೆನೂ ಹೋಯ್ತಾ ಎನ್ನುತ್ತಿದ್ದಂತೆ, ಹೌದು ಸ್ವಾಮಿ, ಮೂರು ಮನೆಗಳು ತಾರಸಿದಂಗೆ ಮಟ್ಟ ಆಗೋಯ್ತು. ಇನ್ಯಾರು ಸ್ವಾಮಿ ನನಗೆ ದಿಕ್ಕು ಅಂದಾಗ, ಸಿದ್ದರಾಮಯ್ಯ ಅವರು ಯೋಚನೆ ಮಾಡಬೇಡಿ, ಕರ್ನಾಟಕ ಸರ್ಕಾರ ನಿಮ್ಮೊಂದಿಗೆ ಇದೆ. ನಿಮಗೆ ಬೇಕಾದ ಎಲ್ಲಾ ನೆರವನ್ನೂ ಕೊಡುತ್ತೇವೆ ಎಂದು ಭರವಸೆ ಕೊಟ್ಟರು.

 

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

9 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

9 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

9 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

9 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

10 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

10 hours ago