Andolana originals

ತನ್ನ ಕುಟುಂಬದವರನ್ನೆಲ್ಲಾ ಕಳೆದುಕೊಂಡು ಏಕಾಂಗಿಯಾದ ವೃದ್ಧೆ; ತಿ.ನರಸೀಪುರ ಮೂಲದ 9 ಮಂದಿ ಸಾವು

ಮೈಸೂರು: ಎಲ್ಲರನ್ನೂ ನೀರು ಹೊತ್ತುಕೊಂಡು ಹೋಯ್ತು ಸ್ವಾಮಿ… ಮೂರು ಮನೆಗಳೂ ಕೊಚ್ಚಿ ಹೋಗಿ ತಾರಿಸಿದಂಗೆ ಮಟ್ಟವಾಯ್ತು… ಮೂರು ಮನೆಯ ಮಕ್ಕಳೂ ಇಲ್ಲ. ಮೊಮ್ಮಗಳನ್ನು ಬಿಟ್ಟರೆ ಬೇರಾರೂ ಸಿಕ್ಕಲಿಲ್ಲ …

ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಕರೆ ಮಾಡಿ ವಯನಾಡು ಭೂ ಕುಸಿತ ದುರಂತದ ಸಂತ್ರಸ್ತರಾದ 70 ವರ್ಷ ವಯೋಮಾನದ ಮಹದೇವಿ ಅವರೊಂದಿಗೆ ಮಾತನಾಡಿದಾಗ ಕಣ್ಣೀರು ಹಾಕುತ್ತಲೇ, ಹೇಳಿದ ಮಾತುಗಳಿವು.


ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದ ಸಂತ್ರಸ್ತರಾಗಿರುವ ಮೂಲತಃ ಮೈಸೂರು ಜಿಲ್ಲೆಯ ತಿನರಸೀಪುರ ತಾಲ್ಲೂಕಿನ ಉಕ್ಕಲಗೆರೆ ಗ್ರಾಮದ ಮಹದೇವಿ ಅವರು ತಮ್ಮ ಕುಟುಂಬದ ಎಲ್ಲ 9 ಜನರನ್ನೂ ಕಳೆದುಕೊಂಡಿದ್ದು, ಮೃತದೇಹಗಳನ್ನು ಗುರುತಿಸಲು ಶವಾಗಾರದ ಬಳಿ ಕಾಯುತ್ತಿದ್ದಾಗ ದೂರವಾಣಿಯಲ್ಲಿ ಏನಾಗಿದೆ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆ, ಕಣ್ಣೀರಿನ ಕಡಲಾದರು.

ಏನು ಹೇಳಲಿ ಸ್ವಾಮಿ? ಎಲ್ಲರೂ ನೀರಿನಲ್ಲಿ ಕೊಚ್ಚಿ ಹೋದ್ರು, ಮನೆ ಎಲ್ಲ ಹೋಯ್ತು. 18 ವರ್ಷ ಇದ್ದಾಗಲೇ ಈ ಊರಿಗೆ, ಒಂದೂವರೆ ವರ್ಷದ ಮಗನನ್ನು ಕಂಕುಳಲ್ಲಿ ಇಟ್ಟುಕೊಂಡು ಬಂದೆ. ಊರಲ್ಲಿ (ಉಕ್ಕಲಗೆರೆ)ಮನೆ, ಜಮೀನು ಇರಲಿಲ್ಲ. ಮಳೆ-ಗಾಳಿ ಇರಲಿಲ್ಲ.

ಹಿಟ್ಟು- ಬಟ್ಟೆಗೆ ತೊಂದರೆಯಾಗಿ ತೋಟಕ್ಕೆ ಬಂದೆವು. ಅಲ್ಲಿಂದ ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡು ಬದುಕು ಕಟ್ಟಿಕೊಂಡು ಬಂದಿದ್ದೆವು. ಕಾಫಿ ತೋಟದಲ್ಲೇ ಮೂರು ಮನೆ ಕಟ್ಟಿಕೊಂಡು ಮೂರು ಗಂಡು ಮಕ್ಕಳು ಚೆನ್ನಾಗಿದ್ದರು. ಮೊಮ್ಮಕ್ಕಳು ಕಾಲೇಜು ಹೋಗುತ್ತಿದ್ದರು. ಒಬ್ಬ ಮೊಮ್ಮಗಳ ಮೃತದೇಹವನ್ನು ಅಡಕೆ ಮರ ತಡೆ ಹಿಡಿದಿದ್ದರಿಂದ ಸಿಕ್ಕಿಕೊಂಡಿದ್ದರಿಂದ ಸಿಕ್ಕಿದೆ. ಉಳಿದವರು ಏನಾದರು ಎನ್ನುವುದೇ ಗೊತ್ತಾಗುತ್ತಿಲ್ಲ ಅನ್ನುತ್ತಲೇ ಗಳಗಳನೆ ಕಣ್ಣೀರಿಟ್ಟರು.

 

ಇನ್ಯಾರು ನನಗೆ ದಿಕ್ಕು…
ಸಿದ್ದರಾಮಯ್ಯ ಅವರು, ಮನೆನೂ ಹೋಯ್ತಾ ಎನ್ನುತ್ತಿದ್ದಂತೆ, ಹೌದು ಸ್ವಾಮಿ, ಮೂರು ಮನೆಗಳು ತಾರಸಿದಂಗೆ ಮಟ್ಟ ಆಗೋಯ್ತು. ಇನ್ಯಾರು ಸ್ವಾಮಿ ನನಗೆ ದಿಕ್ಕು ಅಂದಾಗ, ಸಿದ್ದರಾಮಯ್ಯ ಅವರು ಯೋಚನೆ ಮಾಡಬೇಡಿ, ಕರ್ನಾಟಕ ಸರ್ಕಾರ ನಿಮ್ಮೊಂದಿಗೆ ಇದೆ. ನಿಮಗೆ ಬೇಕಾದ ಎಲ್ಲಾ ನೆರವನ್ನೂ ಕೊಡುತ್ತೇವೆ ಎಂದು ಭರವಸೆ ಕೊಟ್ಟರು.

 

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ಹಣಕ್ಕಾಗಿ ವೃದ್ದೆ ಕೊಲೆ ; ಶವವನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಕಿರಾತಕ

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…

2 days ago

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

2 days ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

2 days ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

2 days ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

2 days ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

2 days ago