Andolana originals

ತನ್ನ ಕುಟುಂಬದವರನ್ನೆಲ್ಲಾ ಕಳೆದುಕೊಂಡು ಏಕಾಂಗಿಯಾದ ವೃದ್ಧೆ; ತಿ.ನರಸೀಪುರ ಮೂಲದ 9 ಮಂದಿ ಸಾವು

ಮೈಸೂರು: ಎಲ್ಲರನ್ನೂ ನೀರು ಹೊತ್ತುಕೊಂಡು ಹೋಯ್ತು ಸ್ವಾಮಿ… ಮೂರು ಮನೆಗಳೂ ಕೊಚ್ಚಿ ಹೋಗಿ ತಾರಿಸಿದಂಗೆ ಮಟ್ಟವಾಯ್ತು… ಮೂರು ಮನೆಯ ಮಕ್ಕಳೂ ಇಲ್ಲ. ಮೊಮ್ಮಗಳನ್ನು ಬಿಟ್ಟರೆ ಬೇರಾರೂ ಸಿಕ್ಕಲಿಲ್ಲ …

ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಕರೆ ಮಾಡಿ ವಯನಾಡು ಭೂ ಕುಸಿತ ದುರಂತದ ಸಂತ್ರಸ್ತರಾದ 70 ವರ್ಷ ವಯೋಮಾನದ ಮಹದೇವಿ ಅವರೊಂದಿಗೆ ಮಾತನಾಡಿದಾಗ ಕಣ್ಣೀರು ಹಾಕುತ್ತಲೇ, ಹೇಳಿದ ಮಾತುಗಳಿವು.


ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದ ಸಂತ್ರಸ್ತರಾಗಿರುವ ಮೂಲತಃ ಮೈಸೂರು ಜಿಲ್ಲೆಯ ತಿನರಸೀಪುರ ತಾಲ್ಲೂಕಿನ ಉಕ್ಕಲಗೆರೆ ಗ್ರಾಮದ ಮಹದೇವಿ ಅವರು ತಮ್ಮ ಕುಟುಂಬದ ಎಲ್ಲ 9 ಜನರನ್ನೂ ಕಳೆದುಕೊಂಡಿದ್ದು, ಮೃತದೇಹಗಳನ್ನು ಗುರುತಿಸಲು ಶವಾಗಾರದ ಬಳಿ ಕಾಯುತ್ತಿದ್ದಾಗ ದೂರವಾಣಿಯಲ್ಲಿ ಏನಾಗಿದೆ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆ, ಕಣ್ಣೀರಿನ ಕಡಲಾದರು.

ಏನು ಹೇಳಲಿ ಸ್ವಾಮಿ? ಎಲ್ಲರೂ ನೀರಿನಲ್ಲಿ ಕೊಚ್ಚಿ ಹೋದ್ರು, ಮನೆ ಎಲ್ಲ ಹೋಯ್ತು. 18 ವರ್ಷ ಇದ್ದಾಗಲೇ ಈ ಊರಿಗೆ, ಒಂದೂವರೆ ವರ್ಷದ ಮಗನನ್ನು ಕಂಕುಳಲ್ಲಿ ಇಟ್ಟುಕೊಂಡು ಬಂದೆ. ಊರಲ್ಲಿ (ಉಕ್ಕಲಗೆರೆ)ಮನೆ, ಜಮೀನು ಇರಲಿಲ್ಲ. ಮಳೆ-ಗಾಳಿ ಇರಲಿಲ್ಲ.

ಹಿಟ್ಟು- ಬಟ್ಟೆಗೆ ತೊಂದರೆಯಾಗಿ ತೋಟಕ್ಕೆ ಬಂದೆವು. ಅಲ್ಲಿಂದ ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡು ಬದುಕು ಕಟ್ಟಿಕೊಂಡು ಬಂದಿದ್ದೆವು. ಕಾಫಿ ತೋಟದಲ್ಲೇ ಮೂರು ಮನೆ ಕಟ್ಟಿಕೊಂಡು ಮೂರು ಗಂಡು ಮಕ್ಕಳು ಚೆನ್ನಾಗಿದ್ದರು. ಮೊಮ್ಮಕ್ಕಳು ಕಾಲೇಜು ಹೋಗುತ್ತಿದ್ದರು. ಒಬ್ಬ ಮೊಮ್ಮಗಳ ಮೃತದೇಹವನ್ನು ಅಡಕೆ ಮರ ತಡೆ ಹಿಡಿದಿದ್ದರಿಂದ ಸಿಕ್ಕಿಕೊಂಡಿದ್ದರಿಂದ ಸಿಕ್ಕಿದೆ. ಉಳಿದವರು ಏನಾದರು ಎನ್ನುವುದೇ ಗೊತ್ತಾಗುತ್ತಿಲ್ಲ ಅನ್ನುತ್ತಲೇ ಗಳಗಳನೆ ಕಣ್ಣೀರಿಟ್ಟರು.

 

ಇನ್ಯಾರು ನನಗೆ ದಿಕ್ಕು…
ಸಿದ್ದರಾಮಯ್ಯ ಅವರು, ಮನೆನೂ ಹೋಯ್ತಾ ಎನ್ನುತ್ತಿದ್ದಂತೆ, ಹೌದು ಸ್ವಾಮಿ, ಮೂರು ಮನೆಗಳು ತಾರಸಿದಂಗೆ ಮಟ್ಟ ಆಗೋಯ್ತು. ಇನ್ಯಾರು ಸ್ವಾಮಿ ನನಗೆ ದಿಕ್ಕು ಅಂದಾಗ, ಸಿದ್ದರಾಮಯ್ಯ ಅವರು ಯೋಚನೆ ಮಾಡಬೇಡಿ, ಕರ್ನಾಟಕ ಸರ್ಕಾರ ನಿಮ್ಮೊಂದಿಗೆ ಇದೆ. ನಿಮಗೆ ಬೇಕಾದ ಎಲ್ಲಾ ನೆರವನ್ನೂ ಕೊಡುತ್ತೇವೆ ಎಂದು ಭರವಸೆ ಕೊಟ್ಟರು.

 

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

2 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

3 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

3 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

6 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

8 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

9 hours ago