ಮೈಸೂರು: ಎಲ್ಲರನ್ನೂ ನೀರು ಹೊತ್ತುಕೊಂಡು ಹೋಯ್ತು ಸ್ವಾಮಿ… ಮೂರು ಮನೆಗಳೂ ಕೊಚ್ಚಿ ಹೋಗಿ ತಾರಿಸಿದಂಗೆ ಮಟ್ಟವಾಯ್ತು… ಮೂರು ಮನೆಯ ಮಕ್ಕಳೂ ಇಲ್ಲ. ಮೊಮ್ಮಗಳನ್ನು ಬಿಟ್ಟರೆ ಬೇರಾರೂ ಸಿಕ್ಕಲಿಲ್ಲ …
ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಕರೆ ಮಾಡಿ ವಯನಾಡು ಭೂ ಕುಸಿತ ದುರಂತದ ಸಂತ್ರಸ್ತರಾದ 70 ವರ್ಷ ವಯೋಮಾನದ ಮಹದೇವಿ ಅವರೊಂದಿಗೆ ಮಾತನಾಡಿದಾಗ ಕಣ್ಣೀರು ಹಾಕುತ್ತಲೇ, ಹೇಳಿದ ಮಾತುಗಳಿವು.
ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದ ಸಂತ್ರಸ್ತರಾಗಿರುವ ಮೂಲತಃ ಮೈಸೂರು ಜಿಲ್ಲೆಯ ತಿನರಸೀಪುರ ತಾಲ್ಲೂಕಿನ ಉಕ್ಕಲಗೆರೆ ಗ್ರಾಮದ ಮಹದೇವಿ ಅವರು ತಮ್ಮ ಕುಟುಂಬದ ಎಲ್ಲ 9 ಜನರನ್ನೂ ಕಳೆದುಕೊಂಡಿದ್ದು, ಮೃತದೇಹಗಳನ್ನು ಗುರುತಿಸಲು ಶವಾಗಾರದ ಬಳಿ ಕಾಯುತ್ತಿದ್ದಾಗ ದೂರವಾಣಿಯಲ್ಲಿ ಏನಾಗಿದೆ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆ, ಕಣ್ಣೀರಿನ ಕಡಲಾದರು.
ಏನು ಹೇಳಲಿ ಸ್ವಾಮಿ? ಎಲ್ಲರೂ ನೀರಿನಲ್ಲಿ ಕೊಚ್ಚಿ ಹೋದ್ರು, ಮನೆ ಎಲ್ಲ ಹೋಯ್ತು. 18 ವರ್ಷ ಇದ್ದಾಗಲೇ ಈ ಊರಿಗೆ, ಒಂದೂವರೆ ವರ್ಷದ ಮಗನನ್ನು ಕಂಕುಳಲ್ಲಿ ಇಟ್ಟುಕೊಂಡು ಬಂದೆ. ಊರಲ್ಲಿ (ಉಕ್ಕಲಗೆರೆ)ಮನೆ, ಜಮೀನು ಇರಲಿಲ್ಲ. ಮಳೆ-ಗಾಳಿ ಇರಲಿಲ್ಲ.
ಹಿಟ್ಟು- ಬಟ್ಟೆಗೆ ತೊಂದರೆಯಾಗಿ ತೋಟಕ್ಕೆ ಬಂದೆವು. ಅಲ್ಲಿಂದ ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡು ಬದುಕು ಕಟ್ಟಿಕೊಂಡು ಬಂದಿದ್ದೆವು. ಕಾಫಿ ತೋಟದಲ್ಲೇ ಮೂರು ಮನೆ ಕಟ್ಟಿಕೊಂಡು ಮೂರು ಗಂಡು ಮಕ್ಕಳು ಚೆನ್ನಾಗಿದ್ದರು. ಮೊಮ್ಮಕ್ಕಳು ಕಾಲೇಜು ಹೋಗುತ್ತಿದ್ದರು. ಒಬ್ಬ ಮೊಮ್ಮಗಳ ಮೃತದೇಹವನ್ನು ಅಡಕೆ ಮರ ತಡೆ ಹಿಡಿದಿದ್ದರಿಂದ ಸಿಕ್ಕಿಕೊಂಡಿದ್ದರಿಂದ ಸಿಕ್ಕಿದೆ. ಉಳಿದವರು ಏನಾದರು ಎನ್ನುವುದೇ ಗೊತ್ತಾಗುತ್ತಿಲ್ಲ ಅನ್ನುತ್ತಲೇ ಗಳಗಳನೆ ಕಣ್ಣೀರಿಟ್ಟರು.
ಇನ್ಯಾರು ನನಗೆ ದಿಕ್ಕು…
ಸಿದ್ದರಾಮಯ್ಯ ಅವರು, ಮನೆನೂ ಹೋಯ್ತಾ ಎನ್ನುತ್ತಿದ್ದಂತೆ, ಹೌದು ಸ್ವಾಮಿ, ಮೂರು ಮನೆಗಳು ತಾರಸಿದಂಗೆ ಮಟ್ಟ ಆಗೋಯ್ತು. ಇನ್ಯಾರು ಸ್ವಾಮಿ ನನಗೆ ದಿಕ್ಕು ಅಂದಾಗ, ಸಿದ್ದರಾಮಯ್ಯ ಅವರು ಯೋಚನೆ ಮಾಡಬೇಡಿ, ಕರ್ನಾಟಕ ಸರ್ಕಾರ ನಿಮ್ಮೊಂದಿಗೆ ಇದೆ. ನಿಮಗೆ ಬೇಕಾದ ಎಲ್ಲಾ ನೆರವನ್ನೂ ಕೊಡುತ್ತೇವೆ ಎಂದು ಭರವಸೆ ಕೊಟ್ಟರು.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…