ಜಿಪಿಎಸ್ ವಾಕಿಟಾಕಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ
ಎಸ್ಒಪಿ ಬಿಡುಗಡೆ ಮಾಡಿದ ಸಚಿವ ಈಶ್ವರ್ ಖಂಡ್ರೆ
ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ಚಾರಣಿಗರ ಸುರಕ್ಷತೆಗಾಗಿ ರೂಪಿಸಲಾಗಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್ಒಪಿ) ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ರತಿ ೧೦ ಚಾರಣಿಗರಿಗೆ ಒಬ್ಬರು ಸ್ಥಳೀಯ ಪ್ರಕೃತಿ ಮಾರ್ಗದರ್ಶಕರಿರುತ್ತಾರೆ. ಎಲ್ಲ ಚಾರಣ ಪಥಗಳಲ್ಲಿ ಒಂದು ಬಾರಿಗೆ ಗರಿಷ್ಟ ೧೫೦ ಜನರಿಗೆ ಮಾತ್ರ ಸೀಮಿತದೊಳಿಸಲಾಗುವುದು. ಚಾರಣಕ್ಕೆ ಬರುವವರು ಆನ್ಲೈನ್ನಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯ. ಒಂದೊಮ್ಮೆ ಯಾವುದೇ ದಿನ ಒಬ್ಬರೇ ಚಾರಣಿಗರು ನೋಂದಾಯಿಸಿದ್ದರೂ ಗೈಡ್ ಸೌಲಭ್ಯ ಕಲ್ಪಿಸಲಾಗುವುದು, ಗೈಡ್ ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ ಎಂದರು.
ಕೇರಳದಿಂದ ಚಾರಣಕ್ಕೆ ಬಂದಿದ್ದ ಯುವತಿ ನಾಪತ್ತೆಯಾಗಿ ಕಾಡಿನಲ್ಲಿ ೩ ದಿನ ಕಳೆಯುವಂತಾದ ಹಾಗೂ ಅರಣ್ಯ ವ್ಯಾಪ್ತಿಗೆ ಒಳಪಡದ ಚಿಕ್ಕಮಗಳೂರಿನ ಮಾಣಿಕ್ಯಧಾರಾ ಬಳಿ ನಾಪತ್ತೆಯಾಗಿ ಶವವಾಗಿ ಬಾಲಕಿ ಪತ್ತೆಯಾದ ಹಿನ್ನೆಲೆಯಲ್ಲಿ ಚಾರಣಿಗರ ಸುರಕ್ಷತೆಗಾಗಿ ಈ ಎಸ್.ಓ.ಪಿ. ರೂಪಿಸಲು ಸೂಚಿಸಿದ್ದಾಗಿ ಅವರು ತಿಳಿಸಿದರು.
ಜಿಪಿಎಸ್ ಅಳವಡಿಸಿದ ವಾಕಿಟಾಕಿ: ಇನ್ನು ಮುಂದೆ ಪ್ರತಿಯೊಂದು ಚಾರಣಪಥದಲ್ಲೂ ನೇಚರ್ ಗೈಡ್ಗಳಿಗೆ ಜಿ.ಪಿ.ಎಸ್. ಅಳವಡಿಸಿದ ವಾಕಿ ಟಾಕಿಯನ್ನು ಕಡ್ಡಾಯವಾಗಿ] ನೀಡಲಾಗುವುದು. ಅದೇ ರೀತಿ ಪ್ರತಿಯೊಬ್ಬ ಚಾರಣಿಗರ ಮೊಬೈಲ್ಗೂ ಚಾರಣಪಥದ ನಕ್ಷೆ ಸಹಿತ ಆಪ್ ಅನ್ನು ಅಳವಡಿಸಲಾಗುವುದು. ಅಕಸ್ಮಾತ್ ಯಾರೇ ಚಾರಣಿಗರು ದಾರಿ ತಪ್ಪಿದರೂ ಅವರ ಶೋಧಕ್ಕೆ ಈ ಆಪ್ ಸಹಕಾರಿಯಾಗಲಿದೆ ಎಂದರು.
ಬೇಸ್ ಕ್ಯಾಂಪ್ನಲ್ಲಿ ಮೂಲಸೌಕರ್ಯ: ಚಾರಣ ಆರಂಭಕ್ಕೂ ಮುನ್ನ ಮೂಲ ನೆಲೆಯಲ್ಲಿ ಚಾರಣಿಗರಿಗೆ ಸಂಕ್ಷಿಪ್ತವಾಗಿ ಚಾರಣದ ದೂರ, ಅವಧಿ ಮತ್ತು ಅಲ್ಲಿನ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಲಾಗುವುದು. ಅದೇ ರೀತಿ ವನ್ಯಜೀವಿಗಳು ಎದುರಾದರೆ ಏನು ಮಾಡಬೇಕು ಎಂದೂ ತಿಳಿಸಲಾಗುವುದು. ಮೂಲ ನೆಲೆಯಲ್ಲಿ ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು. ಚಾರಣ ಪಥದಲ್ಲಿ ಬೇಸ್ ಕ್ಯಾಂಪ್ಗೆ ಹೋಗುವ ಮಾರ್ಗಸೂಚಿ, ಬಾಣದಾಕಾರದ ಗುರುತು ಹಾಕಲಾಗುವುದು. ಮಾರ್ಗಮಧ್ಯೆ ವಿರಮಿಸಿಕೊಳ್ಳಲು ವಿಶ್ರಾಂತಿ ತಾಣ ನಿರ್ಮಾಣ ಮಾಡಲಾಗುವುದು ಎಂದು ವಿವರಿಸಿದರು.
ಗೈಡ್ಗಳಿಗೆ ಹೊಣೆಗಾರಿಕೆ: ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕರು (ಗೈಡ್) ಯಾವುದೇ ಚಾರಣಿಗ ತಮಗಿಂತ ಮುಂದೆ ಹೋಗಿಲ್ಲ ಹಾಗೂ ಹಿಂದೆ ಉಳಿದಿಲ್ಲ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು. ಬೇಸ್ ಕ್ಯಾಂಪ್, ವಿಶ್ರಾಂತಿ ತಾಣಗಳಲ್ಲಿ ಕಡ್ಡಾಯವಾಗಿ ಚಾರಣಿಗರ ಎಣಿಕೆ ಮಾಡಬೇಕು. ಪ್ರತಿ ಅರ್ಧಗಂಟೆಗೊಮ್ಮೆ ತಮ್ಮ ವಾಕಿ ಟಾಕಿ ಮೂಲಕ ಬೇಸ್ ಕ್ಯಾಂಪ್ನೊಂದಿಗೆ ಸಂವಹನ ನಡೆಸಬೇಕು. ಚಾರಣಿಗರ ಜವಾಬ್ದಾರಿ ಹೊರುವಂತೆ ಅವರಿಗೆ ಹೊಣೆಗಾರಿಕೆ ನೀಡಲಾಗುವುದು. ಚಾರಣ ಆರಂಭವಾದ ಒಂದು ಗಂಟೆಯೊಳಗೆ ವಾಕಿ ಟಾಕಿ ಸಂವಹನ ಗೈಡ್ ಕಡೆಯಿಂದ ನಡೆಯದಿದ್ದರೆ ಬೇಸ್ ಕ್ಯಾಂಪ್ ಸಿಬ್ಬಂದಿಯೇ ಕರೆ ಮಾಡಿ ಖಚಿತಪಡಿಸಿಕೊಳ್ಳುತ್ತಾರೆ ಎಂದು ತಿಳಿಸಿದರು.
ಅಪ್ರಾಪ್ತ ವಯಸ್ಕರಿಗೆ ಪೋಷಕರ ಅನುಮತಿ ಅಗತ್ಯ: ಅಪ್ರಾಪ್ತ ವಯಸ್ಕರು ಚಾರಣಕ್ಕೆ ತೆರಳಲು ಅವರ ಪಾಲಕರ, ಪೋಷಕರ ಅನುಮತಿ ಪತ್ರ ಕಡ್ಡಾಯ. ಅದೇ ರೀತಿ ಹಿರಿಯ ನಾಗರಿಕರು ಚಾರಣ ಕೈಗೊಳ್ಳಲು ತಮ್ಮ ದೈಹಿಕ ಸಾಮರ್ಥ್ಯ ಮತ್ತು ಸದೃಢತೆಯ ಪ್ರಮಾಣ ಪತ್ರ ಒದಗಿಸಬೇಕಾಗುತ್ತದೆ.
-ಈಶ್ವರ ಬಿ.ಖಂಡ್ರೆ, ಅರಣ್ಯ ಸಚಿವ
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…