Andolana originals

ಅಂಬೇಡ್ಕರ್ ಜೀವನವನ್ನು ಬಿಚ್ಚಿಟ್ಟ ನಾಟಕ!

ಮೈಸೂರು: ಹಿರಿಯ ರಂಗಕರ್ಮಿ ಅಡ್ಡಂಡ ಸಿ. ಕಾರ್ಯಪ್ಪ ನಿರ್ದೇಶನದ ‘ನಿಜ ಮಹಾತ್ಮ ಬಾಬಾ ಸಾಹೇಬ’ ನಾಟಕ ಸೋಮವಾರ ಸಂಜೆ ಕಿರುರಂಗ ಮಂದಿರದಲ್ಲಿ ಚೊಚ್ಚಲ ಸಾರ್ವಜನಿಕ ಪ್ರದರ್ಶನ ಕಂಡಿತು.

ಡಾ.ಬಿ.ಆರ್.ಅಂಬೇಡ್ಕರ್ ಜೀವನಾಧಾರಿತ ನಾಟಕವೂ ಅಂಬೇಡ್ಕರ್ ನಿಷ್ಠುರತೆ, ಆರ್‌ಎಸ್‌ಎಸ್ ಕುರಿತು ಅವರಿಗಿದ್ದ ನಿಲುವು, ಭಾರತ-ಪಾಕಿಸ್ತಾನ ವಿಭಜನೆಯ ಸಂದರ್ಭದಲ್ಲಿ ಮುಸಲ್ಮಾನರ ಬಗ್ಗೆ ಅವರ ಅಭಿಪ್ರಾಯ, ಕಾಂಗ್ರೆಸ್ ಮುಚ್ಚಿಟ್ಟಿದೆ ಎನ್ನಲಾದ ಸಂಗತಿಗಳನ್ನು ರಂಗದ ಮೇಲೆ ಬಿಚ್ಚುಟ್ಟು ನೆರೆದಿದ್ದ ಪ್ರೇಕ್ಷಕರಿಂದ ಸೈ ಎನಿಸಿಕೊಂಡಿತು.

ಅಂಬೇಡ್ಕರ್ ಸಾಯುವವರೆಗೆ, ಸತ್ತ ಮೇಲೂ ಅವಮಾನಿಸಿದ, ಅವರ ಸಾಧನೆಗಳನ್ನು ಮರೆಯಲ್ಲಿಟ್ಟಿದ್ದ ಕಾಂಗ್ರೆಸ್, ವೋಟ್ ಬ್ಯಾಂಕ್‌ಗಾಗಿ ಅವರ ಹೆಸರು, ಭಾವಚಿತ್ರ ಬಳಸಿಕೊಳ್ಳುತ್ತಿದೆ. ಅವರ ವಿಷಯದಲ್ಲಿ ಬಚ್ಚಿಟ್ಟ ಅನೇಕ ಸಂಗತಿಗಳನ್ನು ಬಿಚ್ಚಿಡುವ ಪ್ರಯತ್ನವನ್ನೇ ಮಾಡುತ್ತಿದೆ ಎನ್ನುವುದನ್ನು ರಂಗರೂಪದಲ್ಲಿ ಕಟ್ಟಿಕೊಡಲಾಯಿತು.

ಡಾ.ಬಿ.ಆರ್.ಅಂಬೇಡ್ಕರ್ ನಿಧನಕ್ಕೆ ಸ್ಥಳ ಕೊಡಲು ನೆಹರು ಒಪ್ಪಲಿಲ್ಲ ಎನ್ನಲಾಗುವ ಸನ್ನಿವೇಶ ಕಾಂಗ್ರೆಸ್ ಅಂಬೇಡ್ಕರ್‌ಗೆ ಮಾಡಿತ್ತು ಎನ್ನಲಾಗುವ ದ್ರೋಹಗಳು ಮತ್ತು ಮುಸ್ಲಿಂರ ಬಗ್ಗೆ ಅಂಬೇಡ್ಕರ್ ಅವರಿಗಿದ್ದ ನಿಲುವುಗಳು ಅಡ್ಡಂಡ ಕಾರ್ಯಪ್ಪ ನಿರ್ದೇಶನದಲ್ಲಿ ಮೂಡಿ ಬಂದು ಪ್ರೇಕ್ಷಕರ ಮನ ಗೆದ್ದಿತ್ತು. ಲಿಖಿತ ಎಂಬವರು ಅಂಬೇಡ್ಕರ್ ಪಾತ್ರದಲ್ಲಿ ಮತ್ತು ಅನಿತಾ ಕಾರ್ಯಪ್ಪ ಸವಿತಾ ಅಂಬೇಡ್ಕರ್ ಪಾತ್ರದಲ್ಲಿ ನಟಿಸಿ ಚಪ್ಪಾಳೆ ಗಿಟ್ಟಿಸಿದರು.

ನಟರಾದ ಮನೋಜ್‌ಕುಮಾರ್, ಎಂ.ಮಧು, ಸಚಿನ್ ಭಟ್, ಶಿವಕುಮಾರ್, ಸರ್ವೇಶ್, ಶರಣು ಬಸವ ಯಲವ, ಗೌಡ ಅಶೋಕ್, ಶ್ರೇಯಸ್ ಅವರು ಸುಧಾಮ, ನಾನಕ್ ಚಂದ್ ರತ್ತು, ಭಗತ್ ಅಮೀನ್ ಚಂದ್, ಜವಾಹರಲಾಲ್ ನೆಹರು, ದತ್ತೋಪಂಥ ಠೇಂಗಡಿ, ಟಿ.ವಿ.ಬೋನ್ ಸ್ಲೆ, ಶಂಕರಾನಂದ ಶಾಸಿ, ಗಾಯಕವಾಡ್, ಮಹಾತ್ಮ ಗಾಂಧಿ, ವೀರ ಸವರ್ಕರ್, ಡಾ.ಬಾಬು ರಾಜೇಂದ್ರ ಪ್ರಸಾದ್ ಪಾತ್ರಗಳನ್ನು ಅಭಿನಯಿಸಿ ಸೈ ಅನಿಸಿಕೊಂಡರು. ರವಿ ಮೂರೂರು ಸಂಗೀತ, ಸುಬ್ರಹ್ಮಣ್ಯ ಮೈಸೂರು ಧ್ವನಿ ವಿನ್ಯಾಸ, ತೀರ್ಥಹಳ್ಳಿ ಶಿವಕುಮಾರ್ ಬೆಳಕಿನ ಸಂಯೋಜನೆಯಲ್ಲಿ ತೊಡಗಿದ್ದರು.

” ಅಂಬೇಡ್ಕರ್ ಅವರು ಹಿಂದೂ ಧರ್ಮವನ್ನು ಬೈದಿರುವುದನ್ನುನಾಟಕದಲ್ಲಿ ತೋರಿಸಲಾಗಿದೆ. ಇದರ ಜೊತೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಮೆಚ್ಚಿಕೊಂಡು ಹಾಡಿರುವ ಪ್ರಸಂಗವೂ ನಾಟಕದಲ್ಲಿದೆ. ಸಚಿವ ಪ್ರಿಯಾಂಕ್ ಖರ್ಗೆ ಈ ಸತ್ಯವನ್ನು ಓದಿಲ್ಲ. ಹೀಗಾಗಿ ನಾಟಕದ ಮೂಲಕ ನಾವು ಈ ಸತ್ಯವನ್ನು ತೋರಿಸುತ್ತೇವೆ. ಸಾಧ್ಯವಾದರೆ ವಿಧಾನಸೌಧದಲ್ಲಿ ಪ್ರದರ್ಶನಕ್ಕೆ ಅನುವು ಮಾಡಿಕೊಡಲಿ.”

-ಅಡ್ಡಂಡ ಸಿ.ಕಾರ್ಯಪ್ಪ, ಹಿರಿಯ ರಂಗಕರ್ಮಿ

೨೦೦ ಟಿಕೆಟ್‌ಗಳು ಸಂಪೂರ್ಣ ಮಾರಾಟ: ಕಾರ್ಯಪ್ಪ

ಮೈಸೂರು: ೨ ತಿಂಗಳ ಕಾಲ ಹರಿವಿದ್ಯಾಲಯದಲ್ಲಿ ತಾಲೀಮು ನಡೆಸಿ ನಾಟಕ ಪ್ರದರ್ಶನ ಮಾಡಲಾಗು ತ್ತಿದೆ. ಸಂಪೂರ್ಣ ಹೊಸ ಕಲಾವಿದರೇ ನಾಟಕದಲ್ಲಿ ಅಭಿನಯಿಸಿದ್ದಾರೆ. ಇಂದಿನ ಪ್ರದರ್ಶನದ ೨೦೦ ಟಿಕೆಟ್ ಗಳೂ ಸಂಪೂರ್ಣವಾಗಿ ಮಾರಾಟವಾಗಿವೆ ಎಂದು ಹಿರಿಯ ರಂಗಕರ್ಮಿ ಅಡ್ಡಂಡ ಸಿ.ಕಾರ್ಯಪ್ಪ ತಿಳಿಸಿದರು.

ಜೈಲಿಗೆ ಹೋಗಲು ಸಿದ್ಧ: ಸ್ವಯಂ ಸೇವಕನೆ ಪ್ರಧಾನಿ, ರಾಷ್ಟ್ರಪತಿಗಳೇ ಸ್ವಯಂ ಸೇವಕ ಸಂಘದವರು, ದೇಶದ ಅನೇಕ ರಾಜ್ಯದ ಮುಖ್ಯಮಂತ್ರಿಗಳು, ರಾಜ್ಯಪಾಲರು ಸ್ವಯಂ ಸೇವಕರ ಸಂಘದವರೇ. ಸಚಿವ ಪ್ರಿಯಾಂಕ್ ಖರ್ಗೆಗೆ ಇತಿಹಾಸ ತಿಳಿದಿಲ್ಲ. ಸರ್ಕಾರದ ಜಾಗದಲ್ಲಿ ಆರ್‌ಎಸ್‌ಎಸ್ ನಿಷೇಧಿಸುತ್ತೇವೆ ಎನ್ನಲು ಸರ್ಕಾರಿ ಜಾಗಗಳು ಯಾರಪ್ಪಂದು ಅಲ್ಲ ಎಂದರು. ದೇವಸ್ಥಾನಕ್ಕೆ ಕಲ್ಲು ಹೊಡೆದವರು, ಪಾಕಿಸ್ತಾನ ಜಿಂದಾಬಾದ್ ಎನ್ನುವವರನ್ನು ಏಕೆ ಬ್ಯಾನ್ ಮಾಡಲಿಲ್ಲ. ರಾಷ್ಟ್ರ ಭಕ್ತರನ್ನು ಬ್ಯಾನ್ ಮಾಡು ವುದು ಒಂದು ಸಮುದಾಯದ ವೋಟಿಗಾಗಿ. ಆದರೆ, ಸ್ವಯಂ ಸೇವಕರಿಗೆ ದೇಶ ಮುಖ್ಯ. ಜೈಲಿಗೆ ಹೋಗಲು ನಾವು ಸಿದ್ಧ. ಸತ್ಯ ಹೇಳುವುದನ್ನು ನಿಲ್ಲಿಸುವುದಿಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

2 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

3 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

4 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

5 hours ago

ಜೂನ್.‌19ಕ್ಕೆ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಓಪನ್:‌ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್‌ ಮತ್ತು ಅಮೇರಿಕಾ ನಡುವಿನ ಒಪ್ಪಂದ್‌ ನಂತರ ಶುಕ್ರವಾರದಿಂದ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…

6 hours ago

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

9 hours ago