ದಟ್ಟಕಾಡಿನ ನಡುವೆ ಗೂಡುಗಳಂತಹ ಮನೆಯಲ್ಲಿ ಉಸಿರು ಕೈಯಲ್ಲಿ ಹಿಡಿದು ದಿನ ಕಳೆಯುತ್ತಿದ್ದ ಇಂಡಿಗನತ್ತ ಗ್ರಾಮದ ಜನರ ಪಾಡುಗಳನ್ನು ಮಾನವೀಯತೆಯ ಅಂತರಂಗದ ಕಣ್ಣಿನಿಂದ ನೋಡಿ, ಸವಿಸ್ತಾರವಾದ ವರದಿ (ಮೇ 13ರ ಸಂಚಿಕೆ) ಮಾಡಿದ್ದಕ್ಕೆ ‘ಆಂದೋಲನ’ ದಿನಪತ್ರಿಕೆಗೆ ಧನ್ಯ ವಾದಗಳು. ಈ ವರದಿಯ ಹಿನ್ನೆಲೆಯಲ್ಲಿ ತಕ್ಷಣ ಸ್ಥಳಕ್ಕೆ ತೆರಳಿ ಮೂರ್ನಾಲ್ಕು ಕಿ.ಮೀ. ಕಾಲ್ನಡಿಗೆಯಲ್ಲಿ ಸಾಗಿ, ನೊಂದವರ ಧ್ವನಿಗೆ ಕಿವಿಯಾದ ಚಾಮರಾಜನಗರ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅವರ ಕಾರ್ಯದಕ್ಷತೆ ಪ್ರಶಂಸಾರ್ಹ.
ಏ.26ರಂದು ಲೋಕಸಭಾ ಚುನಾವಣೆಯ ಮತದಾನದ ಸಂದರ್ಭದಲ್ಲಿ ಇಂಡಿಗನತ್ತ ಗ್ರಾಮದಲ್ಲಿ ನಡೆದ ಮತಗಟ್ಟೆ ಧ್ವಂಸ ಪ್ರಕರಣಕ್ಕೆ ಕಾರಣಗಳೇನಾದರೂ ಆಗಿರಲಿ, ತಪ್ಪು ಮಾಡಿದವರಿಗೆ ಶಿಕ್ಷೆಯೂ ಆಗಬೇಕು. ಆದರೆ, ಕಾನೂನು ಅರಿವಿಲ್ಲದ ನಿಷ್ಪಾಪಿ ಜನರು ಅನುಭವಿಸುತ್ತಿರುವ ಯಾತನೆಗಳನ್ನು ಕಣ್ಣಿಗೆ ಕಟ್ಟುವಂತೆ ಸಮಗ್ರವಾಗಿ ನೀಡಿದ್ದು, ಕೇವಲ ಜನರಲ್ಲದೆ, ಅಲ್ಲಿನ ಜಾನುವಾರುಗಳೂ ಮೇವು, ನೀರು ಇಲ್ಲದೆ ಅಸು ನೀಗುವಂತಹ ಸ್ಥಿತಿಗೆ ತಲುಪಿದ್ದ ವರದಿಗಾರಿಕೆ ಓದುಗರನ್ನು ಚಿಂತನೆಗೆ ಹಚ್ಚಿದೆ ಎಂದರೆ ಅತಿಶಯೋಕ್ತಿ ಅಲ್ಲ. ‘ಆಂದೋಲನ’ದ ಇಂತಹ ಮಾನವೀಯ ವರದಿಗಳ ಜೈತ್ರಯಾತ್ರೆ ನಿರಂತರವಾಗಿ ಮುಂದುವರಿಯಲಿ.
-ಎಂ.ಜಿ.ರಂಗಸ್ವಾಮಯ್ಯ, ಭೀಮನಗರ, ಚಾಮರಾಜನಗರ.
ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ ಮಡಿಕೇರಿ: ಡಿ.೨೦…
ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ…
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…