ದಟ್ಟಕಾಡಿನ ನಡುವೆ ಗೂಡುಗಳಂತಹ ಮನೆಯಲ್ಲಿ ಉಸಿರು ಕೈಯಲ್ಲಿ ಹಿಡಿದು ದಿನ ಕಳೆಯುತ್ತಿದ್ದ ಇಂಡಿಗನತ್ತ ಗ್ರಾಮದ ಜನರ ಪಾಡುಗಳನ್ನು ಮಾನವೀಯತೆಯ ಅಂತರಂಗದ ಕಣ್ಣಿನಿಂದ ನೋಡಿ, ಸವಿಸ್ತಾರವಾದ ವರದಿ (ಮೇ 13ರ ಸಂಚಿಕೆ) ಮಾಡಿದ್ದಕ್ಕೆ ‘ಆಂದೋಲನ’ ದಿನಪತ್ರಿಕೆಗೆ ಧನ್ಯ ವಾದಗಳು. ಈ ವರದಿಯ ಹಿನ್ನೆಲೆಯಲ್ಲಿ ತಕ್ಷಣ ಸ್ಥಳಕ್ಕೆ ತೆರಳಿ ಮೂರ್ನಾಲ್ಕು ಕಿ.ಮೀ. ಕಾಲ್ನಡಿಗೆಯಲ್ಲಿ ಸಾಗಿ, ನೊಂದವರ ಧ್ವನಿಗೆ ಕಿವಿಯಾದ ಚಾಮರಾಜನಗರ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅವರ ಕಾರ್ಯದಕ್ಷತೆ ಪ್ರಶಂಸಾರ್ಹ.
ಏ.26ರಂದು ಲೋಕಸಭಾ ಚುನಾವಣೆಯ ಮತದಾನದ ಸಂದರ್ಭದಲ್ಲಿ ಇಂಡಿಗನತ್ತ ಗ್ರಾಮದಲ್ಲಿ ನಡೆದ ಮತಗಟ್ಟೆ ಧ್ವಂಸ ಪ್ರಕರಣಕ್ಕೆ ಕಾರಣಗಳೇನಾದರೂ ಆಗಿರಲಿ, ತಪ್ಪು ಮಾಡಿದವರಿಗೆ ಶಿಕ್ಷೆಯೂ ಆಗಬೇಕು. ಆದರೆ, ಕಾನೂನು ಅರಿವಿಲ್ಲದ ನಿಷ್ಪಾಪಿ ಜನರು ಅನುಭವಿಸುತ್ತಿರುವ ಯಾತನೆಗಳನ್ನು ಕಣ್ಣಿಗೆ ಕಟ್ಟುವಂತೆ ಸಮಗ್ರವಾಗಿ ನೀಡಿದ್ದು, ಕೇವಲ ಜನರಲ್ಲದೆ, ಅಲ್ಲಿನ ಜಾನುವಾರುಗಳೂ ಮೇವು, ನೀರು ಇಲ್ಲದೆ ಅಸು ನೀಗುವಂತಹ ಸ್ಥಿತಿಗೆ ತಲುಪಿದ್ದ ವರದಿಗಾರಿಕೆ ಓದುಗರನ್ನು ಚಿಂತನೆಗೆ ಹಚ್ಚಿದೆ ಎಂದರೆ ಅತಿಶಯೋಕ್ತಿ ಅಲ್ಲ. ‘ಆಂದೋಲನ’ದ ಇಂತಹ ಮಾನವೀಯ ವರದಿಗಳ ಜೈತ್ರಯಾತ್ರೆ ನಿರಂತರವಾಗಿ ಮುಂದುವರಿಯಲಿ.
-ಎಂ.ಜಿ.ರಂಗಸ್ವಾಮಯ್ಯ, ಭೀಮನಗರ, ಚಾಮರಾಜನಗರ.
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…