Andolana originals

ಬಿಸಿಲ ಬೇಗೆ ತಣಿಸಲು ಮಡಕೆಗಳ ಸಾಲು

ಚಿರಂಜೀವಿ ಸಿ.ಹುಲ್ಲಹಳ್ಳಿ

ತಣ್ಣನೆ ನೀರಿಗಾಗಿ ಮಡಕೆಗಳಿಗೆ ಮಾರುಹೋದ ಜನರು 

ಮಣ್ಣಿನ ಮಡಕೆಗಳಿಗೆ ಆಧುನಿಕ ಕಲಾ ಸ್ಪರ್ಶ

ನಲ್ಲಿ ಅಳವಡಿಸಿರುವ ಮಡಕೆಗಳೂ ಲಭ್ಯ

ಗುಜರಾತ್‌ನಿಂದ ೯ ಲೋಡ್ ಮಡಕೆಗಳ ಆಮದು

೨೦೦ ರಿಂದ ೧,೦೦೦ ರೂ.ವರೆಗೆ ಬಿಕರಿ

೪ ಲೀಟರ್‌ನಿಂದ ೨೦ ಲೀಟರ್‌ವರೆಗೆ ಮಡಕೆಗಳು ಮಾರಾಟಕ್ಕೆ ಲಭ್ಯವಿವೆ. ಕನಿಷ್ಠ ೨೦೦ ರೂ.ಗಳಿಂದ ಸಾವಿರ ರೂ.ಗಳವರೆಗೆ ಮಡಕೆಗಳನ್ನು ಬಿಕರಿ ಮಾಡಲಾಗುತ್ತಿದೆ. ಗ್ರಾಹಕರು ಚೌಕಾಸಿ ಮಾಡುತ್ತ ಮಡಕೆಗಳನ್ನು ಖರೀದಿಸುತ್ತಿದ್ದಾರೆ.

ಮೈಸೂರು: ನೆತ್ತಿ ಸುಡುವ ಬಿಸಿಲಿನಿಂದ ಬಸವಳಿದು ಗಂಟಲು ಒಣಗಿದಾಗ ಒಂದಿಷ್ಟು ಕುಡಿಯಲು ನೀರು ಸಿಕ್ಕಿದರೆ ಸಾಕು. ಆ ನೀರು ತಣ್ಣಗೆ ಮಣ್ಣಿನ ಸುವಾಸನೆ ಯಿಂದ ಕೂಡಿದ್ದರೆ ದಣಿದ ದೇಹದಲ್ಲಿ ಅದಮ್ಯ ಚೇತನ ಮೂಡುತ್ತದೆ. ಹಾಗಾಗಿಯೇ ಪ್ರತಿ ವರ್ಷ ಬೇಸಿಗೆ ಬಂದರೆ ಮೈಸೂರಿನ ಹಲವೆಡೆ ಕಲಾಸ್ಪರ್ಶದ ಮಡಕೆಗಳು ಕಾಣಿಸಿಕೊಳ್ಳುತ್ತವೆ. ಅವುಗಳಿಗೆ ಬೇಡಿಕೆಯೂ ಹೆಚ್ಚು.  ‘ಬಡವರ ಫ್ರಿಜ್’ ಎಂದು ಗುರುತಿಸಿಕೊಂಡಿರುವ ಈ ಮಡಕೆಗಳಿಗೆ ಕೆಲ ವರ್ಷಗಳಿಂದ ಆಧುನಿಕ ಸ್ಪರ್ಶ ಸಿಕ್ಕಿದೆ.

ಉತ್ತರ ಭಾರತದ ಹಲವು ರಾಜ್ಯಗಳಿಂದ ಬಂದಿರುವ ಮಡಕೆ ವ್ಯಾಪಾರಿಗಳು ಬೇಸಿಗೆಯಿಂದ ಭರಪೂರ ಲಾಭ ಪಡೆಯುತ್ತಿದ್ದಾರೆ. ವಿಶೇಷವಾಗಿ, ಮಡಕೆಗಳಿಗೆ ಬಣ್ಣ, ವಿನ್ಯಾಸ ಮತ್ತು ಕಲಾತ್ಮಕ ಚಿತ್ರಗಳ ಮೂಲಕ ಮಣ್ಣಿನ ಗಡಿಗೆಗಳು ಜನರನ್ನು ಆಕರ್ಷಿಸುತ್ತಿವೆ.

ಬಿಸಿಲಿನ ಬೇಗೆಯಿಂದ ಕಂಗೆಟ್ಟ ಜನರು ತಣ್ಣನೆಯ ನೀರಿಗೆ ಮೊರೆ ಹೋಗುತ್ತಿದ್ದಾರೆ. ಅದರಲ್ಲೂ ಎಲ್ಲರ ಚಿತ್ತ ಮಡಕೆಯತ್ತ ನೆಟ್ಟಿದೆ. ಇದಕ್ಕೆ ಮಡಕೆಯಲ್ಲಿ ಸಂಗ್ರಹಿಸಿ ಇಡುವ ನೀರು ನೈಸರ್ಗಿಕವಾಗಿಯೇ ಫ್ರಿಜ್ ನೀರಿಗಿಂತಲೂ ಹೆಚ್ಚು ತಂಪಾಗಿರುತ್ತದೆ ಎನ್ನಲಾಗಿದೆ. ಈ ತಂಪು ಪ್ರಮಾಣ ಮನೆಗಳಲ್ಲಿ ಇರುವ ಫ್ರಿಡ್ಜ್‌ಗಳಿಗಿಂತ ಹೆಚ್ಚಾಗಿರುತ್ತದೆ.

ಆಧುನಿಕತೆ ಹಾಗೂ ಜನರ ಬೇಡಿಕೆಗೆ ತಕ್ಕಂತೆ ಮಣ್ಣಿನ ಮಡಕೆಗಳ ತಯಾರಿಕೆಯೂ ಬದಲಾಗಿದೆ. ಸಾಮಾನ್ಯವಾಗಿ ಮಡಕೆ ತಯಾರು ಮಾಡುವಾಗಲೇ ಅದಕ್ಕೆ ನಲ್ಲಿಯನ್ನು ಅಳವಡಿಸಲಾಗಿರುತ್ತದೆ. ಇಂತಹ ಮಡಕೆಗಳಿಗೆ ಬೇಡಿಕೆ ಹೆಚ್ಚಾಗಿದೆ.

ಮೈಸೂರು ಮುಖ್ಯರಸ್ತೆಗಳು, ಪ್ರಮುಖ ವೃತ್ತಗಳಲ್ಲಿ ರಾಜಸ್ಥಾನ, ಗುಜರಾತಿನ ಮಡಕೆಗಳನ್ನು ಮಾರಾಟ ಮಾಡಲಾಗುತ್ತಿದೆ. ಹುಣಸೂರು ರಸ್ತೆಯ ಹಳೇ ಜಿಲ್ಲಾಧಿಕಾರಿಗಳ ಕಚೇರಿಯ ಉದ್ಯಾನವನ ಸಮೀಪ, ಕಲಾ ಮಂದಿರದ ವೃತ್ತ, ಬಲ್ಲಾಳ್ ವೃತ್ತ, ಬೋಗಾದಿಯ ರಸ್ತೆಯಲ್ಲಿರುವ ಕುಕ್ಕರಹಳ್ಳಿಯ ವೃತ್ತ, ಹುಣಸೂರು ರಸ್ತೆಯ ಐಶ್ವರ್ಯ ಪೆಟ್ರೋಲ್ ಬಂಕ್ ಸೇರಿದಂತೆ ನಾನಾ ಕಡೆ ಮಡಕೆ ವ್ಯಾಪಾರ ಭರ್ಜರಿಯಾಗಿಯೇ ನಡೆಯುತ್ತಿದೆ.

ಪ್ಲಾಸ್ಟಿಕ್ ಕ್ಯಾನ್ ಆರೋಗ್ಯಕ್ಕೆ ಹಾನಿಕರ: ಆರೋಗ್ಯಕ್ಕೆ ಹಾನಿಕಾರಕವಾದ ಪ್ಲಾಸ್ಟಿಕ್ ಕ್ಯಾನ್, ಪ್ಲಾಸ್ಟಿಕ್ ಬಾಟಲ್ ಬಳಕೆ ನಿಲ್ಲಿಸಿ ನೀರು ಶೇಖರಣೆಗೆ ಮಣ್ಣಿನ ಮಡಕೆ ಬಳಸಬೇಕಿದೆ. ಇದು ಆರೋಗ್ಯಕ್ಕೆ ಪೂರಕ ಎಂಬ ಮಾತುಗಳೂ ಇವೆ. ಆಧುನಿಕ ಬದುಕಿನಿಂದ ನಶಿಸಿರುವ ಸಾಂಪ್ರದಾಯಿಕ ಕುಂಬಾರಿಕೆ ವೃತ್ತಿಗೆ ಮರುಜೀವ ನೀಡಿದಂತಾಗಲಿದೆ.

” ಮೂಲತಃ ರಾಜಸ್ಥಾನದವರಾದ ನಮ್ಮ ಕುಟುಂಬದವರು ಮೈಸೂರಲ್ಲಿ ೩೫ ವರ್ಷಗಳಿಂದ ಮಡಕೆ ವ್ಯಾಪಾರದಲ್ಲಿ ನಿರತರಾಗಿದ್ದಾರೆ. ಈ ವರ್ಷ ಗುಜರಾತಿನಿಂದ ೩ ಲೋಡ್‌ಗಳು ಅಂದರೆ ಒಟ್ಟು ೯ ಸಾವಿರ ಮಡಕೆಗಳನ್ನು ತರಿಸಲಾಗಿದೆ. ಬೇಸಿಗೆಯಲ್ಲಿ ಮಡಕೆಗಳಿಗೆ ಒಂದಷ್ಟು ಬೇಡಿಕೆ ಹೆಚ್ಚಲಿದೆ.”

-ಕೃಷ್ಣ, ಮಡಕೆ ವ್ಯಾಪಾರಿ

ಆಂದೋಲನ ಡೆಸ್ಕ್

Recent Posts

ಕೆ.ಆರ್.ಆಸ್ಪತ್ರೆಯಲ್ಲಿ 100 ಹಾಸಿಗೆಯುಳ್ಳ ICU ಘಟಕ ಸ್ಥಾಪಿಸಿ : ಎಂಎಲ್‌ಸಿ ಕೆ.ಶಿವಕುಮಾರ್ ಮನವಿ

ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ…

51 mins ago

ಈವರೆಗೂ ಇರಾನ್‌ನಿಂದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ: ಸಚಿವ ಜೈಶಂಕರ್‌

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್‌…

2 hours ago

ಮಾರ್ಚ್.‌11ರಿಂದ ವೈದ್ಯರ ಮುಷ್ಕರ ಫಿಕ್ಸ್:‌ ಸರ್ಕಾರಿ ಆಸ್ಪತ್ರೆಗಳ ಓಪಿಡಿ ಸೇವೆ ಬಂದ್‌

ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್.‌11ರಿಂದ ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆಗೆ ಕರೆ…

2 hours ago

ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಬೆಂಗಳೂರು: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು…

3 hours ago

ಶಾಸಕ ಬಸವರಾಜ್‌ ಶಿವಗಂಗಾ ಪಿಎ ಆತ್ಮಹತ್ಯೆಗೆ ಶರಣು

ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್‌ ಶಿವಗಂಗಾ ಅವರ ಪಿಎ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರದ ಉಪ್ಪಾರಪೇಟೆ…

3 hours ago

ಕರೂರು ಕಾಲ್ತುಳಿತ ದುರಂತ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ನಟ ವಿಜಯ್‌ಗೆ ಮತ್ತೆ ಸಮನ್ಸ್‌

ಚೆನ್ನೈ: ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ವಿಜಯ್‌ ಅವರಿಗೆ ಸಿಬಿಐ ಮತ್ತೆ ಸಮನ್ಸ್‌ ನೀಡಿದೆ. ಕಳೆದ…

3 hours ago