Andolana originals

ಬಿಸಿಲ ಬೇಗೆ ತಣಿಸಲು ಮಡಕೆಗಳ ಸಾಲು

ಚಿರಂಜೀವಿ ಸಿ.ಹುಲ್ಲಹಳ್ಳಿ

ತಣ್ಣನೆ ನೀರಿಗಾಗಿ ಮಡಕೆಗಳಿಗೆ ಮಾರುಹೋದ ಜನರು 

ಮಣ್ಣಿನ ಮಡಕೆಗಳಿಗೆ ಆಧುನಿಕ ಕಲಾ ಸ್ಪರ್ಶ

ನಲ್ಲಿ ಅಳವಡಿಸಿರುವ ಮಡಕೆಗಳೂ ಲಭ್ಯ

ಗುಜರಾತ್‌ನಿಂದ ೯ ಲೋಡ್ ಮಡಕೆಗಳ ಆಮದು

೨೦೦ ರಿಂದ ೧,೦೦೦ ರೂ.ವರೆಗೆ ಬಿಕರಿ

೪ ಲೀಟರ್‌ನಿಂದ ೨೦ ಲೀಟರ್‌ವರೆಗೆ ಮಡಕೆಗಳು ಮಾರಾಟಕ್ಕೆ ಲಭ್ಯವಿವೆ. ಕನಿಷ್ಠ ೨೦೦ ರೂ.ಗಳಿಂದ ಸಾವಿರ ರೂ.ಗಳವರೆಗೆ ಮಡಕೆಗಳನ್ನು ಬಿಕರಿ ಮಾಡಲಾಗುತ್ತಿದೆ. ಗ್ರಾಹಕರು ಚೌಕಾಸಿ ಮಾಡುತ್ತ ಮಡಕೆಗಳನ್ನು ಖರೀದಿಸುತ್ತಿದ್ದಾರೆ.

ಮೈಸೂರು: ನೆತ್ತಿ ಸುಡುವ ಬಿಸಿಲಿನಿಂದ ಬಸವಳಿದು ಗಂಟಲು ಒಣಗಿದಾಗ ಒಂದಿಷ್ಟು ಕುಡಿಯಲು ನೀರು ಸಿಕ್ಕಿದರೆ ಸಾಕು. ಆ ನೀರು ತಣ್ಣಗೆ ಮಣ್ಣಿನ ಸುವಾಸನೆ ಯಿಂದ ಕೂಡಿದ್ದರೆ ದಣಿದ ದೇಹದಲ್ಲಿ ಅದಮ್ಯ ಚೇತನ ಮೂಡುತ್ತದೆ. ಹಾಗಾಗಿಯೇ ಪ್ರತಿ ವರ್ಷ ಬೇಸಿಗೆ ಬಂದರೆ ಮೈಸೂರಿನ ಹಲವೆಡೆ ಕಲಾಸ್ಪರ್ಶದ ಮಡಕೆಗಳು ಕಾಣಿಸಿಕೊಳ್ಳುತ್ತವೆ. ಅವುಗಳಿಗೆ ಬೇಡಿಕೆಯೂ ಹೆಚ್ಚು.  ‘ಬಡವರ ಫ್ರಿಜ್’ ಎಂದು ಗುರುತಿಸಿಕೊಂಡಿರುವ ಈ ಮಡಕೆಗಳಿಗೆ ಕೆಲ ವರ್ಷಗಳಿಂದ ಆಧುನಿಕ ಸ್ಪರ್ಶ ಸಿಕ್ಕಿದೆ.

ಉತ್ತರ ಭಾರತದ ಹಲವು ರಾಜ್ಯಗಳಿಂದ ಬಂದಿರುವ ಮಡಕೆ ವ್ಯಾಪಾರಿಗಳು ಬೇಸಿಗೆಯಿಂದ ಭರಪೂರ ಲಾಭ ಪಡೆಯುತ್ತಿದ್ದಾರೆ. ವಿಶೇಷವಾಗಿ, ಮಡಕೆಗಳಿಗೆ ಬಣ್ಣ, ವಿನ್ಯಾಸ ಮತ್ತು ಕಲಾತ್ಮಕ ಚಿತ್ರಗಳ ಮೂಲಕ ಮಣ್ಣಿನ ಗಡಿಗೆಗಳು ಜನರನ್ನು ಆಕರ್ಷಿಸುತ್ತಿವೆ.

ಬಿಸಿಲಿನ ಬೇಗೆಯಿಂದ ಕಂಗೆಟ್ಟ ಜನರು ತಣ್ಣನೆಯ ನೀರಿಗೆ ಮೊರೆ ಹೋಗುತ್ತಿದ್ದಾರೆ. ಅದರಲ್ಲೂ ಎಲ್ಲರ ಚಿತ್ತ ಮಡಕೆಯತ್ತ ನೆಟ್ಟಿದೆ. ಇದಕ್ಕೆ ಮಡಕೆಯಲ್ಲಿ ಸಂಗ್ರಹಿಸಿ ಇಡುವ ನೀರು ನೈಸರ್ಗಿಕವಾಗಿಯೇ ಫ್ರಿಜ್ ನೀರಿಗಿಂತಲೂ ಹೆಚ್ಚು ತಂಪಾಗಿರುತ್ತದೆ ಎನ್ನಲಾಗಿದೆ. ಈ ತಂಪು ಪ್ರಮಾಣ ಮನೆಗಳಲ್ಲಿ ಇರುವ ಫ್ರಿಡ್ಜ್‌ಗಳಿಗಿಂತ ಹೆಚ್ಚಾಗಿರುತ್ತದೆ.

ಆಧುನಿಕತೆ ಹಾಗೂ ಜನರ ಬೇಡಿಕೆಗೆ ತಕ್ಕಂತೆ ಮಣ್ಣಿನ ಮಡಕೆಗಳ ತಯಾರಿಕೆಯೂ ಬದಲಾಗಿದೆ. ಸಾಮಾನ್ಯವಾಗಿ ಮಡಕೆ ತಯಾರು ಮಾಡುವಾಗಲೇ ಅದಕ್ಕೆ ನಲ್ಲಿಯನ್ನು ಅಳವಡಿಸಲಾಗಿರುತ್ತದೆ. ಇಂತಹ ಮಡಕೆಗಳಿಗೆ ಬೇಡಿಕೆ ಹೆಚ್ಚಾಗಿದೆ.

ಮೈಸೂರು ಮುಖ್ಯರಸ್ತೆಗಳು, ಪ್ರಮುಖ ವೃತ್ತಗಳಲ್ಲಿ ರಾಜಸ್ಥಾನ, ಗುಜರಾತಿನ ಮಡಕೆಗಳನ್ನು ಮಾರಾಟ ಮಾಡಲಾಗುತ್ತಿದೆ. ಹುಣಸೂರು ರಸ್ತೆಯ ಹಳೇ ಜಿಲ್ಲಾಧಿಕಾರಿಗಳ ಕಚೇರಿಯ ಉದ್ಯಾನವನ ಸಮೀಪ, ಕಲಾ ಮಂದಿರದ ವೃತ್ತ, ಬಲ್ಲಾಳ್ ವೃತ್ತ, ಬೋಗಾದಿಯ ರಸ್ತೆಯಲ್ಲಿರುವ ಕುಕ್ಕರಹಳ್ಳಿಯ ವೃತ್ತ, ಹುಣಸೂರು ರಸ್ತೆಯ ಐಶ್ವರ್ಯ ಪೆಟ್ರೋಲ್ ಬಂಕ್ ಸೇರಿದಂತೆ ನಾನಾ ಕಡೆ ಮಡಕೆ ವ್ಯಾಪಾರ ಭರ್ಜರಿಯಾಗಿಯೇ ನಡೆಯುತ್ತಿದೆ.

ಪ್ಲಾಸ್ಟಿಕ್ ಕ್ಯಾನ್ ಆರೋಗ್ಯಕ್ಕೆ ಹಾನಿಕರ: ಆರೋಗ್ಯಕ್ಕೆ ಹಾನಿಕಾರಕವಾದ ಪ್ಲಾಸ್ಟಿಕ್ ಕ್ಯಾನ್, ಪ್ಲಾಸ್ಟಿಕ್ ಬಾಟಲ್ ಬಳಕೆ ನಿಲ್ಲಿಸಿ ನೀರು ಶೇಖರಣೆಗೆ ಮಣ್ಣಿನ ಮಡಕೆ ಬಳಸಬೇಕಿದೆ. ಇದು ಆರೋಗ್ಯಕ್ಕೆ ಪೂರಕ ಎಂಬ ಮಾತುಗಳೂ ಇವೆ. ಆಧುನಿಕ ಬದುಕಿನಿಂದ ನಶಿಸಿರುವ ಸಾಂಪ್ರದಾಯಿಕ ಕುಂಬಾರಿಕೆ ವೃತ್ತಿಗೆ ಮರುಜೀವ ನೀಡಿದಂತಾಗಲಿದೆ.

” ಮೂಲತಃ ರಾಜಸ್ಥಾನದವರಾದ ನಮ್ಮ ಕುಟುಂಬದವರು ಮೈಸೂರಲ್ಲಿ ೩೫ ವರ್ಷಗಳಿಂದ ಮಡಕೆ ವ್ಯಾಪಾರದಲ್ಲಿ ನಿರತರಾಗಿದ್ದಾರೆ. ಈ ವರ್ಷ ಗುಜರಾತಿನಿಂದ ೩ ಲೋಡ್‌ಗಳು ಅಂದರೆ ಒಟ್ಟು ೯ ಸಾವಿರ ಮಡಕೆಗಳನ್ನು ತರಿಸಲಾಗಿದೆ. ಬೇಸಿಗೆಯಲ್ಲಿ ಮಡಕೆಗಳಿಗೆ ಒಂದಷ್ಟು ಬೇಡಿಕೆ ಹೆಚ್ಚಲಿದೆ.”

-ಕೃಷ್ಣ, ಮಡಕೆ ವ್ಯಾಪಾರಿ

ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

3 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

5 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

13 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

13 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

13 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

13 hours ago