ಅಗ್ನಿವೀರ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಗುಂಡ್ಲುಪೇಟೆ ತಾಲ್ಲೂಕಿನ ಮೊದಲ ಯುವತಿ
ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ: ತಾಲ್ಲೂಕಿನ ದೇಪಾಪುರ ಗ್ರಾಮದ ಚಂದ್ರಶೇಖರ್ ಮತ್ತು ನಿರ್ಮಲ (ಅಕ್ಕಮಹಾದೇವಮ್ಮ) ಅವರ ಪುತ್ರಿ ಡಿ.ಸಿ.ಮೌಲ್ಯ ಅಗ್ನಿವೀರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಸೈನ್ಯಕ್ಕೆ ಸೇರ್ಪಡೆಯಾಗಿದ್ದು ತಾಲ್ಲೂಕಿನಿಂದ ಸೇನೆಗೆ ಆಯ್ಕೆಯಾದ ಮೊದಲ ಯುವತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಹೆಣ್ಣುಮಕ್ಕಳು ಯಾವ ಕ್ಷೇತ್ರದಲ್ಲೂ ಕಡಿಮೆಯಿಲ್ಲ ಎಂಬುದನ್ನು ಮೌಲ್ಯ ಸಾಬೀತುಪಡಿಸಿದ್ದಾರೆ. ಗಂಡು ಮಕ್ಕಳನ್ನೇ ಸೈನ್ಯಕ್ಕೆ ಸೇರಿಸಲು ಹಿಂದೇಟು ಹಾಕುವ ತಂದೆ ತಾಯಿಯ ನಡುವೆ ಹೆಣ್ಣು ಮಗಳನ್ನು ಸೈನ್ಯಕ್ಕೆ ಸೇರಿಸಿ ದೇಶಾಭಿಮಾನ ಮೆರೆದ ಆಕೆಯ ತಂದೆ-ತಾಯಿಗೂ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ.
ಮೌಲ್ಯ ಗುಂಡ್ಲುಪೇಟೆ ತಾಲ್ಲೂಕು ತೆರಕಣಾಂಬಿ ಬಳಿಯ ದೇಪಾಪುರ ಗ್ರಾಮದಲ್ಲಿ ಜನಿಸಿ, ಒಂದನೇ ತರಗತಿಯಿಂದ ಐದನೇ ತರಗತಿಯವರೆಗೆ ಸ.ಹಿ.ಪ್ರಾ.ಶಾಲೆಯಲ್ಲಿ ವ್ಯಾಸಂಗ ಮಾಡಿ, ಆರನೇ ತರಗತಿಯಿಂದ ಸರ್ಕಾರಿ ಆದರ್ಶ ಶಾಲೆಯಲ್ಲಿ ಓದಿ ಪಿಯುಸಿಯನ್ನು ಸರಗೂರಿನ ವಿವೇಕಾನಂದ ಚಾರಿಟಬಲ್ ಟ್ರಸ್ಟ್ ಮತ್ತು ಬಿ.ಎಸ್ಸಿಯನ್ನು ಮೈಸೂರಿನ ಯುವರಾಜ ಕಾಲೇಜಿನಲ್ಲಿ ಮುಗಿಸಿದ್ದಾರೆ. ಜತೆಗೆ ಎನ್ಸಿಸಿಯಲ್ಲಿ ತೊಡಗಿಸಿಕೊಂಡು ಹಾಗೂ ವಿವಿಧ ಕ್ರೀಡಾಕೂಟಗಳಲ್ಲಿ ಸ್ಪರ್ಧೆ ಮಾಡುತ್ತಾ ಬಂದಿದ್ದ ಮೌಲ್ಯ ಕಳೆದ ವರ್ಷ ಅಗ್ನಿವೀರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಪ್ರಾಯೋಗಿಕ ಪರೀಕ್ಷೆಯಲ್ಲೂ ಉತ್ತೀರ್ಣ ರಾಗಿದ್ದಾರೆ.
ಈಗ ಮಿಲಿಟರಿ ಪೊಲೀಸ್ನಲ್ಲಿ ಆರು ತಿಂಗಳ ತರಬೇತಿ ಪಡೆದು ತರಬೇತಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಪದಕ ಗಳಿಸಿದ್ದಾರೆ.
” ನನಗೆ ಬೇರೆ ಬೇರೆ ಕ್ಷೇತ್ರಗಳಲ್ಲಿ ಕೆಲಸಕ್ಕೆ ಸೇರಲು ಅವಕಾಶವಿತ್ತು. ಆದರೆ ನನಗೆ ಎನ್ಸಿಸಿ ಮುಗಿಸಿದ ನಂತರ ಸೈನ್ಯಕ್ಕೆ ಸೇರಿ ದೇಶ ಸೇವೆ ಸಲ್ಲಿಸಬೇಕೆಂಬ ಆಸೆ ಇತ್ತು. ಹಾಗಾಗಿ ಖುಷಿಯಿಂದ ಈ ಕ್ಷೇತ್ರವನ್ನು ಆಯ್ದುಕೊಂಡಿದ್ದೇನೆ.”
-ಡಿ.ಸಿ.ಮೌಲ್ಯ,
” ಸೇನೆಗೆ ಸೇರ್ಪಡೆಯಾದ ಯುವತಿ ನನ್ನ ಮಗಳು ದೇಶ ಸೇವೆ ಮಾಡಲು ಸೈನ್ಯಕ್ಕೆ ಸೇರ್ಪಡೆಯಾಗಿರುವುದು ಸಂತಸ ತಂದಿದೆ. ಆಕೆಗೆ ಕ್ರೀಡೆಯ ಬಗ್ಗೆ ಆಸಕ್ತಿ ಇತ್ತು. ಜೊತೆಗೆ ಕಷ್ಟವಾದ ಕೆಲಸವನ್ನು ಒಬ್ಬ ಹೆಣ್ಣು ಮಗಳಾಗಿ ಮಾಡಿ ತೋರಿಸಬೇಕೆಂಬ ಛಲವಿತ್ತು. ಅದಕ್ಕಾಗಿ ಎನ್ಸಿಸಿ ಸೇರಿದ್ದಳು. ನಂತರ ಅಗ್ನಿವೀರ್ ಆನ್ಲೈನ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಪ್ರಾಕ್ಟಿಕಲ್ ಪರೀಕ್ಷೆಯಲ್ಲಿ ಉತ್ತೀರ್ಣಳಾದಳು. ಮೊದಲು ನಮಗೆ ಭಯವಿತ್ತು. ಆಗ ಆಕೆಯೇ ನಮಗೆ ಧೈರ್ಯ ತುಂಬಿದ್ದಳು. ಈಗ ಮಗಳ ಬೆಳವಣಿಗೆ ನೋಡಿ, ಸಂತಸ, ಹೆಮ್ಮೆಯಾಗುತ್ತಿದೆ. ಮೌಲ್ಯಳ ದೊಡ್ಡಮ್ಮ ದೈಹಿಕ ಶಿಕ್ಷಕಿ ಅನ್ನಪೂರ್ಣ ಸಹ ಎನ್ಸಿಸಿಗೆ ಸೇರಲು ಪ್ರೇರಣೆ ನೀಡಿ ಬೆನ್ನೆಲುಬಾಗಿ ನಿಂತಿದ್ದರು. ಈಗ ಎಲ್ಲರ ಶ್ರಮಕ್ಕೆ ಬೆಲೆ ಸಿಕ್ಕಿದೆ.”
–ಚಂದ್ರಶೇಖರ್ ದೇಪಾಪುರ,
ಮೌಲ್ಯ ಅವರ ತಂದೆ
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…
ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಾಗ್ದಾಳಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…
ಬೆಂಗಳೂರು: ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…
ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…