ಅಗ್ನಿವೀರ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಗುಂಡ್ಲುಪೇಟೆ ತಾಲ್ಲೂಕಿನ ಮೊದಲ ಯುವತಿ
ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ: ತಾಲ್ಲೂಕಿನ ದೇಪಾಪುರ ಗ್ರಾಮದ ಚಂದ್ರಶೇಖರ್ ಮತ್ತು ನಿರ್ಮಲ (ಅಕ್ಕಮಹಾದೇವಮ್ಮ) ಅವರ ಪುತ್ರಿ ಡಿ.ಸಿ.ಮೌಲ್ಯ ಅಗ್ನಿವೀರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಸೈನ್ಯಕ್ಕೆ ಸೇರ್ಪಡೆಯಾಗಿದ್ದು ತಾಲ್ಲೂಕಿನಿಂದ ಸೇನೆಗೆ ಆಯ್ಕೆಯಾದ ಮೊದಲ ಯುವತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಹೆಣ್ಣುಮಕ್ಕಳು ಯಾವ ಕ್ಷೇತ್ರದಲ್ಲೂ ಕಡಿಮೆಯಿಲ್ಲ ಎಂಬುದನ್ನು ಮೌಲ್ಯ ಸಾಬೀತುಪಡಿಸಿದ್ದಾರೆ. ಗಂಡು ಮಕ್ಕಳನ್ನೇ ಸೈನ್ಯಕ್ಕೆ ಸೇರಿಸಲು ಹಿಂದೇಟು ಹಾಕುವ ತಂದೆ ತಾಯಿಯ ನಡುವೆ ಹೆಣ್ಣು ಮಗಳನ್ನು ಸೈನ್ಯಕ್ಕೆ ಸೇರಿಸಿ ದೇಶಾಭಿಮಾನ ಮೆರೆದ ಆಕೆಯ ತಂದೆ-ತಾಯಿಗೂ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ.
ಮೌಲ್ಯ ಗುಂಡ್ಲುಪೇಟೆ ತಾಲ್ಲೂಕು ತೆರಕಣಾಂಬಿ ಬಳಿಯ ದೇಪಾಪುರ ಗ್ರಾಮದಲ್ಲಿ ಜನಿಸಿ, ಒಂದನೇ ತರಗತಿಯಿಂದ ಐದನೇ ತರಗತಿಯವರೆಗೆ ಸ.ಹಿ.ಪ್ರಾ.ಶಾಲೆಯಲ್ಲಿ ವ್ಯಾಸಂಗ ಮಾಡಿ, ಆರನೇ ತರಗತಿಯಿಂದ ಸರ್ಕಾರಿ ಆದರ್ಶ ಶಾಲೆಯಲ್ಲಿ ಓದಿ ಪಿಯುಸಿಯನ್ನು ಸರಗೂರಿನ ವಿವೇಕಾನಂದ ಚಾರಿಟಬಲ್ ಟ್ರಸ್ಟ್ ಮತ್ತು ಬಿ.ಎಸ್ಸಿಯನ್ನು ಮೈಸೂರಿನ ಯುವರಾಜ ಕಾಲೇಜಿನಲ್ಲಿ ಮುಗಿಸಿದ್ದಾರೆ. ಜತೆಗೆ ಎನ್ಸಿಸಿಯಲ್ಲಿ ತೊಡಗಿಸಿಕೊಂಡು ಹಾಗೂ ವಿವಿಧ ಕ್ರೀಡಾಕೂಟಗಳಲ್ಲಿ ಸ್ಪರ್ಧೆ ಮಾಡುತ್ತಾ ಬಂದಿದ್ದ ಮೌಲ್ಯ ಕಳೆದ ವರ್ಷ ಅಗ್ನಿವೀರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಪ್ರಾಯೋಗಿಕ ಪರೀಕ್ಷೆಯಲ್ಲೂ ಉತ್ತೀರ್ಣ ರಾಗಿದ್ದಾರೆ.
ಈಗ ಮಿಲಿಟರಿ ಪೊಲೀಸ್ನಲ್ಲಿ ಆರು ತಿಂಗಳ ತರಬೇತಿ ಪಡೆದು ತರಬೇತಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಪದಕ ಗಳಿಸಿದ್ದಾರೆ.
” ನನಗೆ ಬೇರೆ ಬೇರೆ ಕ್ಷೇತ್ರಗಳಲ್ಲಿ ಕೆಲಸಕ್ಕೆ ಸೇರಲು ಅವಕಾಶವಿತ್ತು. ಆದರೆ ನನಗೆ ಎನ್ಸಿಸಿ ಮುಗಿಸಿದ ನಂತರ ಸೈನ್ಯಕ್ಕೆ ಸೇರಿ ದೇಶ ಸೇವೆ ಸಲ್ಲಿಸಬೇಕೆಂಬ ಆಸೆ ಇತ್ತು. ಹಾಗಾಗಿ ಖುಷಿಯಿಂದ ಈ ಕ್ಷೇತ್ರವನ್ನು ಆಯ್ದುಕೊಂಡಿದ್ದೇನೆ.”
-ಡಿ.ಸಿ.ಮೌಲ್ಯ,
” ಸೇನೆಗೆ ಸೇರ್ಪಡೆಯಾದ ಯುವತಿ ನನ್ನ ಮಗಳು ದೇಶ ಸೇವೆ ಮಾಡಲು ಸೈನ್ಯಕ್ಕೆ ಸೇರ್ಪಡೆಯಾಗಿರುವುದು ಸಂತಸ ತಂದಿದೆ. ಆಕೆಗೆ ಕ್ರೀಡೆಯ ಬಗ್ಗೆ ಆಸಕ್ತಿ ಇತ್ತು. ಜೊತೆಗೆ ಕಷ್ಟವಾದ ಕೆಲಸವನ್ನು ಒಬ್ಬ ಹೆಣ್ಣು ಮಗಳಾಗಿ ಮಾಡಿ ತೋರಿಸಬೇಕೆಂಬ ಛಲವಿತ್ತು. ಅದಕ್ಕಾಗಿ ಎನ್ಸಿಸಿ ಸೇರಿದ್ದಳು. ನಂತರ ಅಗ್ನಿವೀರ್ ಆನ್ಲೈನ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಪ್ರಾಕ್ಟಿಕಲ್ ಪರೀಕ್ಷೆಯಲ್ಲಿ ಉತ್ತೀರ್ಣಳಾದಳು. ಮೊದಲು ನಮಗೆ ಭಯವಿತ್ತು. ಆಗ ಆಕೆಯೇ ನಮಗೆ ಧೈರ್ಯ ತುಂಬಿದ್ದಳು. ಈಗ ಮಗಳ ಬೆಳವಣಿಗೆ ನೋಡಿ, ಸಂತಸ, ಹೆಮ್ಮೆಯಾಗುತ್ತಿದೆ. ಮೌಲ್ಯಳ ದೊಡ್ಡಮ್ಮ ದೈಹಿಕ ಶಿಕ್ಷಕಿ ಅನ್ನಪೂರ್ಣ ಸಹ ಎನ್ಸಿಸಿಗೆ ಸೇರಲು ಪ್ರೇರಣೆ ನೀಡಿ ಬೆನ್ನೆಲುಬಾಗಿ ನಿಂತಿದ್ದರು. ಈಗ ಎಲ್ಲರ ಶ್ರಮಕ್ಕೆ ಬೆಲೆ ಸಿಕ್ಕಿದೆ.”
–ಚಂದ್ರಶೇಖರ್ ದೇಪಾಪುರ,
ಮೌಲ್ಯ ಅವರ ತಂದೆ
ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…
ಕೆ.ಆರ್.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…
ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…
ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…
ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆ, ಗ್ರಾಮ ರಸ್ತೆ, ಗಡಿ ರಸ್ತೆಗಳ ಬದಿಯಲ್ಲಿರುವ ಗಿಡ ಮರಗಳು ನೆರಳು ನೀಡುತ್ತಿವೆ…
ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆ ಸಿಲಿಂಡರ್ಗಳ ದರವನ್ನು ಮೇ ೧ರಿಂದ ಒಂದೇ ಬಾರಿಗೆ ೯೯೧ರೂ.ಗಳಿಗೆ ಏರಿಕೆ ಮಾಡಿದ್ದು, ಇದರಿಂದಾಗಿ ಹೋಟೆಲ್ಗಳಲ್ಲಿ…