Andolana originals

ಸೇನೆಗೆ ಸೇರಿ ಸಾಧನೆ ಮಾಡಿದ ಗ್ರಾಮೀಣ ಯುವತಿ

ಅಗ್ನಿವೀರ್‌ ಪರೀಕ್ಷೆಯಲ್ಲಿ ತೇರ್ಗಡೆಯಾದ ಗುಂಡ್ಲುಪೇಟೆ ತಾಲ್ಲೂಕಿನ ಮೊದಲ ಯುವತಿ 

ಮಹೇಂದ್ರ ಹಸಗೂಲಿ 

ಗುಂಡ್ಲುಪೇಟೆ: ತಾಲ್ಲೂಕಿನ ದೇಪಾಪುರ ಗ್ರಾಮದ ಚಂದ್ರಶೇಖರ್ ಮತ್ತು ನಿರ್ಮಲ (ಅಕ್ಕಮಹಾದೇವಮ್ಮ) ಅವರ ಪುತ್ರಿ ಡಿ.ಸಿ.ಮೌಲ್ಯ ಅಗ್ನಿವೀರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಸೈನ್ಯಕ್ಕೆ ಸೇರ್ಪಡೆಯಾಗಿದ್ದು ತಾಲ್ಲೂಕಿನಿಂದ ಸೇನೆಗೆ ಆಯ್ಕೆಯಾದ ಮೊದಲ ಯುವತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಹೆಣ್ಣುಮಕ್ಕಳು ಯಾವ ಕ್ಷೇತ್ರದಲ್ಲೂ ಕಡಿಮೆಯಿಲ್ಲ ಎಂಬುದನ್ನು ಮೌಲ್ಯ ಸಾಬೀತುಪಡಿಸಿದ್ದಾರೆ. ಗಂಡು ಮಕ್ಕಳನ್ನೇ ಸೈನ್ಯಕ್ಕೆ ಸೇರಿಸಲು ಹಿಂದೇಟು ಹಾಕುವ ತಂದೆ ತಾಯಿಯ ನಡುವೆ ಹೆಣ್ಣು ಮಗಳನ್ನು ಸೈನ್ಯಕ್ಕೆ ಸೇರಿಸಿ ದೇಶಾಭಿಮಾನ ಮೆರೆದ ಆಕೆಯ ತಂದೆ-ತಾಯಿಗೂ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ.

ಮೌಲ್ಯ ಗುಂಡ್ಲುಪೇಟೆ ತಾಲ್ಲೂಕು ತೆರಕಣಾಂಬಿ ಬಳಿಯ ದೇಪಾಪುರ ಗ್ರಾಮದಲ್ಲಿ ಜನಿಸಿ, ಒಂದನೇ ತರಗತಿಯಿಂದ ಐದನೇ ತರಗತಿಯವರೆಗೆ ಸ.ಹಿ.ಪ್ರಾ.ಶಾಲೆಯಲ್ಲಿ ವ್ಯಾಸಂಗ ಮಾಡಿ, ಆರನೇ ತರಗತಿಯಿಂದ ಸರ್ಕಾರಿ ಆದರ್ಶ ಶಾಲೆಯಲ್ಲಿ ಓದಿ ಪಿಯುಸಿಯನ್ನು ಸರಗೂರಿನ ವಿವೇಕಾನಂದ ಚಾರಿಟಬಲ್ ಟ್ರಸ್ಟ್ ಮತ್ತು ಬಿ.ಎಸ್ಸಿಯನ್ನು ಮೈಸೂರಿನ ಯುವರಾಜ ಕಾಲೇಜಿನಲ್ಲಿ ಮುಗಿಸಿದ್ದಾರೆ. ಜತೆಗೆ ಎನ್‌ಸಿಸಿಯಲ್ಲಿ ತೊಡಗಿಸಿಕೊಂಡು ಹಾಗೂ ವಿವಿಧ ಕ್ರೀಡಾಕೂಟಗಳಲ್ಲಿ ಸ್ಪರ್ಧೆ ಮಾಡುತ್ತಾ ಬಂದಿದ್ದ ಮೌಲ್ಯ ಕಳೆದ ವರ್ಷ ಅಗ್ನಿವೀರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಪ್ರಾಯೋಗಿಕ ಪರೀಕ್ಷೆಯಲ್ಲೂ ಉತ್ತೀರ್ಣ ರಾಗಿದ್ದಾರೆ.

ಈಗ ಮಿಲಿಟರಿ ಪೊಲೀಸ್‌ನಲ್ಲಿ ಆರು ತಿಂಗಳ ತರಬೇತಿ ಪಡೆದು ತರಬೇತಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಪದಕ ಗಳಿಸಿದ್ದಾರೆ.

” ನನಗೆ ಬೇರೆ ಬೇರೆ ಕ್ಷೇತ್ರಗಳಲ್ಲಿ ಕೆಲಸಕ್ಕೆ ಸೇರಲು ಅವಕಾಶವಿತ್ತು. ಆದರೆ ನನಗೆ ಎನ್‌ಸಿಸಿ ಮುಗಿಸಿದ ನಂತರ ಸೈನ್ಯಕ್ಕೆ ಸೇರಿ ದೇಶ ಸೇವೆ ಸಲ್ಲಿಸಬೇಕೆಂಬ ಆಸೆ ಇತ್ತು. ಹಾಗಾಗಿ ಖುಷಿಯಿಂದ ಈ ಕ್ಷೇತ್ರವನ್ನು ಆಯ್ದುಕೊಂಡಿದ್ದೇನೆ.”

-ಡಿ.ಸಿ.ಮೌಲ್ಯ,

” ಸೇನೆಗೆ ಸೇರ್ಪಡೆಯಾದ ಯುವತಿ ನನ್ನ ಮಗಳು ದೇಶ ಸೇವೆ ಮಾಡಲು ಸೈನ್ಯಕ್ಕೆ ಸೇರ್ಪಡೆಯಾಗಿರುವುದು ಸಂತಸ ತಂದಿದೆ. ಆಕೆಗೆ ಕ್ರೀಡೆಯ ಬಗ್ಗೆ ಆಸಕ್ತಿ ಇತ್ತು. ಜೊತೆಗೆ ಕಷ್ಟವಾದ ಕೆಲಸವನ್ನು ಒಬ್ಬ ಹೆಣ್ಣು ಮಗಳಾಗಿ ಮಾಡಿ ತೋರಿಸಬೇಕೆಂಬ ಛಲವಿತ್ತು. ಅದಕ್ಕಾಗಿ ಎನ್‌ಸಿಸಿ ಸೇರಿದ್ದಳು. ನಂತರ ಅಗ್ನಿವೀರ್ ಆನ್‌ಲೈನ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಪ್ರಾಕ್ಟಿಕಲ್ ಪರೀಕ್ಷೆಯಲ್ಲಿ ಉತ್ತೀರ್ಣಳಾದಳು. ಮೊದಲು ನಮಗೆ ಭಯವಿತ್ತು. ಆಗ ಆಕೆಯೇ ನಮಗೆ ಧೈರ್ಯ ತುಂಬಿದ್ದಳು. ಈಗ ಮಗಳ ಬೆಳವಣಿಗೆ ನೋಡಿ, ಸಂತಸ, ಹೆಮ್ಮೆಯಾಗುತ್ತಿದೆ. ಮೌಲ್ಯಳ ದೊಡ್ಡಮ್ಮ ದೈಹಿಕ ಶಿಕ್ಷಕಿ ಅನ್ನಪೂರ್ಣ ಸಹ ಎನ್‌ಸಿಸಿಗೆ ಸೇರಲು ಪ್ರೇರಣೆ ನೀಡಿ ಬೆನ್ನೆಲುಬಾಗಿ ನಿಂತಿದ್ದರು. ಈಗ ಎಲ್ಲರ ಶ್ರಮಕ್ಕೆ ಬೆಲೆ ಸಿಕ್ಕಿದೆ.”

ಚಂದ್ರಶೇಖರ್ ದೇಪಾಪುರ,

ಮೌಲ್ಯ ಅವರ ತಂದೆ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

11 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

11 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

11 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

11 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

11 hours ago