Andolana originals

ರಸ್ತೆಯ ತಿರುವುಗಳಲ್ಲಿ ಗಿಡ-ಗಂಟಿಗಳ ಭರಾಟೆ!

ಭೇರ್ಯ ಮಹೇಶ್‌

ಸಾಗರಕಟ್ಟೆ-ಇಲವಾಲ ಸಂಪರ್ಕ ರಸ್ತೆ ಅವ್ಯವಸ್ಥೆಗೆ ಆಕ್ರೋಶ; ಸೋಲಾರ್ ದೀಪಗಳೂ ಕಳ್ಳರ ಪಾಲು

ಕೆ.ಆರ್.ನಗರ: ಕೆ.ಆರ್.ನಗರ- ಲಾಳಂದೇವನಹಳ್ಳಿ ಮಾರ್ಗದ ಸಾಗರಕಟ್ಟೆ- ಇಲವಾಲ ಸಂಪರ್ಕ ರಸ್ತೆ ಬಹಳಷ್ಟು ತಿರುವು ಗಳಿಂದ ಕೂಡಿದ್ದು ಅಪಘಾತಕ್ಕೆ ಆಹ್ವಾನ ನೀಡುತ್ತಿದ್ದರೆ ಸಾಗರಕಟ್ಟೆ ಸೇತುವೆಯ ಸೋಲಾರ್ ವಿದ್ಯುತ್ ದೀಪಗಳು ಕಳ್ಳಕಾಕರ ಪಾಲಾಗಿದ್ದು, ೨-೩ ವರ್ಷಗಳಿಂದ ಇರುವ ದೀಪಗಳು ಕೆಟ್ಟುನಿಂತಿದ್ದು, ರಾತ್ರಿ ವೇಳೆ ಕಗ್ಗತ್ತಲಿನಲ್ಲಿ ಸಂಚರಿಸುವುದು ದುಸ್ತರವಾಗಿದೆ.

ಇಲವಾಲದಿಂದ ಸಾಗರಕಟ್ಟೆ ಮಾರ್ಗವಾಗಿ ಕೆ.ಆರ್.ನಗರ ಮತ್ತು ಹಾಸನ ಈ ಭಾಗಕ್ಕೆ ಸಂಪರ್ಕ ರಸ್ತೆಯನ್ನು ಹಲವು ವರ್ಷಗಳ ಹಿಂದೆ ಕೆ.ಆರ್.ಡಿ.ಸಿ.ಎಲ್.ನವರು ನಿರ್ಮಾಣ ಮಾಡಿದ್ದರು. ಆದರೆ ಸಾಗರಕಟ್ಟೆ ಸೇತುವೆಗೆ ಅಂದಾಜು ೫೦ ಸೋಲಾರ್ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿತ್ತು. ಆದರೆ ಸಂಬಂಧಪಟ್ಟ ಇಲಾಖೆ ಸರಿಯಾದ ನಿರ್ವಹಣೆ ಮಾಡದೇ ಕೆಟ್ಟು ನಿಂತ ಪರಿಣಾಮ ಸೋಲಾರ್ ವಿದ್ಯುತ್ ದೀಪವನ್ನು ಕಂಬದ ಸಮೇತ ಕಳ್ಳರು ಕದ್ದೊಯ್ದಿದ್ದಾರೆ.

ಸಾಗರಕಟ್ಟೆ ಸೇತುವೆ ರಸ್ತೆ ಸಂಪೂರ್ಣವಾಗಿ ಕತ್ತಲುಮಯವಾಗಿದೆ. ಇದರಿಂದಾಗಿ ವಾಹನ ಸವಾರರು ನಿತ್ಯ ರಾತ್ರಿ ವೇಳೆಯಲ್ಲಿ ಇಲ್ಲಿ ಸಂಚರಿಸಲು ಭಯ ಪಡುವಂತಾಗಿದೆ. ಲಾಳಂದೇವನಹಳ್ಳಿಯಿಂದ ಸಾಗರಕಟ್ಟೆ ಮಾರ್ಗದವರೆಗೆ ಸಮರ್ಪಕವಾಗಿ ರಸ್ತೆ ಬದಿಯಲ್ಲಿ ಬೆಳೆದಿರುವ ಜಂಗಲ್ ತೆಗೆಯದ ಕಾರಣದಿಂದ ಒಂದಲ್ಲ ಒಂದು ಅಪಘಾತ ಸಂಭವಿ ಸುತ್ತಿದ್ದು, ಅಧಿಕಾರಿಗಳು ಇದಕ್ಕೂ ನಮಗೂ ಸಂಬಂಧ ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಕೆ.ಆರ್.ನಗರ, ಸಾಲಿಗ್ರಾಮ, ಹಾಸನದ ಕಡೆಗಳಿಂದ ಹೆಚ್ಚಾಗಿ ವಾಹನಗಳು ಸಾಗರಕಟ್ಟೆ ಸೇತುವೆಯ ಕೆ.ಆರ್.ಎಸ್. ಹಿನ್ನೀರಿನ ದೃಶ್ಯ ಕಣ್ತುಂಬಿ ಕೊಂಡು ಮೈಸೂರಿಗೆ ಪ್ರಯಾಣ ಮಾಡುತ್ತಿದ್ದು, ರಸ್ತೆಯ ಎರಡೂ ಬದಿಗಳಲ್ಲಿ ಕಾಡಿನ ರೀತಿಯಲ್ಲಿ ಗಿಡಗಂಟಿಗಳು ಬೆಳೆದಿದ್ದು, ವಾಹನ ಸವಾರರಿಗೆ ತೊಂದರೆ ಯಾಗುತ್ತಿದೆ. ಇನ್ನಾದರೂ ಜನಪ್ರತಿನಿಧಿಗಳು, ಅಧಿಕಾರಿಗಳು ಎಚ್ಚೆತ್ತು ಇತ್ತ ಗಮನ ಹರಿಸಬೇಕು ಎಂದು ವಾಹನ ಸವಾರರು ಒತ್ತಾಯಿಸಿದ್ದಾರೆ.

” ಇಲವಾಲದಿಂದ ಸಾಗರಕಟ್ಟೆ ಮಾರ್ಗವಾಗಿ ಕೆ.ಆರ್.ನಗರ ಮತ್ತು ಹಾಸನ ಕಡೆಗೆ ತೆರಳುವ ಸಂಪರ್ಕ ರಸ್ತೆಯನ್ನು ಮಾಜಿ ಸಚಿವರಾದ ಸಾ.ರಾ. ಮಹೇಶ್‌ರವರು ಅಭಿವೃದ್ಧಿಪಡಿಸಿದ್ದರು. ಕಳೆದ ೩ ವರ್ಷಗಳಿಂದ ಸಂಬಂಧಪಟ್ಟ ಇಲಾಖೆಯವರು ಸರಿಯಾಗಿ ನಿರ್ವಹಣೆ ಮಾಡದೆ, ಸೋಲಾರ್ ವಿದ್ಯುತ್ ದೀಪಗಳು ಕಳ್ಳರ ಪಾಲಾಗಿವೆ. ಸೋಲಾರ್ ದೀಪವನ್ನು ಮತ್ತೆ ಅಳವಡಿಸಿ ಸಾಗರಕಟ್ಟೆ ಸೇತುವೆಯ ಅಂದವನ್ನು ಹೆಚ್ಚಿಸಬೇಕು.”

-ಬಾಲಾಜಿ ಗಣೇಶ್, ಗ್ರಾ.ಪಂ. ಸದಸ್ಯ, ಲಾಳಂದೇವನಹಳ್ಳಿ

” ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಂದ ಮೈಸೂರಿಗೆ ಹೋಗುವ ಪ್ರವಾಸಿಗರು ಸಾಗರಕಟ್ಟೆ ಸೇತುವೆ ಹಿನ್ನೀರಿನ ದೃಶ್ಯ ವೀಕ್ಷಿಸಿ, ಸೆಲ್ಫಿ ತೆಗೆದುಕೊಂಡು ಮೈಸೂರಿಗೆ ಹೋಗು ತ್ತಾರೆ. ಸಾಗರಕಟ್ಟೆ ಸೇತುವೆ ಬಳಿಯ ಗಿಡಗಂಟಿಗಳನ್ನು ತೆರವುಗೊಳಿಸಿ ಹಿನ್ನೀರಿನ ಅಂದ ಸವಿಯಲು ಸಂಬಂಧಪಟ್ಟ ಇಲಾಖೆಯವರು ಗಮನಹರಿಸಬೇಕು.”

-ಸಾತಿಗ್ರಾಮ ಶಂಕರ್, ವಾಹನ ಸವಾರರು

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

1 hour ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

2 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

4 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

4 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

5 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

5 hours ago