Andolana originals

ರಸ್ತೆಯ ತಿರುವುಗಳಲ್ಲಿ ಗಿಡ-ಗಂಟಿಗಳ ಭರಾಟೆ!

ಭೇರ್ಯ ಮಹೇಶ್‌

ಸಾಗರಕಟ್ಟೆ-ಇಲವಾಲ ಸಂಪರ್ಕ ರಸ್ತೆ ಅವ್ಯವಸ್ಥೆಗೆ ಆಕ್ರೋಶ; ಸೋಲಾರ್ ದೀಪಗಳೂ ಕಳ್ಳರ ಪಾಲು

ಕೆ.ಆರ್.ನಗರ: ಕೆ.ಆರ್.ನಗರ- ಲಾಳಂದೇವನಹಳ್ಳಿ ಮಾರ್ಗದ ಸಾಗರಕಟ್ಟೆ- ಇಲವಾಲ ಸಂಪರ್ಕ ರಸ್ತೆ ಬಹಳಷ್ಟು ತಿರುವು ಗಳಿಂದ ಕೂಡಿದ್ದು ಅಪಘಾತಕ್ಕೆ ಆಹ್ವಾನ ನೀಡುತ್ತಿದ್ದರೆ ಸಾಗರಕಟ್ಟೆ ಸೇತುವೆಯ ಸೋಲಾರ್ ವಿದ್ಯುತ್ ದೀಪಗಳು ಕಳ್ಳಕಾಕರ ಪಾಲಾಗಿದ್ದು, ೨-೩ ವರ್ಷಗಳಿಂದ ಇರುವ ದೀಪಗಳು ಕೆಟ್ಟುನಿಂತಿದ್ದು, ರಾತ್ರಿ ವೇಳೆ ಕಗ್ಗತ್ತಲಿನಲ್ಲಿ ಸಂಚರಿಸುವುದು ದುಸ್ತರವಾಗಿದೆ.

ಇಲವಾಲದಿಂದ ಸಾಗರಕಟ್ಟೆ ಮಾರ್ಗವಾಗಿ ಕೆ.ಆರ್.ನಗರ ಮತ್ತು ಹಾಸನ ಈ ಭಾಗಕ್ಕೆ ಸಂಪರ್ಕ ರಸ್ತೆಯನ್ನು ಹಲವು ವರ್ಷಗಳ ಹಿಂದೆ ಕೆ.ಆರ್.ಡಿ.ಸಿ.ಎಲ್.ನವರು ನಿರ್ಮಾಣ ಮಾಡಿದ್ದರು. ಆದರೆ ಸಾಗರಕಟ್ಟೆ ಸೇತುವೆಗೆ ಅಂದಾಜು ೫೦ ಸೋಲಾರ್ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿತ್ತು. ಆದರೆ ಸಂಬಂಧಪಟ್ಟ ಇಲಾಖೆ ಸರಿಯಾದ ನಿರ್ವಹಣೆ ಮಾಡದೇ ಕೆಟ್ಟು ನಿಂತ ಪರಿಣಾಮ ಸೋಲಾರ್ ವಿದ್ಯುತ್ ದೀಪವನ್ನು ಕಂಬದ ಸಮೇತ ಕಳ್ಳರು ಕದ್ದೊಯ್ದಿದ್ದಾರೆ.

ಸಾಗರಕಟ್ಟೆ ಸೇತುವೆ ರಸ್ತೆ ಸಂಪೂರ್ಣವಾಗಿ ಕತ್ತಲುಮಯವಾಗಿದೆ. ಇದರಿಂದಾಗಿ ವಾಹನ ಸವಾರರು ನಿತ್ಯ ರಾತ್ರಿ ವೇಳೆಯಲ್ಲಿ ಇಲ್ಲಿ ಸಂಚರಿಸಲು ಭಯ ಪಡುವಂತಾಗಿದೆ. ಲಾಳಂದೇವನಹಳ್ಳಿಯಿಂದ ಸಾಗರಕಟ್ಟೆ ಮಾರ್ಗದವರೆಗೆ ಸಮರ್ಪಕವಾಗಿ ರಸ್ತೆ ಬದಿಯಲ್ಲಿ ಬೆಳೆದಿರುವ ಜಂಗಲ್ ತೆಗೆಯದ ಕಾರಣದಿಂದ ಒಂದಲ್ಲ ಒಂದು ಅಪಘಾತ ಸಂಭವಿ ಸುತ್ತಿದ್ದು, ಅಧಿಕಾರಿಗಳು ಇದಕ್ಕೂ ನಮಗೂ ಸಂಬಂಧ ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಕೆ.ಆರ್.ನಗರ, ಸಾಲಿಗ್ರಾಮ, ಹಾಸನದ ಕಡೆಗಳಿಂದ ಹೆಚ್ಚಾಗಿ ವಾಹನಗಳು ಸಾಗರಕಟ್ಟೆ ಸೇತುವೆಯ ಕೆ.ಆರ್.ಎಸ್. ಹಿನ್ನೀರಿನ ದೃಶ್ಯ ಕಣ್ತುಂಬಿ ಕೊಂಡು ಮೈಸೂರಿಗೆ ಪ್ರಯಾಣ ಮಾಡುತ್ತಿದ್ದು, ರಸ್ತೆಯ ಎರಡೂ ಬದಿಗಳಲ್ಲಿ ಕಾಡಿನ ರೀತಿಯಲ್ಲಿ ಗಿಡಗಂಟಿಗಳು ಬೆಳೆದಿದ್ದು, ವಾಹನ ಸವಾರರಿಗೆ ತೊಂದರೆ ಯಾಗುತ್ತಿದೆ. ಇನ್ನಾದರೂ ಜನಪ್ರತಿನಿಧಿಗಳು, ಅಧಿಕಾರಿಗಳು ಎಚ್ಚೆತ್ತು ಇತ್ತ ಗಮನ ಹರಿಸಬೇಕು ಎಂದು ವಾಹನ ಸವಾರರು ಒತ್ತಾಯಿಸಿದ್ದಾರೆ.

” ಇಲವಾಲದಿಂದ ಸಾಗರಕಟ್ಟೆ ಮಾರ್ಗವಾಗಿ ಕೆ.ಆರ್.ನಗರ ಮತ್ತು ಹಾಸನ ಕಡೆಗೆ ತೆರಳುವ ಸಂಪರ್ಕ ರಸ್ತೆಯನ್ನು ಮಾಜಿ ಸಚಿವರಾದ ಸಾ.ರಾ. ಮಹೇಶ್‌ರವರು ಅಭಿವೃದ್ಧಿಪಡಿಸಿದ್ದರು. ಕಳೆದ ೩ ವರ್ಷಗಳಿಂದ ಸಂಬಂಧಪಟ್ಟ ಇಲಾಖೆಯವರು ಸರಿಯಾಗಿ ನಿರ್ವಹಣೆ ಮಾಡದೆ, ಸೋಲಾರ್ ವಿದ್ಯುತ್ ದೀಪಗಳು ಕಳ್ಳರ ಪಾಲಾಗಿವೆ. ಸೋಲಾರ್ ದೀಪವನ್ನು ಮತ್ತೆ ಅಳವಡಿಸಿ ಸಾಗರಕಟ್ಟೆ ಸೇತುವೆಯ ಅಂದವನ್ನು ಹೆಚ್ಚಿಸಬೇಕು.”

-ಬಾಲಾಜಿ ಗಣೇಶ್, ಗ್ರಾ.ಪಂ. ಸದಸ್ಯ, ಲಾಳಂದೇವನಹಳ್ಳಿ

” ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಂದ ಮೈಸೂರಿಗೆ ಹೋಗುವ ಪ್ರವಾಸಿಗರು ಸಾಗರಕಟ್ಟೆ ಸೇತುವೆ ಹಿನ್ನೀರಿನ ದೃಶ್ಯ ವೀಕ್ಷಿಸಿ, ಸೆಲ್ಫಿ ತೆಗೆದುಕೊಂಡು ಮೈಸೂರಿಗೆ ಹೋಗು ತ್ತಾರೆ. ಸಾಗರಕಟ್ಟೆ ಸೇತುವೆ ಬಳಿಯ ಗಿಡಗಂಟಿಗಳನ್ನು ತೆರವುಗೊಳಿಸಿ ಹಿನ್ನೀರಿನ ಅಂದ ಸವಿಯಲು ಸಂಬಂಧಪಟ್ಟ ಇಲಾಖೆಯವರು ಗಮನಹರಿಸಬೇಕು.”

-ಸಾತಿಗ್ರಾಮ ಶಂಕರ್, ವಾಹನ ಸವಾರರು

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago