Andolana originals

ತುಕ್ಕು ಹಿಡಿದ ರಾಜಾಸೀಟ್‌ನ ಪುಟಾಣಿ ರೈಲು

7 ವರ್ಷಗಳಿಂದ ಸ್ಥಗಿತ : ಪುನರಾರಂಭಿಸಲು ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆ

ಮಡಿಕೇರಿ: ದಶಕಗಳ ಕಾಲ ಮಡಿಕೇರಿ ನಗರದ ರಾಜಾಸೀಟ್‌ನ ಪ್ರಮುಖ ಆಕರ್ಷಣೆಯಾಗಿದ್ದ ಪುಟಾಣಿ ರೈಲು ಶೆಡ್ ಸೇರಿ ವರ್ಷಗಳೇ ಕಳೆದರೂ ಅದನ್ನು ಪುನರಾರಂಭಿಸುವಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ಪುಟಾಣಿ ರೈಲು ನಿಂತಲ್ಲೇ ನಿಂತು ತುಕ್ಕು ಹಿಡಿಯುತ್ತಿದೆ.

ಐತಿಹಾಸಿಕ ಪ್ರವಾಸಿ ತಾಣ ರಾಜಾಸೀಟ್ ಈಗ ಗ್ರೇಟರ್ ರಾಜಾಸೀಟ್ ಆಗಿದೆ. ಸ್ಕೈರೋಪ್‌ನಂತಹ ಸಾಹಸಿ ಆಕರ್ಷಣೆ ರಾಜಾಸೀಟ್‌ನಲ್ಲಿದೆ. ಆದರೆ, ರಾಜಾಸೀಟ್ ಆವರಣದಲ್ಲಿದ್ದ ಪುಟಾಣಿ ರೈಲು ತುಕ್ಕು ಹಿಡಿದಿದ್ದು, ರೈಲು ಹಳಿಯೂ ಮಣ್ಣು ಪಾಲಾಗಿದೆ. ಕಾವೇರಿ ಪಟ್ಟಣ ಎಂಬ ಹೆಸರಿನ ಪುಟಾಣಿ ರೈಲು ನಿಲ್ದಾಣ ಈಗ ಉದ್ಯಾನವನದ ಹೂವಿನ ಕುಂಡಗಳಿಗೆ ಮಣ್ಣು ತುಂಬುವ ಸ್ಥಳವಾಗಿ ಬಳಕೆಯಾಗುತ್ತಿದೆ.

ಹಿರಿಯ ರಾಜಕಾರಣಿ, ಮಾಜಿ ಸಚಿವ ಎಂ.ಸಿ.ನಾಣಯ್ಯ ಅವರು ಪುರಸಭೆ ಅಧ್ಯಕ್ಷರಾಗಿದ್ದಾಗ ರಾಜಾಸೀಟ್ ಆವರಣದಲ್ಲಿ ಮಕ್ಕಳಿಗಾಗಿ ಉದ್ಯಾನ ನಿರ್ಮಿಸಿದ್ದರು. ೧೯೯೮ರಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿದ್ದ ನಾಣಯ್ಯ ಅವರು ಮತ್ತೆ ಮಕ್ಕಳ ಉದ್ಯಾನವನ್ನು ಅಭಿವೃದ್ಧಿಪಡಿಸಿದ್ದರು. ಸುಮಾರು ೧ ಕಿ.ಮೀ. ಹಳಿಯ ಮೇಲೆ ರಾಜಾಸೀಟ್ ಬೆಟ್ಟಗಳ ನಡುವೆ ಸಂಚರಿಸುತ್ತಿದ್ದ ರೈಲಿಗೆ ‘ಕಾವೇರಿ ಎಕ್ಸ್‌ಪ್ರೆಸ್’ ಎಂದು ಹೆಸರಿಡಲಾಗಿತ್ತು.

ಸುಮಾರು ಎರಡೂವರೆ ದಶಕಗಳ ಕಾಲ ಹಿರಿಯರೂ ಸೇರಿದಂತೆ ಮಕ್ಕಳನ್ನು ರಂಜಿಸುತ್ತಿದ್ದ ಪುಟಾಣಿ ರೈಲು ಹಳೆಯದಾದಂತೆ ಆಗಾಗ ಕೆಟ್ಟು ನಿಲ್ಲುತ್ತಿತ್ತು. ಕೊನೆಗೆ ಹಳೆಯ ಇಂಜಿನ್ ಬದಲಿಸಿ ಟ್ರಾಕ್ಟರ್ ಇಂಜಿನ್ ಅಳವಡಿಸಲಾಗಿತ್ತು. ಈ ರೈಲನ್ನು ಖಾಸಗಿಯವರ ನಿರ್ವಹಣೆಗೆ ನೀಡಿ, ಕೆಲಕಾಲ ರೈಲು ಓಡುವಂತೆ ನೋಡಿಕೊಳ್ಳಲಾಯಿತಾದರೂ ಮತ್ತೆ ಕೆಟ್ಟು ಹೋದ ರೈಲು ಶೆಡ್ ಸೇರಿತು. ಇದೀಗ ರೈಲು ಗೂಡು ಸೇರಿ ವರ್ಷಗಳೇ ಕಳೆದರೂ ಅದಕ್ಕೆ ಮರುಜೀವ ನೀಡಲು ಯಾರೂ ಮುಂದಾಗಿಲ್ಲ.

ಇದನ್ನು ಓದಿ: ರಾಷ್ಟ್ರಮಟ್ಟದ ಬಾಲರಂಗೋತ್ಸವಕ್ಕೆ ಆದರ್ಶ ಬಾಲೆಯರು

ರೈಲು ಹಳಿಯ ಪಕ್ಕದಲ್ಲಿಯೇ ಇರುವ ಮಕ್ಕಳ ಉದ್ಯಾನದಲ್ಲಿ ಇತ್ತೀಚೆಗೆ ಖಾಸಗಿಯವರ ಸಹಭಾಗಿತ್ವದಲ್ಲಿ ಹಲವು ಚಟುವಟಿಕೆಗಳನ್ನು ಆರಂಭಿಸಲಾಗಿದೆ. ಹಣ ನೀಡಿ ಆಟವಾಡುವವರಿಗೆ ಎಲ್ಲಾ ಸಾಹಸ ಚಟುವಟಿಕೆಗಳು ಇವೆಯಾದರೂ, ಉಚಿತವಾಗಿ ಬಡ ಮತ್ತು ಮಧ್ಯಮ ವರ್ಗಗಳ ಮಕ್ಕಳು ಆಟವಾಡಲು ಇದ್ದ ಒಂದು ಪುಟಾಣಿ ಉದ್ಯಾನವನ್ನು ನಿರ್ಲಕ್ಷಿಸಲಾಗಿದೆ. ಪುಟಾಣಿ ರೈಲು ಸಂಚಾರಕ್ಕೂ ಗ್ರಹಣ ಹಿಡಿದಿದೆ. ಇಂತಹ ನಿರ್ಲಕ್ಷ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗುತ್ತಿದೆ.

ಕಾರ್ಯರೂಪಕ್ಕೆ ಬಾರದ ಯೋಜನೆ..!: 

ಗ್ರೇಟರ್ ರಾಜಾಸೀಟ್ ಅಭಿವೃದ್ಧಿಯ ಬಳಿಕ ಪುಟಾಣಿ ರೈಲಿಗೂ ಕಾಯಕಲ್ಪ ನೀಡುವ ಯೋಜನೆಯೊಂದನ್ನು ರೂಪಿಸಲಾಗಿತ್ತು. ಅಂದು ಜಿಲ್ಲಾಧಿಕಾರಿಯಾಗಿದ್ದ ಸತೀಶ್ ಮತ್ತು ತೋಟಗಾರಿಕಾ ಇಲಾಖೆ ಪ್ರಭಾರ ಉಪನಿರ್ದೇಶಕರಾಗಿದ್ದ ಪ್ರಮೋದ್ ಅವರು ರಾಜಾಸೀಟ್ ಅಭಿವೃದ್ಧಿ ಸಮಿತಿಯಲ್ಲಿದ್ದ ಹಣ ಮತ್ತು ತೋಟಗಾರಿಕಾ ಇಲಾಖೆ ಅನುದಾನವನ್ನು ಬಳಸಿ ಮಕ್ಕಳ ಉದ್ಯಾನ ಮತ್ತು ಪುಟಾಣಿ ರೈಲು ಅಭಿವೃದ್ಧಿಗೆ ಯೋಜನೆ ರೂಪಿಸಿದ್ದರು. ಪುಟಾಣಿ ರೈಲಿನ ಸಂಚಾರವನ್ನು ಗ್ರೇಟರ್ ರಾಜಾಸೀಟ್‌ಗೆ ವಿಸ್ತರಿಸುವುದು, ಕಾವೇರಿ ಪಟ್ಟಣ ನಿಲ್ದಾಣದಲ್ಲಿ ಅಂಗಡಿ ಮಳಿಗೆಗಳಿಗೂ ಅವಕಾಶ ನೀಡಿ ನೈಜ ರೈಲ್ವೇ ಫ್ಲಾಟ್‌ಫಾರಂನಂತೆ ಅಭಿವೃದ್ಧಿಪಡಿಸುವುದು ಯೋಜನೆಯಲ್ಲಿ ಒಳಗೊಂಡಿತ್ತು. ಆದರೆ ಈ ಯೋಜನೆ ಇದುವರೆಗೂ ಕಾರ್ಯರೂಪಕ್ಕೆ ಬಂದಿಲ

” ಭಾರತೀಯ ರೈಲ್ವೆ ಇಲಾಖೆಯಿಂದ ತಜ್ಞರ ತಂಡ ಬಂದು ರಾಜಾಸೀಟ್ ಉದ್ಯಾನವನ್ನು ಪರಿಶೀಲನೆ ಮಾಡಿ ಹೋಗಿದೆ. ಅವರ ವರದಿಯನ್ನು ಮುಂದಿನ ಸಭೆಯಲ್ಲಿ ಮಂಡಿಸಲಾಗುವುದು. ಪುಟಾಣಿ ರೈಲು ಆರಂಭಿಸುವ ಪ್ರಯತ್ನ ಮಾಡಲಾಗುವುದು.”

-ಶಶಿಧರ್, ಉಪನಿರ್ದೇಶಕರು, ತೋಟಗಾರಿಕಾ ಇಲಾಖೆ

ಆಂದೋಲನ ಡೆಸ್ಕ್

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

2 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

3 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

4 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

6 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

6 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

7 hours ago