ಓದುಗರ ಪತ್ರ
ಮಧ್ಯ ಪ್ರದೇಶದಲ್ಲಿ ಕಳ್ಳತನ, ದರೋಡೆ ಮತ್ತು ಲೂಟಿಗಳನ್ನು ಹೇಗೆ ಮಾಡುವುದು ಎಂಬುದನ್ನು ಕಲಿಸಲು ಒಂದು ಶಾಲೆ ಇದ್ದು, ಅಲ್ಲಿ ಆರು ತಿಂಗಳ ಕೋರ್ಸ್ ಪಡೆಯಲು 50,000 ರೂ.ಗಳಿಂದ 3 ಲಕ್ಷ ರೂ.ಗಳವರೆಗೆ ಶುಲ್ಕ ಪಾವತಿಸಬೇಕು ಎಂಬ ಸುದ್ದಿ ಕೇಳಿ ನಿಜಕ್ಕೂ ಆಶ್ಚರ್ಯವಾಯಿತು.
ವರ್ಷಗಳ ಹಿಂದೆ ಜಾರ್ಖಂಡ್ನ ಗ್ರಾಮವೊಂದರಲ್ಲಿ ಸೈಬರ್ ಕ್ರೈಮ್ ಮಾಡುವುದು ಹೇಗೆ ಎಂಬುದನ್ನು ಕಲಿಸಲಾಗುತ್ತಿದೆ ಎಂಬ ಸುದ್ದಿ ಕೇಳಿ ಗಾಬರಿಗೊಂಡಿದ್ದೆವು. ಈಗ ಕಳ್ಳತನ, ದರೋಡೆಯಂತಹ ದುಷ್ಕೃತ್ಯಗಳನ್ನು ಕಲಿಸಲೂ ಶಾಲೆ ಇದೆ ಎಂಬುದನ್ನು ಕೇಳಿ ನಮ್ಮ ಸಮಾಜ ದಿಕ್ಕು ತಪ್ಪುತ್ತಿದೆಯೇನೋ ಅನಿಸುತ್ತದೆ. ಕಳ್ಳತನ, ದರೋಡೆಗಳಂತಹ ದುಷ್ಕೃತ್ಯಗಳು ಯಾವುದೇ ಗುರುಗಳ ಸಹಾಯವಿಲ್ಲದೆ ಕಲಿಯುವ ಕೃತ್ಯಗಳು ಎಂಬ ಭಾವನೆ ಈಗ ದೂರಾಗಿದೆ. ನೋವಿನ ಸಂಗತಿ ಎಂದರೆ ಇಂಥ ಶಾಲೆಗಳಿಗೂ ತಮ್ಮ ಮಕ್ಕಳನ್ನು ಕಳುಹಿಸುವ ಪೋಷಕರಿದ್ದಾರೆ ಎಂಬುದು. ಇಂತಹ ಶಾಲೆಗಳು, ಕೃತ್ಯಗಳನ್ನು ಕಲಿಸುವವರು ಹೆಚ್ಚಾದಷ್ಟೂ ಸಮಾಜ ದಿಕ್ಕುತಪ್ಪುತ್ತದೆ. ಆದ್ದರಿಂದ ಸರ್ಕಾರ ಇಂತಹ ಬೆಳವಣಿಗೆಗೆ ಕಡಿವಾಣ ಹಾಕಬೇಕು.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.
ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…
ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…
ಬೆಂಗಳೂರು : ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದ ಸವಾಲುಗಳ ಬಗ್ಗೆ…
ಬೆಂಗಳೂರು : ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಒಕ್ಕಲಿಗ ನಾಯಕರನ್ನು ಬೆಳೆಸಲಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ…
ಮಡಿಕೇರಿ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನಪ್ರಿಯ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ರೈತರ…