ಓದುಗರ ಪತ್ರ
ಮಧ್ಯ ಪ್ರದೇಶದಲ್ಲಿ ಕಳ್ಳತನ, ದರೋಡೆ ಮತ್ತು ಲೂಟಿಗಳನ್ನು ಹೇಗೆ ಮಾಡುವುದು ಎಂಬುದನ್ನು ಕಲಿಸಲು ಒಂದು ಶಾಲೆ ಇದ್ದು, ಅಲ್ಲಿ ಆರು ತಿಂಗಳ ಕೋರ್ಸ್ ಪಡೆಯಲು 50,000 ರೂ.ಗಳಿಂದ 3 ಲಕ್ಷ ರೂ.ಗಳವರೆಗೆ ಶುಲ್ಕ ಪಾವತಿಸಬೇಕು ಎಂಬ ಸುದ್ದಿ ಕೇಳಿ ನಿಜಕ್ಕೂ ಆಶ್ಚರ್ಯವಾಯಿತು.
ವರ್ಷಗಳ ಹಿಂದೆ ಜಾರ್ಖಂಡ್ನ ಗ್ರಾಮವೊಂದರಲ್ಲಿ ಸೈಬರ್ ಕ್ರೈಮ್ ಮಾಡುವುದು ಹೇಗೆ ಎಂಬುದನ್ನು ಕಲಿಸಲಾಗುತ್ತಿದೆ ಎಂಬ ಸುದ್ದಿ ಕೇಳಿ ಗಾಬರಿಗೊಂಡಿದ್ದೆವು. ಈಗ ಕಳ್ಳತನ, ದರೋಡೆಯಂತಹ ದುಷ್ಕೃತ್ಯಗಳನ್ನು ಕಲಿಸಲೂ ಶಾಲೆ ಇದೆ ಎಂಬುದನ್ನು ಕೇಳಿ ನಮ್ಮ ಸಮಾಜ ದಿಕ್ಕು ತಪ್ಪುತ್ತಿದೆಯೇನೋ ಅನಿಸುತ್ತದೆ. ಕಳ್ಳತನ, ದರೋಡೆಗಳಂತಹ ದುಷ್ಕೃತ್ಯಗಳು ಯಾವುದೇ ಗುರುಗಳ ಸಹಾಯವಿಲ್ಲದೆ ಕಲಿಯುವ ಕೃತ್ಯಗಳು ಎಂಬ ಭಾವನೆ ಈಗ ದೂರಾಗಿದೆ. ನೋವಿನ ಸಂಗತಿ ಎಂದರೆ ಇಂಥ ಶಾಲೆಗಳಿಗೂ ತಮ್ಮ ಮಕ್ಕಳನ್ನು ಕಳುಹಿಸುವ ಪೋಷಕರಿದ್ದಾರೆ ಎಂಬುದು. ಇಂತಹ ಶಾಲೆಗಳು, ಕೃತ್ಯಗಳನ್ನು ಕಲಿಸುವವರು ಹೆಚ್ಚಾದಷ್ಟೂ ಸಮಾಜ ದಿಕ್ಕುತಪ್ಪುತ್ತದೆ. ಆದ್ದರಿಂದ ಸರ್ಕಾರ ಇಂತಹ ಬೆಳವಣಿಗೆಗೆ ಕಡಿವಾಣ ಹಾಕಬೇಕು.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…