ಓದುಗರ ಪತ್ರ
ಮಧ್ಯ ಪ್ರದೇಶದಲ್ಲಿ ಕಳ್ಳತನ, ದರೋಡೆ ಮತ್ತು ಲೂಟಿಗಳನ್ನು ಹೇಗೆ ಮಾಡುವುದು ಎಂಬುದನ್ನು ಕಲಿಸಲು ಒಂದು ಶಾಲೆ ಇದ್ದು, ಅಲ್ಲಿ ಆರು ತಿಂಗಳ ಕೋರ್ಸ್ ಪಡೆಯಲು 50,000 ರೂ.ಗಳಿಂದ 3 ಲಕ್ಷ ರೂ.ಗಳವರೆಗೆ ಶುಲ್ಕ ಪಾವತಿಸಬೇಕು ಎಂಬ ಸುದ್ದಿ ಕೇಳಿ ನಿಜಕ್ಕೂ ಆಶ್ಚರ್ಯವಾಯಿತು.
ವರ್ಷಗಳ ಹಿಂದೆ ಜಾರ್ಖಂಡ್ನ ಗ್ರಾಮವೊಂದರಲ್ಲಿ ಸೈಬರ್ ಕ್ರೈಮ್ ಮಾಡುವುದು ಹೇಗೆ ಎಂಬುದನ್ನು ಕಲಿಸಲಾಗುತ್ತಿದೆ ಎಂಬ ಸುದ್ದಿ ಕೇಳಿ ಗಾಬರಿಗೊಂಡಿದ್ದೆವು. ಈಗ ಕಳ್ಳತನ, ದರೋಡೆಯಂತಹ ದುಷ್ಕೃತ್ಯಗಳನ್ನು ಕಲಿಸಲೂ ಶಾಲೆ ಇದೆ ಎಂಬುದನ್ನು ಕೇಳಿ ನಮ್ಮ ಸಮಾಜ ದಿಕ್ಕು ತಪ್ಪುತ್ತಿದೆಯೇನೋ ಅನಿಸುತ್ತದೆ. ಕಳ್ಳತನ, ದರೋಡೆಗಳಂತಹ ದುಷ್ಕೃತ್ಯಗಳು ಯಾವುದೇ ಗುರುಗಳ ಸಹಾಯವಿಲ್ಲದೆ ಕಲಿಯುವ ಕೃತ್ಯಗಳು ಎಂಬ ಭಾವನೆ ಈಗ ದೂರಾಗಿದೆ. ನೋವಿನ ಸಂಗತಿ ಎಂದರೆ ಇಂಥ ಶಾಲೆಗಳಿಗೂ ತಮ್ಮ ಮಕ್ಕಳನ್ನು ಕಳುಹಿಸುವ ಪೋಷಕರಿದ್ದಾರೆ ಎಂಬುದು. ಇಂತಹ ಶಾಲೆಗಳು, ಕೃತ್ಯಗಳನ್ನು ಕಲಿಸುವವರು ಹೆಚ್ಚಾದಷ್ಟೂ ಸಮಾಜ ದಿಕ್ಕುತಪ್ಪುತ್ತದೆ. ಆದ್ದರಿಂದ ಸರ್ಕಾರ ಇಂತಹ ಬೆಳವಣಿಗೆಗೆ ಕಡಿವಾಣ ಹಾಕಬೇಕು.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…
ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…