Andolana originals

ತಾಯ್ತನದಿಂದ ವಿದ್ಯಾರ್ಥಿನಿಯರ ಸಲಹುವ ಘನ ವ್ಯಕ್ತಿತ್ವ

ಚಿರಂಜೀವಿ ಸಿ. ಹುಲ್ಲಹಳ್ಳಿ

‘ಹೆಣ್ಣು ಹೆಣ್ಣೆಂದೇಕೆ ಹೀಗಳೆಯುವಿರಿ, ನಿಮ್ಮನ್ನು ಹೆತ್ತವಳು ಹೆಣ್ಣಲ್ಲವೇ’… ಈ ವಚನದ ಸಾಲು ಬಹುಶಃ ‘ಅವರ’ ಅಂತರಾಳವನ್ನು ಕಲಕಿರಬೇಕು. ಹಾಗಾಗಿಯೇ ‘ಅವರು’ ಹೆಣ್ಣುಮಕ್ಕಳ ಸ್ವಾಲವಂಬನೆಗೆ ಬುನಾದಿಯಾಗುವ ಶಿಕ್ಷಣ ಸಂಸ್ಥೆಗಳನ್ನು ತೆರೆದರು. ಅವರು, ಮೈಸೂರಿನ ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ. ಬಸವಾದಿ ಶರಣರ ಪ್ರಗತಿಪರ ಚಿಂತನೆಗಳನ್ನು ತನ್ನ ನಡೆ-ನುಡಿಗಳಲ್ಲಿ, ಕೃತಿಯಲ್ಲಿ ಪಾಲಿಸುತ್ತಿರುವವರು ಶ್ರೀ ಚಿದಾನಂದ ಸ್ವಾಮೀಜಿ.

ನಟರಾಜ ಪ್ರತಿಷ್ಠಾನವನ್ನು ಸ್ಥಾಪಿಸಿ, ಶೋಷಿತರು, ಬಡವರು, ಗ್ರಾಮೀಣ ಭಾಗದ ಹೆಣ್ಣು ಮಕ್ಕಳಿಗೆ ತ್ರಿವಿಧ ದಾಸೋಹ ಧಾರೆ ಎರೆಯುತ್ತಾ, ಮಕ್ಕಳ ಮುಗ್ಧ ಪ್ರೀತಿಯ ಗೌರವಕ್ಕೆ ಪಾತ್ರರಾಗಿದ್ದಾರೆ. ವಸತಿ ನಿಲಯಗಳಲ್ಲಿ ಊಟೋಪಚಾರ, ಮಕ್ಕಳ ಆರೈಕೆ, ಪೋಷಣೆಗೆ ಒತ್ತು ನೀಡುವ ಶ್ರೀಗಳು ಕಾಲೇಜಿನ ಆವರಣಕ್ಕೆ ಆಗಮಿಸಿ ಪ್ರೀತಿಯಿಂದ ಮಕ್ಕಳ ಕುಶಲೋಪರಿ ವಿಚಾರಿಸಿ ಅಂತಃ ಕರಣದ ಮಾತುಗಳನ್ನಾಡಿ ಪ್ರೀತಿ ಹಂಚುತ್ತಾರೆ.

ಸ್ತ್ರೀ ಸಬಲೀಕರಣಕ್ಕೆ ಮುಂದಾಗಿರುವ ಶ್ರೀಗಳ ಕುರಿತು ಕೆಲ ವಿದ್ಯಾರ್ಥಿಗಳು ಹಂಚಿಕೊಂಡಿರುವ ಮಾತುಗಳು ಇಲ್ಲಿವೆ.

” ಗ್ರಾಮೀಣ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನಟರಾಜ ಪ್ರತಿಷ್ಠಾನ ಅನುಕೂಲ ಮಾಡಿಕೊಡುತ್ತಿದೆ. ನಟರಾಜ ಕಾಲೇಜು ಎಂದರೆ ಸುರಕ್ಷತೆಗೆ ಹೆಸರುವಾಸಿ. ಒಂದು ಖಾಸಗಿ ಸಂಸ್ಥೆ ಯಾಗಿ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಮಹತ್ವ ನೀಡಲಾಗುತ್ತಿದೆ. ಮುಂದೆಯೋ ಇಲ್ಲಿಯೇ ವಿದ್ಯಾಭ್ಯಾಸ ಮಾಡುತ್ತೇವೆ. ಇಲ್ಲಿನ ಪಠ್ಯೇತರ ಚಟುವಟಿಕೆಗಳು ನಮಗೆ ಬಹಳ ಇಷ್ಟ.”

-ಗಗನ, ವಿದ್ಯಾರ್ಥಿನಿ, ದ್ವಿತೀಯ ಪಿಯುಸಿ

” ಮೊದಲು ನನಗೆ ನಟರಾಜ ಕಾಲೇಜು ಎಂದಾಗ ಭಯವಾಗುತ್ತಿತ್ತು. ಆದರೆ, ನಾನು ಕಾಲೇಜಿಗೆ ಕಾಲಿಡುತ್ತಿದ್ದಂತೆ ಆ ಭಯವೆಲ್ಲ ಕಡಿಮೆಯಾಯಿತು. ಏಕೆಂದರೆ ಇಲ್ಲಿನ ಮಠದ ವಾತಾವರಣ ನನ್ನನ್ನು ಸೆಳೆದುಕೊಂಡಿತು. ಶಿಕ್ಷಕ ವರ್ಗದ ಒಡನಾಟ ಉತ್ತಮವಾಗಿದೆ. ಕಾಲೇಜುಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ನಮ್ಮ ಬದುಕಿನ ಮೌಲ್ಯಗಳ ವಿಚಾರ ತಿಳಿದುಕೊಳ್ಳಬಹುದು.”

-ಭಾವನಾ, ವಿದ್ಯಾರ್ಥಿನಿ, ದ್ವಿತೀಯ ಪಿಯುಸಿ

” ಶ್ರೀಗಳು ಉತ್ತಮ ಸೌಲಭ್ಯಗಳನ್ನು ಒದಗಿಸುವ ಮೂಲಕ ಶಿಕ್ಷಣ ಕೊಡುತ್ತಿದ್ದಾರೆ. ಶ್ರೀಗಳು, ಕಾಲೇಜಿನ ಉಪನ್ಯಾಸಕರು ನಮ್ಮನ್ನು ತಾಯಿಯ ರೀತಿ ನೋಡಿಕೊಳ್ಳುತ್ತಾರೆ. ಕಾಲೇಜಿನ ಪ್ರವೇಶ ಶುಲ್ಕ ಕಡಿಮೆಯಿದೆ. ನಿಗದಿತ ದಿನಾಂಕದೊಳಗೆ ಪ್ರವೇಶ ಶುಲ್ಕವನ್ನು ಪಾವತಿಸಲು ಕಷ್ಟವಾಗಿ, ಸ್ವಲ್ಪ ಸಮಯಾವಕಾಶಕ್ಕಾಗಿ ಮನವಿ ಮಾಡಿದರೆ, ಶ್ರೀಗಳು ಸ್ಪಂದಿಸುತ್ತಾರೆ. ಇದರಿಂದ ಪೋಷಕರಿಗೆ ಸಹಾಯವಾಗುತ್ತದೆ.”

-ಎನ್.ನಿತ್ಯಾ, ವಿದ್ಯಾರ್ಥಿನಿ, ದ್ವಿತೀಯ ಬಿ.ಎ.

” ನಟರಾಜ ಕಾಲೇಜಿನ ಬಗ್ಗೆ ನಮ್ಮ ಅಕ್ಕಂದಿರನ್ನು ಕೇಳಿ ತಿಳಿದುಕೊಳ್ಳುತ್ತಿದ್ದೆ. ಅವರಿಂದ ಬಂದ ಒಳ್ಳೆಯ ಅಭಿ ಪ್ರಾಯ, ನಿರ್ಭೀತಿಯ ಮಾತುಗಳು ನನಗೆ ಕಾಲೇಜು ಸೇರುವ ಬಯಕೆಯನ್ನು ಹೆಚ್ಚಿಸಿದವು. ಇಲ್ಲಿಗೆ ಬಂದು ಒಂದೆರಡು ತಿಂಗಳು ಕಳೆದ ನಂತರ ನನಗೂ ಅದು ನಿಜವೆನಿಸಿತು. ಕಾಲೇಜಿನಲ್ಲಿ ಉತ್ತಮ ಶಿಕ್ಷಕವರ್ಗ ಇದೆ. ಶ್ರೀ ಚಿದಾನಂದ ಸ್ವಾಮೀಜಿ ನಮ್ಮ ಕಷ್ಟಗಳಿಗೆ ಸ್ಪಂದಿಸುತ್ತಾರೆ.”

-ಚೌಡಮ್ಮ, ವಿದ್ಯಾರ್ಥಿನಿ,  ದ್ವಿತೀಯ ಪಿಯುಸಿ 

” ಗುಲ್ಬರ್ಗದವಳಾದ ನಾನು ಪ್ರಥಮ ಪಿಯುಸಿಯಿಂದ ನಟರಾಜ ವಿದ್ಯಾ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದೇನೆ. ಬಡ ಕುಟುಂಬದಿಂದ ಬಂದ ನಮಗೆ ಶಿಕ್ಷಣ, ವಸತಿ, ಊಟ ನೀಡುವ ಮೂಲಕ ಶ್ರೀಗಳು ನೆರವಾಗಿದ್ದಾರೆ. ನಮ್ಮ ಕಷ್ಟಗಳನ್ನು ಶ್ರೀಗಳ ಮುಂದೆ ಹೇಳಿಕೊಂಡರೆ, ಸಂಬಂಧಪಟ್ಟವರಿಗೆ ಹೇಳಿ ಬಗೆಹರಿಸುತ್ತಾರೆ. ಅವರ ಜವಾಬ್ದಾರಿ ನಿರ್ವಹಣೆಯ ಪರಿಗೆ ಇದಕ್ಕಿಂತ ಬೇರೆ ನಿದರ್ಶನ ಬೇಕಿಲ್ಲ.”

-ಕಾವೇರಿ, ವಿದ್ಯಾರ್ಥಿನಿ, ದ್ವಿತೀಯ ಬಿ.ಕಾಂ.

ಆಂದೋಲನ ಡೆಸ್ಕ್

Recent Posts

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

38 mins ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

56 mins ago

ಬೆಟ್ಟಳ್ಳಿ ಮಾರಮ್ಮನ ಜಾತ್ರೆ ; ಹನೂರಲ್ಲಿ 2 ದಿನ ಮದ್ಯ ಮಾರಾಟ ನಿಷೇಧ

ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…

1 hour ago

ಕೆ.ಆರ್.ಆಸ್ಪತ್ರೆಯಲ್ಲಿ 100 ಹಾಸಿಗೆಯುಳ್ಳ ICU ಘಟಕ ಸ್ಥಾಪಿಸಿ : ಎಂಎಲ್‌ಸಿ ಕೆ.ಶಿವಕುಮಾರ್ ಮನವಿ

ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ…

2 hours ago

ಈವರೆಗೂ ಇರಾನ್‌ನಿಂದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ: ಸಚಿವ ಜೈಶಂಕರ್‌

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್‌…

4 hours ago

ಮಾರ್ಚ್.‌11ರಿಂದ ವೈದ್ಯರ ಮುಷ್ಕರ ಫಿಕ್ಸ್:‌ ಸರ್ಕಾರಿ ಆಸ್ಪತ್ರೆಗಳ ಓಪಿಡಿ ಸೇವೆ ಬಂದ್‌

ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್.‌11ರಿಂದ ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆಗೆ ಕರೆ…

4 hours ago