Andolana originals

ಕಣ್ಮನ ಸೆಳೆದ ಜಂಬೂಸವಾರಿ

ಕೆ.ಬಿ.ರಮೇಶ ನಾಯಕ

ಮೈಸೂರು: ಭಾರತೀಯ ಸಂಸ್ಕೃತಿ ಪರಂಪರೆಯ ಸಂಕೇತ ಹಾಗೂ ಜಗತ್ತಿನ ಅತಿದೊಡ್ಡ ಉತ್ಸವಗಳಲ್ಲಿ ಒಂದಾದ ಇತಿಹಾಸ, ಪರಂಪರೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಧಾನ ಆಕರ್ಷಣೆ ವಿಜಯದಶಮಿ ಮೆರವಣಿಗೆಯನ್ನು ಲಕ್ಷಾಂತರ ಮಂದಿ ಸಾಕ್ಷೀಕರಿಸಿದರು. ಜಾತಿ, ಧರ್ಮ, ವರ್ಗ, ವರ್ಣ ಎಲ್ಲವನ್ನೂ ಮೀರಿ ಭಾವೈಕ್ಯತೆಯನ್ನು ಬೆಸೆಯುವ ಜನ ಮಾನಸದ ನಾಡಹಬ್ಬವಾಗಿ ಆಚರಿಸಲ್ಪಡುತ್ತಿರುವ ೧೧ ದಿನಗಳ ದಸರಾ ವೈಭವಕ್ಕೆ ಜಂಬೂಸವಾರಿ ಮೆರವಣಿಗೆಯೊಂದಿಗೆ ವರ್ಣರಂಜಿತ ತೆರೆ ಎಳೆಯಲಾಯಿತು.

೭೫೦ ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ನಾಡದೇವತೆ ಚಾಮುಂಡೇಶ್ವರಿಯನ್ನು ಹೊತ್ತು ಕುಮ್ಕಿ ಆನೆಗಳಾದ ರೂಪ ಮತ್ತು ಕಾವೇರಿಯೊಂದಿಗೆ ಅಭಿಮನ್ಯು ರಾಜ ಗಾಂಭೀರ್ಯದಿಂದ ಸಾಗುತ್ತಿದ್ದಂತೆ ರಾಜಮಾರ್ಗದ ಇಕ್ಕೆಲೆಗಳಲ್ಲಿ ನಿಂತಿದ್ದ ಜನಸ್ತೋಮ ಹರ್ಷೋದ್ಗಾರ ಮಾಡಿ ತಮ್ಮ ಗೌರವವನ್ನು ಸಲ್ಲಿಸಿದರು. ಅಭಿಮನ್ಯು ೬ನೇ ಬಾರಿಗೆ ಅಂಬಾರಿ ಹೊತ್ತು ಸಾಗಿದನು. ಅಂಬಾವಿಲಾಸ ಅರಮನೆಯ ಆವರಣದಲ್ಲಿ ಸಂಜೆ ೪.೪೫ಕ್ಕೆ ಸರಿಯಾಗಿ ವಿಶೇಷ ವೇದಿಕೆಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿದ್ದ ನಾಡಿನ ಅಽದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ವಿಧ್ಯುಕ್ತವಾಗಿ ಚಾಲನೆ ನೀಡಿದರು.

ವೇದಿಕೆಯಲ್ಲಿ ಮುಖ್ಯ ಮಂತ್ರಿಗಳೊಂದಿಗೆ, ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ವಿಭು ಬಖ್ರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಲ್ಲಾಧಿಕಾರಿ ಜಿ.ಲಕ್ಷಿ ಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಉಪಸ್ಥಿತರಿದ್ದು ಪುಷ್ಪಾರ್ಚನೆ ಮಾಡಿದರು.

ಅಂಬಾರಿ ಹೊತ್ತ ಆನೆ ಬಂದು ನಿಲ್ಲುತ್ತಿದ್ದಂತೆ ಅಶ್ವಾರೋಹಿ ದಳದ ಕಮಾಂಡೆಂಟ್ ಕೆ.ಎಸ್.ಸುರೇಶ್ ಪಥ ಸಂಚಲನಕ್ಕೆ ಅನುಮತಿ ಕೋರಿದರು. ವಿಜಯದ ಸಂಕೇತವಾಗಿ ೨೧ ಸುತ್ತು ಕುಶಾಲು ತೋಪುಗಳು ಮೊಳಗಿದವು. ನಂತರ ಪೊಲೀಸ್ ವಾದ್ಯವೃಂದದವರು ರಾಷ್ಟ್ರಗೀತೆ ನುಡಿಸಿ ಗೌರವ ವಂದನೆ ಸಲ್ಲಿಸಿದರು. ಗಣ್ಯರು ದೇವಿಗೆ ನಮನ ಸಲ್ಲಿಸಿ ತಮ್ಮ ಗೌರವವನ್ನು ಸಲ್ಲಿಸಿದರು. ನಂತರ ಮಂಗಳ ವಾದ್ಯ, ಪೊಲೀಸ್ ವಾದ್ಯವೃಂದ, ರಕ್ಷಣಾ ಪಡೆಗಳ ಗೌರವ, ಅಶ್ವಾರೋಹಿ ದಳದೊಂದಿಗೆ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು ಶಾಂತಚಿತ್ತನಾಗಿ ಹೆಜ್ಜೆ ಹಾಕಿದನು.

ಅಂಬಾವಿಲಾಸ ಅರಮನೆಯ ಆವರಣದಿಂದ ಸಂಜೆ ೪.೪೫ಕ್ಕೆ ಹೊರಟ ಜಂಬೂಸವಾರಿ, ಅರಮನೆ ಉತ್ತರ ಭಾಗದಲ್ಲಿರುವ ಬಲರಾಮ ದ್ವಾರದ ಮೂಲಕ ಚಾಮರಾಜ ಒಡೆಯರ್ ವೃತ್ತ, ಕೃಷ್ಣರಾಜ ಒಡೆಯರ್ ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದ ಕಾಲೇಜು ವೃತ್ತ, ಬಂಬೂ ಬಜಾರ್, ಹೈವೇ ವೃತ್ತ, ನೆಲ್ಸನ್ ಮಂಡೇಲಾ ರಸ್ತೆ ಮಾರ್ಗವಾಗಿ ಸಂಜೆ ೭ ಗಂಟೆಗೆ ಬನ್ನಿಮಂಟಪ ಮೈದಾನವನ್ನು ತಲುಪಿತು.

ಇದಕ್ಕೂ ಮುನ್ನ ಮಧ್ಯಾಹ್ನ ೧.೧೦ಕ್ಕೆ ಸರಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉತ್ತರ ದ್ವಾರದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ದಸರಾ ಮೆರವಣಿಗೆಗೆ ನಾಂದಿ ಹಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಶಿವರಾಜ್ ಎಸ್.ತಂಗಡಗಿ ಜತೆಗೂಡಿ ಪೂಜೆ ಸಲ್ಲಿಸಿದರು.

ನಾಡಿನ ಸಾಂಸ್ಕೃತಿಕ, ಸಾಹಿತ್ಯಕ ಸೊಬಗನ್ನು ಮೇಳೈಸಿಕೊಂಡು ಜಾಗತಿಕ ಮಟ್ಟದ ಸ್ಪರ್ಶವನ್ನು ನೀಡಿರುವ ನಾಡಹಬ್ಬದ ವಿಜಯದಶಮಿ ಮೆರವಣಿಗೆ ನಂದಿ ಧ್ವಜ ಕುಣಿತದೊಂದಿಗೆ ಆರಂಭವಾಗಿ ಸಾಲು ಸಾಲಾಗಿ ಅರಮನೆ ಆವರಣವನ್ನು ಬಿಡುವ ಹೊತ್ತಿಗೆ ಸುಮಾರು ಸಂಜೆ ೫ ಗಂಟೆ ಆಯಿತು.

ಜಂಬೂಸವಾರಿ ಮೆರವಣಿಗೆಯನ್ನು ನಿಶಾನೆ ಆನೆ ಧನಂಜಯ ಮುನ್ನಡೆಸಿದರೆ, ನೌಪತ್ ಆನೆಯಾಗಿ ಗೋಪಿ, ಸಾಲಾನೆಗಳಾಗಿ ಏಕಲವ್ಯ, ಮಹೇಂದ್ರ, ಲಕ್ಷಿ , ಶ್ರೀಕಂಠ, ಕಂಜನ್, ಭೀಮ, ಹೇಮಾವತಿ, ಸುಗ್ರೀವ, ಪ್ರಶಾಂತ್ ಹಿಂಬಾಲಿಸಿದವು.

೬ನೇ ಬಾರಿಗೆ ಅಂಬಾರಿ ಹೊತ್ತ ಅಭಿಮನ್ಯು:  ೭೫೦ ಕೆಜಿ ತೂಕದ ಅಂಬಾರಿ ಹೊತ್ತ ಅಭಿಮನ್ಯು ಆರನೇ ಬಾರಿಯೂ ತನ್ನ ಕಾರ್ಯವನ್ನು ಯಶಸ್ವಿಯಾಗಿ ಮುಗಿಸುವ ಮೂಲಕ ಎಲ್ಲರ ಗಮನ ಸೆಳೆದನು. ವಿಶೇಷ ಕಮಾಂಡೋ ಪಡೆ ಪೊಲೀಸರು ಅಭಿಮನ್ಯು ಸುಗಮವಾಗಿ ಸಾಗಲು ಎರಡೂ ಬದಿಯಲ್ಲಿ ಹಗ್ಗದ ಬ್ಯಾರಿಕೇಡ್ ಮಾಡಿ ರಕ್ಷಣೆ ನೀಡಿದರು.

ಅರಮನೆಗೆ ‘ಐರಾವತ’ದಲ್ಲಿ ಬಂದರು:  ನಾಡಹಬ್ಬ ದಸರಾ ಮಹೋತ್ಸವದ ಕೇಂದ್ರ ಬಿಂದು ಜಂಬೂಸವಾರಿ ಮೆರವಣಿಗೆಯನ್ನು ಉದ್ಘಾಟಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ‘ಐರಾವತ’ ಬಸ್‌ನಲ್ಲಿ ಬಂದರು. ಸರ್ಕಾರಿ ಅತಿಥಿಗೃಹದಿಂದ ಹೊರಟು ದೊಡ್ಡಕೆರೆ ಮೈದಾನದ ಕಡೆಯಿಂದ ಅರಮನೆ ಪ್ರವೇಶಿಸಿ ಬಲರಾಮ ದ್ವಾರದ ಮೂಲಕ ನಂದಿ ಧ್ವಜ ಪೂಜೆ ಸ್ಥಳಕ್ಕೆ ಬಂದಿಳಿದರು. ಪೂಜೆಯ ನಂತರ ತೆರೆದ ಜೀಪಿನಲ್ಲಿ ಅರಮನೆಯೊಳಕ್ಕೆ ಆಗಮಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

6 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

6 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

6 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

6 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

6 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

6 hours ago