Andolana originals

ರಾಜ್ಯಕ್ಕೆ ಮಸಿ ಮೆತ್ತಿದ ಕಾಲ್ತುಳಿತ ದುರಂತ

ಐಪಿಎಲ್ ಕ್ರಿಕೆಟ್ ಆರಂಭವಾದ ೧೮ ವರ್ಷಗಳ ಬಳಿಕ ಫೈನಲ್‌ನಲ್ಲಿ ಜಯಗಳಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಅಭಿಮಾನಿಗಳಲ್ಲಿ ಮೂಡಿಸಿದ ಹರ್ಷ, ಉತ್ಸಾಹ ಕೆಲವೇ ಗಂಟೆಗಳಲ್ಲಿ ಸಾವಿನ ಮನೆಯ ರೋದನವಾಗಿ ಮಾರ್ಪಟ್ಟು, ಕರ್ನಾಟಕ ಇತಿಹಾಸದಲ್ಲಿ ಶಾಶ್ವತ ಕಪ್ಪುಚುಕ್ಕೆಯಾಗಿ ಉಳಿಯಿತು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವಿಜಯೋತ್ಸವದ ಹೊಳೆಯಲ್ಲಿ ಮಿಂದೇಳಲು ಅತ್ಯುತ್ಸಾಹದಿಂದ ಆಗಮಿಸಿದ್ದ ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳ ಪೈಕಿ ಬಾಲಕಿಯೊಬ್ಬರು ಸೇರಿ ೧೧ ಮಂದಿ ಗೊಂದಲದಿಂದ ಉಂಟಾದ ಕಾಲ್ತುಳಿತಕ್ಕೆ ಸಿಲುಕಿ ಅಸುನೀಗಿದರೆ, ೬೦ಕ್ಕೂ ಹೆಚ್ಚು ಮಂದಿ ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ದಾಖಲಾದರು. ಅಭಿಮಾನದ ಹುಚ್ಚುಹೊಳೆಯ ಆಘಾತವನ್ನು ಸಮರ್ಪಕವಾಗಿ ಊಹಿಸಲಾಗದ ಆರ್‌ಸಿಬಿ ಆಡಳಿತ ಮಂಡಳಿ, ಕೆಎಸ್ ಸಿಎ, ಡಿಎನ್‌ಎ (ಈವೆಂಟ್ ಮ್ಯಾನೇಜ್‌ಮೆಂಟ್) ಸಂಸ್ಥೆಗಳು ತಂಡದ ಗೆಲುವಿನ ಸಂಭ್ರಮಾಚರಣೆಗೆ ಆತುರಾತುರ ನಿರ್ಧಾರ ಕೈಗೊಂಡವು. ವಾಸ್ತವವಾಗಿ ಈ ಮೂರೂ ಸಂಸ್ಥೆಗಳಿಗಿಂತ ಹೆಚ್ಚಿನ ಜವಾಬ್ದಾರಿ ಹೊಂದಿರುವ ರಾಜ್ಯ ಸರ್ಕಾರ ಕೂಡ ವಿಜಯೋತ್ಸವ ಆಚರಣೆಗೆ ಸಮ್ಮತಿಸಿದ್ದು ದುರಂತ.

ಜೂ.೩ರಂದು ಆರ್‌ಸಿಬಿ ತಂಡ ಐಪಿಎಲ್ ಟ್ರೋಫಿ ಗೆದ್ದುಕೊಂಡಿತು. ಆ ದಿನ ರಾತ್ರಿ ಪೂರ ಅಭಿಮಾನಿಗಳು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಂಭ್ರಮಿಸಿದ್ದಾರೆ. ಅದು ಭದ್ರತೆ ಒದಗಿಸಿದ್ದ ಪೊಲೀಸರನ್ನು ಹೈರಾಣಾಗಿಸಿತ್ತು. ಇದರ ನಡುವೆ ಐಪಿಎಲ್ ಫೈನಲ್ ಪಂದ್ಯ ಆರಂಭವಾಗುತ್ತಿದ್ದಂತೆ ಆರ್‌ಸಿಬಿ ಆಡಳಿತ ಮಂಡಳಿ ಜೂ.೪ರಂದು ಸಂಜೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಆಚರಿಸುವುದಾಗಿ ಘೋಷಿಸಿದೆ. ಇದಕ್ಕೆ ಕೆಎಸ್‌ಸಿಎ ಕೂಡ ಸಹಕಾರ ನೀಡಿದೆ. ಇದಲ್ಲದೆ, ರಾಜ್ಯ ಸರ್ಕಾರ ಅದೇ ದಿನ ಬೆಳಿಗ್ಗೆಯೇ ಆರ್‌ಸಿಬಿ ತಂಡಕ್ಕೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದ ನಂತರ ಆಟಗಾರರನ್ನು ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕರೆದೊಯ್ಯುವುದು ಅಂತಲೂ ನಿಗದಿಯಾಗಿತ್ತು. ಇದೊಂದು ರೀತಿಯಲ್ಲಿ ‘ಬೆಕ್ಕಿಗೆ ಚೆಲ್ಲಾಟ; ಇಲಿಗೆ ಪ್ರಾಣ ಸಂಕಟ’ ಎಂಬಂತಾಯಿತು.

ಅಭಿನಂದನಾ ಸಮಾರಂಭ, ಮೆರವಣಿಗೆ ಮತ್ತು ಸಂಭ್ರಮಾಚರಣೆ ಈ ಮೂರೂ ಕಡೆ ಬಂದೋಬಸ್ತ್ ಮಾಡಬೇಕಾದ ಪೊಲೀಸರಿಗೆ ಎಲ್ಲವೂ ಅಯೋಮಯವಾಗಿ ಕಾಣಿಸಿದೆ. ಮೆರವಣಿಗೆಯನ್ನು ಪೊಲೀಸರು ಹೇಗೋ ರದ್ದುಪಡಿಸಿದರು. ಆದರೆ, ಸಂಜೆಯ ಸಂಭ್ರಮಾಚರಣೆ ವೇಳೆ ಬಂದೋಬಸ್ತ್ ಮಾಡುವುದಕ್ಕೆ ಬಹುಶಃ ಅವರಿಗೆ ಸಮಯಾವಕಾಶ ಸಾಲದಾಯಿತು ಅನಿಸುತ್ತದೆ. ಆದರೆ, ಅದು ಕ್ಷಮಿಸಲಾರದಂತಹ ಪ್ರಮಾದಕ್ಕೆ ಎಡೆಮಾಡಿಕೊಟ್ಟಿತು.

ಕ್ರೀಡಾಂಗಣದ ಪ್ರವೇಶ ದ್ವಾರದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು, ಇಂಜಿನಿಯರ್ ಸೇರಿದಂತೆ ೧೧ ಮಂದಿ ಯುವಜನರ ಪ್ರಾಣ ಹರಣವಾಯಿತು. ಯಾರದ್ದೋ ಪ್ರಭಾವಕ್ಕೆ, ಯಾರದ್ದೋ ಮೇಲಾಟಕ್ಕೆ ಇಂತಹ ದೊಡ್ಡ ಅವಘಡ ಸಂಭವಿಸಿದೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ. ರಾಜ್ಯ ಸರ್ಕಾರ ಕೂಡ ಕಾಲ್ತುಳಿತ ದುರಂತ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದೆ. ಮೃತರ ಕುಟುಂಬಗಳಿಗೆ, ಗಾಯಾಳುಗಳಿಗೆ ಪರಿಹಾರವೂ ಲಭಿಸಿದೆ.

ಯುವಜನರ ಕಟ್ಟೆಯೊಡೆದ ಅಭಿಮಾನ, ತಮ್ಮ ನೆಚ್ಚಿನ ಕ್ರಿಕೆಟಿಗರನ್ನು ನೇರವಾಗಿ ಕಣ್ತುಂಬಿಕೊಳ್ಳಬೇಕು ಎಂಬ ಉನ್ಮಾದ ಕೂಡ ಈ ಘಟನೆಗೆ ಪ್ರಮುಖ ಕಾರಣಗಳಲ್ಲೊಂದು. ಜನರು ಅತಿರೇಕವಾಗಿ ವರ್ತಿಸಬಹುದು ಎಂಬ ಕಲ್ಪನೆಯೂ ಇರದ ಆರ್‌ಸಿಬಿ ಆಡಳಿತ ಮಂಡಳಿಯು ಉಚಿತ ಟಿಕೆಟ್ ಘೋಷಣೆ ಕೂಡ ಮಾಡಿತ್ತು. ಅದನ್ನು ರಾಜ್ಯ ಸರ್ಕಾರವೂ ಹೇಳಿತ್ತು. ಇದು ಕ್ರಿಕೆಟ್ ಪ್ರಿಯರ ಉಮೇದಿನ ಬೆಂಕಿಗೆ ತುಪ್ಪ ಸುರಿದಿತ್ತು. ದುರಂತಕ್ಕೆ ಹಲವು ಕಾರಣಗಳನ್ನು ಪದೇ ಪದೇ ಹೇಳಲಾಗುತ್ತಿದೆ. ಇಂತಹ ಸೂಕ್ಷ ವಿಚಾರವನ್ನು ನಿರ್ವಹಿಸಲು ವಿಫಲವಾಗಿ ರುವ ಆಡಳಿತ ವ್ಯವಸ್ಥೆಯ ಬಗ್ಗೆ ಸಾರ್ವ ಜನಿಕ ವಲಯ ನಂಬಿಕೆ ಕಳೆದುಕೊಳ್ಳುವ ಸ್ಥಿತಿಗೆ ತಲುಪಿದೆ. ದುರಂತಕ್ಕೆ ಕಾರಣ ವೆಂದು ಕೆಲವು ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಈಗ ರಾಜ್ಯ ಸರ್ಕಾರದ ಮಟ್ಟದ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಲಿದೆ ಎನ್ನಲಾಗಿದೆ. ಕೆಎಸ್‌ಸಿಎ ಕಾರ್ಯದರ್ಶಿ, ಖಜಾಂಚಿ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಆರ್‌ಸಿಬಿ ಆಡಳಿತ ಮಂಡಳಿಯ ಕೆಲವರನ್ನು ಬಂಧಿಸಲಾಗಿದೆ. ತಪ್ಪಿತಸ್ಥ ರಿಗೆ ಕಠಿಣ ಶಿಕ್ಷೆಯಾಗಬೇಕು ನಿಜ. ಆದರೆ, ನಿಜವಾಗಿ ತಪ್ಪು ಮಾಡಿರುವವರಿಗೆ ದಂಡನೆಯಾಗಬೇಕೇ ಹೊರತು ಯಾರದೋ ಆದೇಶಕ್ಕೆ ಅನಿವಾರ್ಯವಾಗಿ ತಲೆಬಾಗಿದ ಅಧಿಕಾರಿಗಳು, ಪೊಲೀಸರಿಗೆ ಅಲ್ಲ. ಈ ನಿರ್ಧಾರದಲ್ಲಿ ರಾಜ್ಯದ ಆಡಳಿತಗಾರರ ನೈತಿಕತೆಯೂ ಇದೆ.

” ಅಭಿನಂದನಾ ಸಮಾರಂಭ, ಮೆರವಣಿಗೆ ಮತ್ತು ಸಂಭ್ರಮಾಚರಣೆ ಈ ಮೂರೂ ಕಡೆ ಬಂದೋಬಸ್ತ್ ಮಾಡಬೇಕಾದ ಪೊಲೀಸರಿಗೆ ಎಲ್ಲವೂ ಅಯೋಮಯವಾಗಿ ಕಾಣಿಸಿದೆ. ಮೆರವಣಿಗೆಯನ್ನು ಪೊಲೀಸರು ಹೇಗೋ ರದ್ದುಪಡಿಸಿದರು. ಆದರೆ, ಸಂಜೆಯ ಸಂಭ್ರಮಾಚರಣೆ ವೇಳೆ ಬಂದೋಬಸ್ತ್ ಮಾಡುವುದಕ್ಕೆ ಬಹುಶಃ ಅವರಿಗೆ ಸಮಯಾವಕಾಶ ಸಾಲದಾಯಿತು ಅನಿಸುತ್ತದೆ. ಆದರೆ, ಅದು ಕ್ಷಮಿಸಲಾರದಂತಹ ಪ್ರಮಾದಕ್ಕೆ ಎಡೆಮಾಡಿಕೊಟ್ಟಿತು.

” ಕ್ರೀಡಾಂಗಣದ ಪ್ರವೇಶ ದ್ವಾರದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು, ಇಂಜಿನಿಯರ್ ಸೇರಿದಂತೆ ೧೧ ಮಂದಿ ಯುವಜನರ ಪ್ರಾಣ ಹರಣವಾಯಿತು. ಯಾರದ್ದೋ ಪ್ರಭಾವಕ್ಕೆ, ಯಾರದ್ದೋ ಮೇಲಾಟಕ್ಕೆ ಇಂತಹ ದೊಡ್ಡ ಅವಘಡ ಸಂಭವಿಸಿದೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ. ರಾಜ್ಯ ಸರ್ಕಾರ ಕೂಡ ಕಾಲ್ತುಳಿತ ದುರಂತ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದೆ. ಮೃತರ ಕುಟುಂಬಗಳಿಗೆ, ಗಾಯಾಳುಗಳಿಗೆ ಪರಿಹಾರವೂ ಲಭಿಸಿದೆ.”

ಆಂದೋಲನ ಡೆಸ್ಕ್

Recent Posts

ಮೈಸೂರು | ಪಬ್‌ನಲ್ಲಿ ಅಗ್ನಿ ದುರಂತ ; ಇಬ್ಬರು ಸಜೀವ ದಹನ , 7 ಮಂದಿ ಗಂಭೀರ

ಮೈಸೂರು : ಪಬ್​ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್​…

31 mins ago

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

3 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

5 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

5 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

6 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

10 hours ago