Andolana originals

ಹಾಸಿಗೆ ಹಿಡಿದ ತಾಯಿ ಸೇವೆ ಮಾಡುತ್ತಲೇ ಡಿಸ್ಟಿಂಕ್ಷನ್‌ ಪಡೆದ ವಿದ್ಯಾರ್ಥಿನಿ !

ಸಾಲೋಮನ್
ಮೈಸೂರು: ಕಾಲು ಕಳೆದುಕೊಂಡು ಹಾಸಿಗೆ ಹಿಡಿದಿರುವ ತಾಯಿಯ ಸೇವೆ ಮಾಡುತ್ತಲೇ ಕುಟುಂಬದ ಜವಾಬ್ದಾರಿ ಹೊತ್ತುಕೊಂಡಿರುವ ವಿದ್ಯಾರ್ಥಿನಿ ಗುಲ್ ಅಫ್ತಾ ಖಾನಂ ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ರಾಜೀವ್‌ನಗರ ಬಡಾವಣೆಯ ಮೊದಲ ಹಂತದ ನಿವಾಸಿ ಫರಾನ್ ಹಾಗೂ ಸಬೀನಾ ಖಾನಂ ದಂಪತಿಯ ಏಕೈಕ ಪುತ್ರಿಯಾಗಿರುವ ಗುಲ್ ಅಫ್ತಾ ಖಾನಂ ಎಸ್‌ಎಸ್‌ಎಲ್‌ಸಿಯಲ್ಲಿಯೂ ಉತ್ತಮ ಅಂಕಗಳನ್ನು ಪಡೆದುಕೊಂಡಿದ್ದು, ಎಂಬಿಎ ಶಿಕ್ಷಣ ಪಡೆಯಬೇಕೆಂಬ ಅಭಿಲಾಷೆಯನ್ನು ಹೊಂದಿದ್ದಾರೆ. ಕಾಲು ಕಳೆದುಕೊಂಡಿ ರುವ ತಾಯಿಯ ಸೇವೆಯನ್ನು ಮಾಡುತ್ತಾ, ಎಲ್ಲಾ ಜವಾಬ್ದಾರಿಯನ್ನು ನಿರ್ವಹಿಸುತ್ತಲೇ ತನ್ನ ವಿದ್ಯಾಭ್ಯಾಸದ ಕಡೆಗೂ ಗಮನ ಕೊಟ್ಟಿದ್ದಾರೆ.

ಮನೆ ಕೆಲಸಗಳನ್ನು ಮುಗಿಸಿ ಬಿಡುವು ಸಿಕ್ಕಾಗ ಟಿವಿ, ಮೊಬೈಲ್ ಬಿಟ್ಟು ಓದಿನ ಕಡೆಗೆ ಗಮನಹರಿಸಿದ ಫಲವಾಗಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ‘ನನಗೆ ಬಿಸಿನೆಸ್ ಸ್ಟಡೀಸ್‌ನಲ್ಲಿ ಹೆಚ್ಚು ಆಸಕ್ತಿ ಇದೆ. ಈಗ ಬಿಬಿಎಗೆ ಸೇರುತ್ತೇನೆ. ನಂತರ ಎಂಬಿಎ ಓದಬೇಕೆಂಬ ಆಸೆ ಇಟ್ಟುಕೊಂಡಿದ್ದೇನೆ ಎನ್ನುತ್ತಾರೆ ಗುಲ್ ಅಫ್ತಾ ಖಾನಂ. ಇವರ ತಂದೆ ಫಾರಾನ್ ಖಾನ್ ಆಟೋ ಚಾಲಕರಾಗಿದ್ದಾರೆ. ಕುಟುಂಬದಲ್ಲಿ ಆರ್ಥಿಕ ಸಮಸ್ಯೆಗಳು ಇದ್ದಾಗ್ಯೂ ಮಗಳ ವಿದ್ಯಾಭ್ಯಾಸಕ್ಕೆ ಏನು ತೊಂದರೆಯಾಗದಂತೆ ಬೆನ್ನೆಲುಬಾಗಿ ನಿಂತಿದ್ದಾರೆ. ಗುಲ್ ಅಫ್ತಾ ಖಾನಂ ಬಿಸಿನೆಸ್ ಸ್ಟಡೀಸ್-೯೩, ಅಕೌಂಟೆನ್ಸಿ-೮೫, ಎಕನಾಮಿಕ್ಸ್-೮೫, ಹಿಸ್ಟ್ರಿ-೮೨ ಹಾಗೂ ಇಂಗ್ಲಿಷ್-೭೬ ಸೇರಿ ೫೦೯ ಅಂಕಗಳನ್ನು ಪಡೆದಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಮೈಸೂರು ವಿ.ವಿ 106ನೇ ಘಟಿಕೋತ್ಸವ : 30,966 ಅಭ್ಯರ್ಥಿಗಳಿಗೆ ಪದವಿ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ 106ನೇ ಘಟಿಕೋತ್ಸವವು ಜ.5ರಂದು ಬೆಳಿಗ್ಗೆ 11:30ಕ್ಕೆ ಕ್ರಾಫರ್ಡ್‌ ಭವನದಲ್ಲಿ ನಡೆಯಲಿದೆ. ಒಟ್ಟು 30,966 ವಿದ್ಯಾರ್ಥಿಗಳಿಗೆ…

39 mins ago

ಬಳ್ಳಾರಿ ಘರ್ಷಣೆ | ಮೃತನ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಿದ ಜಮೀರ್‌ ; ಮನೆ ಕಟ್ಟಿಸಿ ಕೊಡುವ ಭರವಸೆ

ಬಳ್ಳಾರಿ : ಬಳ್ಳಾರಿಯಲ್ಲಿ ವಾಲ್ಮೀಕಿ ಬ್ಯಾನರ್ ಕಟ್ಟುವ ವಿಚಾರವಾಗಿ ಗುಂಪುಗಳ ನಡುವೆ ನಡೆದ ಮಾರಮಾರಿಯಲ್ಲಿ ವೇಳೆ ಗುಂಡು ತಗುಲಿ ಮೃತಪಟ್ಟಿದ್ದ…

1 hour ago

ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರೆಗೆ ವಿದ್ಯುಕ್ತ ಚಾಲನೆ

ಕೊಳ್ಳೇಗಾಲ : ಸುಪ್ರಸಿದ್ಧ ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರೆಯಲ್ಲಿ ಮೊದಲನೇ ದಿನವಾದ ಶನಿವಾರ ತಡರಾತ್ರಿ ಚಂದ್ರ ಮಂಡಲೋತ್ಸವದ ಮೂಲಕ ವಿದ್ಯುಕ್ತ ಚಾಲನೆ…

2 hours ago

ವಂದೇ ಭಾರತ್‌ ಸ್ಲೀಪರ್‌ ರೈಲು ಶೀಘ್ರ ಚಾಲನೆ

ಹೊಸದಿಲ್ಲಿ : ವೇಗ, ಸೌಲಭ್ಯ, ಆರಾಮಕ್ಕಾಗಿಯೇ ಜನಪ್ರಿಯವಾಗಿರುವ ವಂದೇ ಭಾರತ್ ಇದೀಗ ಸ್ಲೀಪರ್ ಆವೃತ್ತಿ ಮೂಲಕವೂ ಹಳಿಗಿಳಿಯಲು ಸಜ್ಜಾಗಿದೆ. ಪ್ರಯಾಣಿಕರ…

3 hours ago

ಮಹಾತ್ಮಗಾಂಧಿ ನರೇಗಾ ಕಾಯ್ದೆ ಪುನರ್ ಸ್ಥಾಪಿಸಿ: ಸಿ.ಎಂ.ಸಿದ್ದರಾಮಯ್ಯ ಆಗ್ರಹ

ರಾಯಚೂರು : ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮ-ನರೇಗಾ) ಕಾಯ್ದೆಯನ್ನು ಹೊಸ ಹೆಸರಲ್ಲಿ ಹೊಸ ಕಾಯ್ದೆಯೆಂದು ಘೋಷಿಸಿರುವ…

3 hours ago

ಕ್ಯಾರಕಸ್‌ ಮೇಲೆ ಅಮೆರಿಕಾ ವೈಮಾನಿಕ ದಾಳಿ ; ವೆನೆಜುವೆಲಾ ಅಧ್ಯಕ್ಷ ಮಡುರೊ ಪತ್ನಿ ಸೆರೆ

ಕ್ಯಾರಕಾಸ್ : ವೆನೆಜುವೆಲಾ ಮೇಲಿನ ವೈಮಾನಿಕ ದಾಳಿ ಬಳಿಕ ಅಮೆರಿಕ ಪಡೆಗಳು ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು…

4 hours ago