ಸಾಲೋಮನ್
ಮೈಸೂರು: ಕಾಲು ಕಳೆದುಕೊಂಡು ಹಾಸಿಗೆ ಹಿಡಿದಿರುವ ತಾಯಿಯ ಸೇವೆ ಮಾಡುತ್ತಲೇ ಕುಟುಂಬದ ಜವಾಬ್ದಾರಿ ಹೊತ್ತುಕೊಂಡಿರುವ ವಿದ್ಯಾರ್ಥಿನಿ ಗುಲ್ ಅಫ್ತಾ ಖಾನಂ ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ರಾಜೀವ್ನಗರ ಬಡಾವಣೆಯ ಮೊದಲ ಹಂತದ ನಿವಾಸಿ ಫರಾನ್ ಹಾಗೂ ಸಬೀನಾ ಖಾನಂ ದಂಪತಿಯ ಏಕೈಕ ಪುತ್ರಿಯಾಗಿರುವ ಗುಲ್ ಅಫ್ತಾ ಖಾನಂ ಎಸ್ಎಸ್ಎಲ್ಸಿಯಲ್ಲಿಯೂ ಉತ್ತಮ ಅಂಕಗಳನ್ನು ಪಡೆದುಕೊಂಡಿದ್ದು, ಎಂಬಿಎ ಶಿಕ್ಷಣ ಪಡೆಯಬೇಕೆಂಬ ಅಭಿಲಾಷೆಯನ್ನು ಹೊಂದಿದ್ದಾರೆ. ಕಾಲು ಕಳೆದುಕೊಂಡಿ ರುವ ತಾಯಿಯ ಸೇವೆಯನ್ನು ಮಾಡುತ್ತಾ, ಎಲ್ಲಾ ಜವಾಬ್ದಾರಿಯನ್ನು ನಿರ್ವಹಿಸುತ್ತಲೇ ತನ್ನ ವಿದ್ಯಾಭ್ಯಾಸದ ಕಡೆಗೂ ಗಮನ ಕೊಟ್ಟಿದ್ದಾರೆ.
ಮನೆ ಕೆಲಸಗಳನ್ನು ಮುಗಿಸಿ ಬಿಡುವು ಸಿಕ್ಕಾಗ ಟಿವಿ, ಮೊಬೈಲ್ ಬಿಟ್ಟು ಓದಿನ ಕಡೆಗೆ ಗಮನಹರಿಸಿದ ಫಲವಾಗಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ‘ನನಗೆ ಬಿಸಿನೆಸ್ ಸ್ಟಡೀಸ್ನಲ್ಲಿ ಹೆಚ್ಚು ಆಸಕ್ತಿ ಇದೆ. ಈಗ ಬಿಬಿಎಗೆ ಸೇರುತ್ತೇನೆ. ನಂತರ ಎಂಬಿಎ ಓದಬೇಕೆಂಬ ಆಸೆ ಇಟ್ಟುಕೊಂಡಿದ್ದೇನೆ ಎನ್ನುತ್ತಾರೆ ಗುಲ್ ಅಫ್ತಾ ಖಾನಂ. ಇವರ ತಂದೆ ಫಾರಾನ್ ಖಾನ್ ಆಟೋ ಚಾಲಕರಾಗಿದ್ದಾರೆ. ಕುಟುಂಬದಲ್ಲಿ ಆರ್ಥಿಕ ಸಮಸ್ಯೆಗಳು ಇದ್ದಾಗ್ಯೂ ಮಗಳ ವಿದ್ಯಾಭ್ಯಾಸಕ್ಕೆ ಏನು ತೊಂದರೆಯಾಗದಂತೆ ಬೆನ್ನೆಲುಬಾಗಿ ನಿಂತಿದ್ದಾರೆ. ಗುಲ್ ಅಫ್ತಾ ಖಾನಂ ಬಿಸಿನೆಸ್ ಸ್ಟಡೀಸ್-೯೩, ಅಕೌಂಟೆನ್ಸಿ-೮೫, ಎಕನಾಮಿಕ್ಸ್-೮೫, ಹಿಸ್ಟ್ರಿ-೮೨ ಹಾಗೂ ಇಂಗ್ಲಿಷ್-೭೬ ಸೇರಿ ೫೦೯ ಅಂಕಗಳನ್ನು ಪಡೆದಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…