ಗದ್ದಿಗೆ ಸರ್ಕಲ್ನಿಂದ ವಡ್ಡರಗುಡಿಯವರೆಗಿನ ರಸ್ತೆ ದುರಸ್ತಿ ಕಾಮಗಾರಿ ಶುರು
ಎಚ್.ಡಿ.ಕೋಟೆ: ಪ್ರಯಾಣಿಕರು ಮತ್ತು ಸಾರ್ವಜನಿಕರು ಸಂಚರಿಸಲು ಪ್ರತಿನಿತ್ಯ ನರಕಯಾತನೆ ಪಡುತ್ತಿದ್ದ ರಸ್ತೆಯನ್ನು ಸ್ವಲ್ಪಮಟ್ಟಗಾದರೂ ಸರಿಪಡಿಸಲು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮುಂದಾಗಿದ್ದಾರೆ.
ಪಟ್ಟಣದ ಗದ್ದಿಗೆ ಸರ್ಕಲ್ನಿಂದ ವಡ್ಡರಗುಡಿಯ ಸವ್ವೆ ರಸ್ತೆವರೆಗೆ ಕಳೆದ 2 ವರ್ಷಗಳಿಂದ ರಸ್ತೆ ತುಂಬಾ ಗುಂಡಿಗಳಾಗಿ ವಾಹನ ಚಾಲಕರು, ಸಾರ್ವಜನಿಕರು ಸಂಚರಿಸಲು ತೊಂದರೆಯಾಗಿತ್ತು. ಅಲ್ಲದೆ ಈ ರಸ್ತೆ ಗದ್ದಿಗೆ ಮುಖ್ಯ ರಸ್ತೆ ಆಗಿರುವುದರಿಂದ ಮೈಸೂರು- ಗದ್ದಿಗೆ ಹಾಗೂ ಸುತ್ತಮುತ್ತಲ ಹಳ್ಳಿಗಳ ವ್ಯಾಪ್ತಿಯಲ್ಲಿ ನಿತ್ಯ ಸಾವಿರಾರು ಜನ ಸಂಚರಿಸುತ್ತಿದ್ದು, ಅನೇಕರು ಈ ರಸ್ತೆ ಅವ್ಯವಸ್ಥೆಯಿಂದ ಪರ್ಯಾಯ ರಸ್ತೆಗಳ ಮೂಲಕ ಸಂಚರಿಸುತ್ತಿದ್ದರು. ಪುರಸಭೆ ವ್ಯಾಪ್ತಿಯಲ್ಲಿ ರಸ್ತೆ ಇದ್ದರೂ ದುಸ್ಥಿತಿಯಿಂದ ಕೂಡಿರುವ ಈ ರಸ್ತೆಯಿಂದ ಬೇಸತ್ತ ಜನರು ಪುರಸಭಾ ಸದಸ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದರು.
ಈ ವಿಚಾರ ತಿಳಿದ ಶಾಸಕ ಅನಿಲ್ ಚಿಕ್ಕಮಾದು ಅವರು ಲೋಕೋಪಯೋಗಿ ಇಲಾಖೆ ಅಧಿಕಾರಿ ಬೋರಯ್ಯ ಮತ್ತು ಗುತ್ತಿಗೆದಾರ ಕೊಡಸಿಗೆ ರಾಜೇಗೌಡರವರಿಗೆ ಈ ರಸ್ತೆಯನ್ನು ತಾತ್ಕಾಲಿಕವಾಗಿ ಅಭಿವೃದ್ಧಿಪಡಿಸಲು ಸೂಚಿಸಿದ್ದರು.
ಈ ಹಿನ್ನೆಲೆಯಲ್ಲಿ ಕಳೆದ 2-3 ದಿನಗಳಿಂದ ಗುತ್ತಿಗೆದಾರ ಕೊಡಸಿಗೆ ರಾಜೇಗೌಡ ರಸ್ತೆಯನ್ನು ಅಭಿವೃದ್ಧಿಪಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಇದರಿಂದಾಗಿ ಸಾರ್ವಜನಿಕರು, ಪ್ರಯಾಣಿಕರು ರಸ್ತೆಯಲ್ಲಿ ಸಂಚರಿಸಲು ಅನುವಾಗಲಿದೆ.
ವಡ್ಡರಗುಡಿ ರಸ್ತೆ ತೀವ್ರವಾಗಿ ಹದಗೆಟ್ಟಿದ್ದು ಇದನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು 3 ಕೋಟಿ ರೂ. ಅನುದಾನ ಬಿಡುಗಡೆಯಾಗಲಿದೆ. ಟೆಂಡರ್ ಕಕರೆದು ಕಾಮಗಾರಿಯನ್ನು ನಡೆಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು,
ಪ್ರಯಾಣಿಕರಿಗೆ ತೊಂದರೆ ಆಗಬಾರದೆಂಬ ಉದ್ದೇಶಕ್ಕಾಗಿ ತಾತ್ಕಾಲಿಕವಾಗಿ ರಸ್ತೆಯನ್ನು ಇಲಾಖೆ ಮತ್ತು ಗುತ್ತಿಗೆದಾರರ ಮೂಲಕ ಅಭಿವೃದ್ಧಿಪಡಿಸಲಾಗುತ್ತಿದೆ.
-ಅನಿಲ್ ಚಿಕ್ಕಮಾದು, ಶಾಸಕರು
ಗದ್ದಿಗೆ ಸರ್ಕಲ್ ನಿಂದ ವಡ್ಡರಗುಡಿವರೆಗಿನ 2 ಕಿ.ಮೀ, ಮುಖ್ಯ ರಸ್ತೆ ಬರೀ ಗುಂಡಿಗಳಿಂದ ಕೂಡಿ ಸಮಸ್ಯೆ ಉಂಟಾಗಿತ್ತು. ಶಾಸಕರು ರಸ್ತೆಯನ್ನು ತಾತ್ಕಾಲಿಕವಾಗಿ ಅಭಿವೃದ್ಧಿಪಡಿಸಲು ಸೂಚಿಸಿರುವುದರಿಂದ ಅಭಿವೃದ್ಧಿಪಡಿಸಲಾಗುತ್ತದೆ.
-ಕೊಡಸಿಗೆ ರಾಜೇಗೌಡ, ಪ್ರಥಮ ದರ್ಜೆ ಗುತ್ತಿಗೆದಾರ.
ಮೈಸೂರು : ನಗರದಲ್ಲಿ ಕೋಟ್ಯಾಂತರ ರೂ. ಮೊತ್ತದ ಡ್ರಗ್ಸ್ ತಯಾರಿಕೆ ನಡೆಯುತ್ತಿದ್ದರೂ ಪತ್ತೆ ಹಚ್ಚುವಲ್ಲಿ ನಗರದ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ…
ಮುಂಬೈ : ಮಹಾರಾಷ್ಟ್ರದ ರಾಜಕೀಯದಲ್ಲಿ ಒಂದು ಐತಿಹಾಸಿಕ ಕ್ಷಣ. ಎನ್ಸಿಪಿ ನಾಯಕಿ ದಿ.ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್…
ಹನೂರು : ದಂಟಳ್ಳಿ ಏತ ನೀರಾವರಿ ಯೋಜನೆಗೆ ಡಿ.ಪಿ.ಆರ್ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಯುವ…
ಮೈಸೂರು : ಮೈಸೂರಿನಲ್ಲಿ ವ್ಯಾಪಕ ಕಾರ್ಯಾಚರಣೆ ನಡೆಸಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಸುಮಾರು 10 ಕೋಟಿ ರೂ. ಮೌಲ್ಯದ…
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಮರಣೋತ್ತರ…
ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ವಿಧಾನಪರಿಷತ್ತಿನ ಅಧಿವೇಶನದ…