Andolana originals

ಹದಗೆಟ್ಟ ರಸ್ತೆಗೆ ತಾತ್ಕಾಲಿಕ ದುರಸ್ತಿ ಭಾಗ್ಯ

ಗದ್ದಿಗೆ ಸರ್ಕಲ್‌ನಿಂದ ವಡ್ಡರಗುಡಿಯವರೆಗಿನ ರಸ್ತೆ ದುರಸ್ತಿ ಕಾಮಗಾರಿ ಶುರು

  • ಮಂಜು ಕೋಟೆ

ಎಚ್‌.ಡಿ.ಕೋಟೆ:  ಪ್ರಯಾಣಿಕರು ಮತ್ತು ಸಾರ್ವಜನಿಕರು ಸಂಚರಿಸಲು ಪ್ರತಿನಿತ್ಯ ನರಕಯಾತನೆ ಪಡುತ್ತಿದ್ದ ರಸ್ತೆಯನ್ನು ಸ್ವಲ್ಪಮಟ್ಟಗಾದರೂ ಸರಿಪಡಿಸಲು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮುಂದಾಗಿದ್ದಾರೆ.

ಪಟ್ಟಣದ ಗದ್ದಿಗೆ ಸರ್ಕಲ್‌ನಿಂದ ವಡ್ಡರಗುಡಿಯ ಸವ್ವೆ ರಸ್ತೆವರೆಗೆ ಕಳೆದ 2 ವರ್ಷಗಳಿಂದ ರಸ್ತೆ ತುಂಬಾ ಗುಂಡಿಗಳಾಗಿ ವಾಹನ ಚಾಲಕರು, ಸಾರ್ವಜನಿಕರು ಸಂಚರಿಸಲು ತೊಂದರೆಯಾಗಿತ್ತು. ಅಲ್ಲದೆ ಈ ರಸ್ತೆ ಗದ್ದಿಗೆ ಮುಖ್ಯ ರಸ್ತೆ ಆಗಿರುವುದರಿಂದ ಮೈಸೂರು- ಗದ್ದಿಗೆ ಹಾಗೂ ಸುತ್ತಮುತ್ತಲ ಹಳ್ಳಿಗಳ ವ್ಯಾಪ್ತಿಯಲ್ಲಿ ನಿತ್ಯ ಸಾವಿರಾರು ಜನ ಸಂಚರಿಸುತ್ತಿದ್ದು, ಅನೇಕರು ಈ ರಸ್ತೆ ಅವ್ಯವಸ್ಥೆಯಿಂದ ಪರ್ಯಾಯ ರಸ್ತೆಗಳ ಮೂಲಕ ಸಂಚರಿಸುತ್ತಿದ್ದರು. ಪುರಸಭೆ ವ್ಯಾಪ್ತಿಯಲ್ಲಿ ರಸ್ತೆ ಇದ್ದರೂ ದುಸ್ಥಿತಿಯಿಂದ ಕೂಡಿರುವ ಈ ರಸ್ತೆಯಿಂದ ಬೇಸತ್ತ ಜನರು ಪುರಸಭಾ ಸದಸ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದರು.

ಈ ವಿಚಾರ ತಿಳಿದ ಶಾಸಕ ಅನಿಲ್ ಚಿಕ್ಕಮಾದು ಅವರು ಲೋಕೋಪಯೋಗಿ ಇಲಾಖೆ ಅಧಿಕಾರಿ ಬೋರಯ್ಯ ಮತ್ತು ಗುತ್ತಿಗೆದಾರ ಕೊಡಸಿಗೆ ರಾಜೇಗೌಡರವರಿಗೆ ಈ ರಸ್ತೆಯನ್ನು ತಾತ್ಕಾಲಿಕವಾಗಿ ಅಭಿವೃದ್ಧಿಪಡಿಸಲು ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಕಳೆದ 2-3 ದಿನಗಳಿಂದ ಗುತ್ತಿಗೆದಾರ ಕೊಡಸಿಗೆ ರಾಜೇಗೌಡ ರಸ್ತೆಯನ್ನು ಅಭಿವೃದ್ಧಿಪಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಇದರಿಂದಾಗಿ ಸಾರ್ವಜನಿಕರು, ಪ್ರಯಾಣಿಕರು ರಸ್ತೆಯಲ್ಲಿ ಸಂಚರಿಸಲು ಅನುವಾಗಲಿದೆ.

 

ವಡ್ಡರಗುಡಿ ರಸ್ತೆ ತೀವ್ರವಾಗಿ ಹದಗೆಟ್ಟಿದ್ದು ಇದನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು 3 ಕೋಟಿ ರೂ. ಅನುದಾನ ಬಿಡುಗಡೆಯಾಗಲಿದೆ. ಟೆಂಡರ್ ಕಕರೆದು ಕಾಮಗಾರಿಯನ್ನು ನಡೆಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು,
ಪ್ರಯಾಣಿಕರಿಗೆ ತೊಂದರೆ ಆಗಬಾರದೆಂಬ ಉದ್ದೇಶಕ್ಕಾಗಿ ತಾತ್ಕಾಲಿಕವಾಗಿ ರಸ್ತೆಯನ್ನು ಇಲಾಖೆ ಮತ್ತು ಗುತ್ತಿಗೆದಾರರ ಮೂಲಕ ಅಭಿವೃದ್ಧಿಪಡಿಸಲಾಗುತ್ತಿದೆ.
-ಅನಿಲ್ ಚಿಕ್ಕಮಾದು, ಶಾಸಕರು

ಗದ್ದಿಗೆ ಸರ್ಕಲ್‌ ನಿಂದ ವಡ್ಡರಗುಡಿವರೆಗಿನ 2 ಕಿ.ಮೀ, ಮುಖ್ಯ ರಸ್ತೆ ಬರೀ ಗುಂಡಿಗಳಿಂದ ಕೂಡಿ ಸಮಸ್ಯೆ ಉಂಟಾಗಿತ್ತು. ಶಾಸಕರು ರಸ್ತೆಯನ್ನು ತಾತ್ಕಾಲಿಕವಾಗಿ ಅಭಿವೃದ್ಧಿಪಡಿಸಲು ಸೂಚಿಸಿರುವುದರಿಂದ ಅಭಿವೃದ್ಧಿಪಡಿಸಲಾಗುತ್ತದೆ.
-ಕೊಡಸಿಗೆ ರಾಜೇಗೌಡ, ಪ್ರಥಮ ದರ್ಜೆ ಗುತ್ತಿಗೆದಾರ.

 

ಆಂದೋಲನ ಡೆಸ್ಕ್

Recent Posts

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

2 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

5 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

5 hours ago

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

8 hours ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

9 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

12 hours ago