ಗದ್ದಿಗೆ ಸರ್ಕಲ್ನಿಂದ ವಡ್ಡರಗುಡಿಯವರೆಗಿನ ರಸ್ತೆ ದುರಸ್ತಿ ಕಾಮಗಾರಿ ಶುರು
ಎಚ್.ಡಿ.ಕೋಟೆ: ಪ್ರಯಾಣಿಕರು ಮತ್ತು ಸಾರ್ವಜನಿಕರು ಸಂಚರಿಸಲು ಪ್ರತಿನಿತ್ಯ ನರಕಯಾತನೆ ಪಡುತ್ತಿದ್ದ ರಸ್ತೆಯನ್ನು ಸ್ವಲ್ಪಮಟ್ಟಗಾದರೂ ಸರಿಪಡಿಸಲು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮುಂದಾಗಿದ್ದಾರೆ.
ಪಟ್ಟಣದ ಗದ್ದಿಗೆ ಸರ್ಕಲ್ನಿಂದ ವಡ್ಡರಗುಡಿಯ ಸವ್ವೆ ರಸ್ತೆವರೆಗೆ ಕಳೆದ 2 ವರ್ಷಗಳಿಂದ ರಸ್ತೆ ತುಂಬಾ ಗುಂಡಿಗಳಾಗಿ ವಾಹನ ಚಾಲಕರು, ಸಾರ್ವಜನಿಕರು ಸಂಚರಿಸಲು ತೊಂದರೆಯಾಗಿತ್ತು. ಅಲ್ಲದೆ ಈ ರಸ್ತೆ ಗದ್ದಿಗೆ ಮುಖ್ಯ ರಸ್ತೆ ಆಗಿರುವುದರಿಂದ ಮೈಸೂರು- ಗದ್ದಿಗೆ ಹಾಗೂ ಸುತ್ತಮುತ್ತಲ ಹಳ್ಳಿಗಳ ವ್ಯಾಪ್ತಿಯಲ್ಲಿ ನಿತ್ಯ ಸಾವಿರಾರು ಜನ ಸಂಚರಿಸುತ್ತಿದ್ದು, ಅನೇಕರು ಈ ರಸ್ತೆ ಅವ್ಯವಸ್ಥೆಯಿಂದ ಪರ್ಯಾಯ ರಸ್ತೆಗಳ ಮೂಲಕ ಸಂಚರಿಸುತ್ತಿದ್ದರು. ಪುರಸಭೆ ವ್ಯಾಪ್ತಿಯಲ್ಲಿ ರಸ್ತೆ ಇದ್ದರೂ ದುಸ್ಥಿತಿಯಿಂದ ಕೂಡಿರುವ ಈ ರಸ್ತೆಯಿಂದ ಬೇಸತ್ತ ಜನರು ಪುರಸಭಾ ಸದಸ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದರು.
ಈ ವಿಚಾರ ತಿಳಿದ ಶಾಸಕ ಅನಿಲ್ ಚಿಕ್ಕಮಾದು ಅವರು ಲೋಕೋಪಯೋಗಿ ಇಲಾಖೆ ಅಧಿಕಾರಿ ಬೋರಯ್ಯ ಮತ್ತು ಗುತ್ತಿಗೆದಾರ ಕೊಡಸಿಗೆ ರಾಜೇಗೌಡರವರಿಗೆ ಈ ರಸ್ತೆಯನ್ನು ತಾತ್ಕಾಲಿಕವಾಗಿ ಅಭಿವೃದ್ಧಿಪಡಿಸಲು ಸೂಚಿಸಿದ್ದರು.
ಈ ಹಿನ್ನೆಲೆಯಲ್ಲಿ ಕಳೆದ 2-3 ದಿನಗಳಿಂದ ಗುತ್ತಿಗೆದಾರ ಕೊಡಸಿಗೆ ರಾಜೇಗೌಡ ರಸ್ತೆಯನ್ನು ಅಭಿವೃದ್ಧಿಪಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಇದರಿಂದಾಗಿ ಸಾರ್ವಜನಿಕರು, ಪ್ರಯಾಣಿಕರು ರಸ್ತೆಯಲ್ಲಿ ಸಂಚರಿಸಲು ಅನುವಾಗಲಿದೆ.
ವಡ್ಡರಗುಡಿ ರಸ್ತೆ ತೀವ್ರವಾಗಿ ಹದಗೆಟ್ಟಿದ್ದು ಇದನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು 3 ಕೋಟಿ ರೂ. ಅನುದಾನ ಬಿಡುಗಡೆಯಾಗಲಿದೆ. ಟೆಂಡರ್ ಕಕರೆದು ಕಾಮಗಾರಿಯನ್ನು ನಡೆಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು,
ಪ್ರಯಾಣಿಕರಿಗೆ ತೊಂದರೆ ಆಗಬಾರದೆಂಬ ಉದ್ದೇಶಕ್ಕಾಗಿ ತಾತ್ಕಾಲಿಕವಾಗಿ ರಸ್ತೆಯನ್ನು ಇಲಾಖೆ ಮತ್ತು ಗುತ್ತಿಗೆದಾರರ ಮೂಲಕ ಅಭಿವೃದ್ಧಿಪಡಿಸಲಾಗುತ್ತಿದೆ.
-ಅನಿಲ್ ಚಿಕ್ಕಮಾದು, ಶಾಸಕರು
ಗದ್ದಿಗೆ ಸರ್ಕಲ್ ನಿಂದ ವಡ್ಡರಗುಡಿವರೆಗಿನ 2 ಕಿ.ಮೀ, ಮುಖ್ಯ ರಸ್ತೆ ಬರೀ ಗುಂಡಿಗಳಿಂದ ಕೂಡಿ ಸಮಸ್ಯೆ ಉಂಟಾಗಿತ್ತು. ಶಾಸಕರು ರಸ್ತೆಯನ್ನು ತಾತ್ಕಾಲಿಕವಾಗಿ ಅಭಿವೃದ್ಧಿಪಡಿಸಲು ಸೂಚಿಸಿರುವುದರಿಂದ ಅಭಿವೃದ್ಧಿಪಡಿಸಲಾಗುತ್ತದೆ.
-ಕೊಡಸಿಗೆ ರಾಜೇಗೌಡ, ಪ್ರಥಮ ದರ್ಜೆ ಗುತ್ತಿಗೆದಾರ.
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…