Andolana originals

ಕೋಟೆ ಅಭಿವೃದ್ಧಿಗೆ ಸಾವಿರ ಕೋಟಿ ರೂ. ಕೊಡುಗೆ ನೀಡಿದ್ದ ಎಸ್‌ಎಂಕೆ

ಮಂಜು ಕೋಟೆ
ಎಚ್. ಡಿ. ಕೋಟೆ: ಗಿರಿಜನರನ್ನೇ ಹೆಚ್ಚಾಗಿ ಹೊಂದಿರುವ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯದ ಮುಖ್ಯಮಂತ್ರಿ ಆಗಿದ್ದ ಎಸ್. ಎಂ. ಕೃಷ್ಣ ಅಪಾರ ಕೊಡುಗೆ ನೀಡಿದ್ದು, ಇಂದಿಗೂ ಕ್ಷೇತ್ರದ ಜನಸಾಮಾನ್ಯರು ಅವರ ಕೆಲಸ ಕಾರ್ಯಗಳನ್ನು ಸ್ಮರಿಸುತ್ತಿದ್ದಾರೆ.

೧೯೯೯ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದಿಂದ ಕೋಟೆ ಎಂ. ಶಿವಣ್ಣ ಅವರು ಕಾಂಗ್ರೆಸ್‌ನಿಂದ ಶಾಸಕರಾಗಿ ಗೆಲುವು ಸಾಽಸಿದ್ದರು. ರಾಜ್ಯದಲ್ಲೂ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಽಕಾರಕ್ಕೆ ಬಂದಿತ್ತು. ಆಗ ಅಂದಿನ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ಕ್ಷೇತ್ರದ ಶಾಸಕರಾಗಿದ್ದ ಎಂ. ಶಿವಣ್ಣ ಅವರಿಗೆ ಸಚಿವ ಸ್ಥಾನ ನೀಡಿದ್ದರು. ಸಿಎಂ ಪರಮಾಪ್ತರಾಗಿ ೫ ಖಾತೆಗಳನ್ನು ಶಿವಣ್ಣ ನಿರ್ವಹಿಸಿದ್ದರು.

೨೦೦೦ನೇ ಸಾಲಿನಲ್ಲಿ ರಾಜ್ಯದಲ್ಲೇ ಪ್ರಪ್ರಥಮವಾಗಿ ಗ್ರಾಮೀಣ ಪ್ರದೇಶದ ಕೋಟೆ ಭಾಗದಲ್ಲಿ ಮಿನಿ ಸಚಿವ ಸಂಪುಟ ಸಭೆಯನ್ನು ಎಸ್. ಎಂ.ಕೃಷ್ಣ ಅವರು ನಡೆಸಿ ಆದಿವಾಸಿ ಜನರ ಅಭಿವೃದ್ಧಿಗೆ ಸ್ಪಂದಿಸಿದ್ದರು.

ಮೈಸೂರು-ಮಾನಂದವಾಡಿ ಹೆದ್ದಾರಿ ನಿರ್ಮಾಣ, ಕೋಟೆ ಪಟ್ಟಣಕ್ಕೆ ಕಬಿನಿ ಶುದ್ಧ ಕುಡಿಯುವ ನೀರು ಯೋಜನೆ, ಅನೇಕ ಕಡೆ ಉಪ ವಿದ್ಯುತ್ ಘಟಕಗಳು, ಮಿನಿ ವಿಧಾನಸೌಧ ನಿರ್ಮಾಣ, ಕೆಎಸ್‌ಆರ್‌ಟಿಸಿ ಡಿಪೋ ಘಟಕ ಪ್ರಾರಂಭ, ವಿದ್ಯಾರ್ಥಿಗಳಿಗೆ ಐಟಿಐ ಕಾಲೇಜು, ಆಶ್ರಮ ಶಾಲೆಗಳು, ಗಿರಿಜನರಿಗೆ ನ್ಯಾಯ ಬೆಲೆ ಅಂಗಡಿ, ರೈತರಿಗಾಗಿ ತಾರಕ ಏತ ನೀರಾವರಿ ಯೋಜನೆ, ಪಿಯು ಮತ್ತು ಪದವಿ ಕಾಲೇಜುಗಳು, ತೋಟಗಾರಿಕೆ ಇಲಾಖೆಯ ೩೦ ಎಕರೆ ಜಾಗ ಪುರಸಭೆಗೆ ಸೇರ್ಪಡೆ ಸೇರಿದಂತೆ ಅನೇಕ ಕೆಲಸ ಕಾರ್ಯಗಳನ್ನು ನಡೆಸಿ ೧ ಸಾವಿರ ಕೋಟಿ ರೂ. ಗಳಷ್ಟು ಅನುದಾನವನ್ನು ಕ್ಷೇತ್ರದ ಅಭಿವೃದ್ಧಿಗೆ ಕೃಷ್ಣ ಅವರ ಅವಧಿಯಲ್ಲಿ ನೀಡಲಾಗಿತ್ತು.

ಮುಖ್ಯಮಂತ್ರಿಯಾಗಿದ್ದ ಎಸ್. ಎಂ. ಕೃಷ್ಣ ಅವರು ೪-೫ ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿ ಅಭಿವೃದ್ಧಿ ಕೆಲಸಗಳ ಜೊತೆಗೆ ಅಂದು ಉದ್ಭವಿಸಿದ ಕಾವೇರಿ ನೀರಿನ ವಿವಾದದಲ್ಲಿ ಕಬಿನಿ ಗುರುಸ್ವಾಮಿ ಕಬಿನಿಗೆ ಹಾರಿ ಸಾವನಪ್ಪಿದ ಸಂದರ್ಭದಲ್ಲಿ ಉಂಟಾದ ಗಲಾಟೆ ವೇಳೆ ಪ್ರತಿಭಟನಾಕಾರರಿಗೆ ಸ್ಪಂದಿಸಿ ಇಲ್ಲೇ ವಾಸ್ತವ್ಯ ಹೂಡಿದ್ದರು. ಹೀಗಾಗಿ ಅವರು ನೀಡಿದ ಕೊಡುಗೆ, ಅಭಿವೃದ್ಧಿ ಕೆಲಸಗಳು ಕ್ಷೇತ್ರದ ಜನರ ಮನಸ್ಸಿನಲ್ಲಿ ಇಂದಿಗೂ ಹಸಿರಾಗಿದ್ದು, ಅವರನ್ನು ನೆನಪಿಸಿಕೊಳ್ಳುತ್ತಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

11 mins ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

1 hour ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

1 hour ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

2 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

3 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

3 hours ago