ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು
ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ ಮೂಲಸೌಲಭ್ಯ ಇಲ್ಲದೆ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಆದೇಶದ ಮೇರೆಗೆ ತ್ರಿಸದಸ್ಯ ಸಮಿತಿಯ ಸದಸ್ಯರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದಲ್ಲಿ ಇತ್ತೀಚೆಗೆ ಸಾರಿಗೆ ವ್ಯವಸ್ಥೆ ಇಲ್ಲದೆ ಪ್ರತಿ ದಿನ ೧೪ ಕಿ.ಮೀ. ನಡೆದುಕೊಂಡು ಹೋಗುತ್ತಿರುವ ಬಗ್ಗೆ ವಿದ್ಯಾರ್ಥಿಗಳು ಮುಖ್ಯಮಂತ್ರಿಗಳಿಗೆ ಮನವಿಪತ್ರ ಬರೆದಿದ್ದ ಸುದ್ದಿ ಎಲ್ಲೆಡೆ ವೈರಲ್ ಆಗಿತ್ತು. ಪರಿಣಾಮ ಸರ್ಕಾರದ ವತಿಯಿಂದ ವರದಿ ಕೇಳಿದ್ದು, ತ್ರಿಸದಸ್ಯ ಸಮಿತಿ ಗ್ರಾಮಕ್ಕೆ ಭೇಟಿ ನೀಡಿ ಪರಿ ಶೀಲನೆ ನಡೆಸಿ ಗ್ರಾಮಸ್ಥರಿಂದ ಅಗತ್ಯ ಮಾಹಿತಿ ಪಡೆದಿದೆ.
ಈ ಸಂದರ್ಭದಲ್ಲಿ ತ್ರಿಸದಸ್ಯ ಸಮಿತಿಯ ಅಧಿಕಾರಿಗಳು ಅಲ್ಲಿನ ಮಕ್ಕಳನ್ನು ಭೇಟಿ ಮಾಡಿ ಮಕ್ಕಳ ಜೊತೆಗೆ ಚರ್ಚೆ ನಡೆಸಿದಾಗ ಮಕ್ಕಳು ಮಾತನಾಡಿ, ಸಾಕಷ್ಟು ವರ್ಷಗಳಿಂದ ರಸ್ತೆ ವ್ಯವಸ್ಥೆ ಸಮರ್ಪಕವಾಗಿಲ್ಲದೆ ವಾಹನಗಳು ಸಂಚರಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಶಾಲೆ ಬಿಡುವಂತಹ ಆತಂಕ ಕೂಡ ಎದುರಾಗಿತ್ತು. ಇದೀಗ ಅರಣ್ಯ ಇಲಾಖೆ ವತಿಯಿಂದ ಶಾಲಾ ಸಮಯಕ್ಕೆ ಸರಿಯಾಗಿ ವಾಹನದ ವ್ಯವಸ್ಥೆ ಮಾಡಿರುವುದು ನಮಗೆ ಓದಲು ಇನ್ನಷ್ಟು ಪ್ರೇರಣೆಯನ್ನು ಕೊಟ್ಟಿದೆ ಎಂದು ತಿಳಿಸಿದ್ದಾರೆ.
ಕಾಡು ಪ್ರಾಣಿಗಳ ಹಾವಳಿ: ನಮ್ಮ ಗ್ರಾಮದಲ್ಲಿ ಪ್ರತಿನಿತ್ಯ ಒಂದಲ್ಲಾ ಒಂದು ವನ್ಯ ಪ್ರಾಣಿಯಿಂದಾಗಿ ಬೆಳೆ ನಾಶವಾಗುತ್ತಿದೆ. ಇಂತಹ ಸಂದರ್ಭದಲ್ಲಿ ನಾವು ಸಂಚರಿಸುವುದು ಸಾಹಸದ ಕೆಲಸವಾಗಿದೆ. ಕಾಡು ಪ್ರಾಣಿಗಳ ಹಾವಳಿ ಮಿತಿಮೀರಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹನೂರು ಜಿ.ವಿ.ಗೌಡ ಕಾಲೇಜಿನ ಸಪ್ರಾಂಶುಪಾಲರಾದ ರಾಜೇಶ್, ರಾಮಾಪುರ ಕಾಲೇಜಿನ ಪ್ರಾಚಾರ್ಯ ಗಿರಿಯಣ್ಣ, ಬಂಡಳ್ಳಿ ಕಾಲೇಜಿನ ಪ್ರಾಚಾರ್ಯ ನಾಗಸುಂದರ್ ಮೂರ್ತಿ, ಗ್ರಾಮಸ್ಥರಾದ ಮುನಿರಾಜು, ವಿದ್ಯಾರ್ಥಿಗಳು ಹಾಗೂ ಅತಿಥಿ ಉಪನ್ಯಾಸಕಿ ನಂದಿನಿ, ಇನ್ನಿತರರು ಹಾಜರಿದ್ದರು.
ವಾಹನ ವ್ಯವಸ್ಥೆ ಇಲ್ಲ: ಗ್ರಾಮದಲ್ಲಿ ರಾತ್ರಿ ವೇಳೆ ಯಾರಾದರೂ ಅನಾರೋಗ್ಯಕ್ಕೀಡಾದರೆ ಅಥವಾ ಗರ್ಭಿಣಿಯರನ್ನು ಕರೆದೊಯ್ಯಲು ಯಾವುದೇ ವಾಹನದ ವ್ಯವಸ್ಥೆ ಇಲ್ಲದೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆರೋಗ್ಯಕ್ಕೆ ಸಂಬಂಧಪಟ್ಟಂತೆ ಯಾವುದೇ ಪ್ರಥಮ ಚಿಕಿತ್ಸೆ ಪಡೆದುಕೊಳ್ಳಲು ಕೂಡ ಇಲ್ಲಿ ಯಾವುದೇ ವ್ಯವಸ್ಥೆ ಇಲ್ಲದಿರುವುದರಿಂದ ಸ್ಥಳೀಯರು ಪರದಾಡಬೇಕಾಗಿದೆ ಎಂದು ಗ್ರಾಮಸ್ಥರು ಅಳಲನ್ನು ತೋಡಿಕೊಂಡಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…