Andolana originals

ಬರೋಬ್ಬರಿ ೩,೧೭೩ ಕಲಾವಿದರಿಂದ ಅರ್ಜಿ ಸಲ್ಲಿಕೆ!

ದಿನೇಶ್ ಕುಮಾರ್ ಎಚ್.ಎಸ್.

ಕರ್ನಾಟಕ ಹಾಗೂ ಹೊರ ರಾಜ್ಯಗಳ ಕಲಾವಿದರಿಂದಲೂ ಕಾರ್ಯಕ್ರಮ 

ಮೈಸೂರು: ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದೆ. ಈ ಬಾರಿಯ ದಸರಾದಲ್ಲಿ ಕಲಾಸಕ್ತರ ಮುಂದೆ ತಮ್ಮ ಕಲೆಯನ್ನುಪ್ರದರ್ಶಿಸಲು ಕಲಾವಿದರು ಸಿದ್ಧವಾಗಿದ್ದು, ಅವಕಾಶ ಕೋರಿ ಬರೋಬ್ಬರಿ ೩,೧೭೩ ಮಂದಿ ಕಲಾವಿದರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಅರ್ಜಿ ಸಲ್ಲಿಸಿದ್ದಾರೆ.

ನಾಡಹಬ್ಬ ದಸರೆಯ ಒಂಬತ್ತು ದಿನಗಳಲ್ಲಿ ದೇಶದ ವಿವಿಧೆ ಡೆಗಳಿಂದಆಗಮಿಸುವ ಕಲಾ ವಿದರು, ಕಲಾ ರಸಿಕರಿಗೆ ತಮ್ಮಲ್ಲಿರುವ ಕಲೆಯನ್ನು ಉಣಬಡಿಸುತ್ತಾರೆ. ಈ ಬಾರಿ ಸೆ.೨೨ರಂದು ದಸರಾ ಉದ್ಘಾಟನೆಯಾಗಲಿದ್ದು, ಸೆ.೨೯ರವರೆಗೆ ಅರಮನೆ ವೇದಿಕೆ ಸೇರಿದಂತೆ ನಗರದ ವಿವಿಧ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ದಸರಾ ವೇಳೆ ಅರಮನೆಯ ವೇದಿಕೆಯಲ್ಲಿ ೮ ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಉಳಿದಂತೆ ನಗರದ ಒಂಬತ್ತು ವಿವಿಧ ಸ್ಥಳಗಳಲ್ಲಿ ಸಾಂಸ್ಕೃತಿಕ ಕಾರ್ಯ ಕ್ರಮಗಳು ನಡೆಯಲಿವೆ.

ಇದನ್ನೂ ಓದಿ: ಮೈಸೂರು ದಸರಾ | ಸಮಾಜಮುಖಿ ಕೆಲಸ ಮಾಡುತ್ತಿರುವ ಸಿನಿಮಾ : ಸಚಿವ ಮಹದೇವಪ್ಪ

ಈ ಹಿನ್ನೆಲೆಯಲ್ಲಿ ದಸರಾ ಸಾಂಸ್ಕೃತಿಕ ಉಪ ಸಮಿತಿಯು ಒಟ್ಟು ೪೮೮ ಕಾರ್ಯಕ್ರಮಗಳನ್ನು ವಿವಿಧ ವೇದಿಕೆಗಳಲ್ಲಿ ಆಯೋ ಜಿಸಲು ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಕಲಾವಿದರಿಂದ ಅರ್ಜಿಯನ್ನೂ ಆಹ್ವಾನಿಸಿತ್ತು. ಹೀಗಾಗಿ ೩,೧೭೩ ಮಂದಿ ಅವಕಾಶಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ನಗರದ ಜಗನ್ಮೋಹನ ಅರಮನೆ, ಕಲಾಮಂದಿರ, ಕಿರುರಂಗ ಮಂದಿರ, ನಾದಬ್ರಹ್ಮ, ಗಾನಭಾರತಿ, ಚಿಕ್ಕ ಗಡಿಯಾರ, ಪುರಭವನ, ನಂಜನಗೂಡಿನ ಅರಮನೆ ಮಾಳ ಹೀಗೆ ಮೈಸೂರು ಅರಮನೆ ಆವರಣ ಸೇರಿದಂತೆ ೧೦ ವೇದಿಕೆಗಳಲ್ಲಿ ಕಾರ್ಯಕ್ರಮ ಜರುಗಲಿದೆ.

ನಾಟಕ, ಭರತನಾಟ್ಯ, ಸಮೂಹ ಗಾಯನ, ನೃತ್ಯ ರೂಪಕ, ಸಂಗೀತ, ಭಾವಗೀತೆ, ಕೂಚುಪುಡಿ, ವಚನ ಗಾಯನ, ವಚನ ರೂಪಕ ಸೇರಿದಂತೆ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳು ಜನರನ್ನು ಸೆಳೆಯಲಿವೆ. ಹೊರ ರಾಜ್ಯದ ಕಲಾವಿದರು: ಇದೇ ವೇಳೆ ನಮ್ಮ ರಾಜ್ಯದ ಕಲಾವಿದರ ಜೊತೆಗೆ ಹೊರ ರಾಜ್ಯಗಳಿಂದಲೂ ಕಲಾವಿದರು ತಮ್ಮ ಪರಂಪರೆ ಹಾಗೂ ಸಂಸ್ಕೃತಿಯನ್ನು ಮೈಸೂರಿನಲ್ಲಿ ಅನಾವರಣಗೊಳಿಸಲಿದ್ದಾರೆ.

ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ, ಹೊಸದಿಲ್ಲಿ, ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳ ಕಲಾವಿದರು ಆಗಮಿಸಿ ಪ್ರದರ್ಶನ ನೀಡಲಿದ್ದಾರೆ. ನಾಗಪುರದಿಂದ ಆಗಮಿಸುವ ಕಲಾವಿದರು. ಸೆ.೨೨ರಂದು ಸಂಜೆ ಕಲಾಮಂದಿರದಲ್ಲಿ ‘ಸಾಮ್ರಾಟ್ ಅಶೋಕ’ ನಾಟಕ ಪ್ರಸ್ತುತಪಡಿಸಲಿದ್ದು, ಇದು ವಿಶೇಷ ಆಕರ್ಷಣೆಯಾಗಲಿದೆ.

” ನಾಡಹಬ್ಬ ದಸರಾ ವೇಳೆ ನಡೆಯುವ ಕಾರ್ಯಕ್ರಮಗಳ ಪಟ್ಟಿ ಈಗಾಗಲೇ ಅಂತಿಮ ಹಂತದಲ್ಲಿದ್ದು, ಸೋಮವಾರ ಜಿಲ್ಲಾಧಿಕಾರಿಯವರು ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ. ಜಾತಿ, ಧರ್ಮ, ಲಿಂಗಬೇಧವಿಲ್ಲದೆಅರ್ಹ ಕಲಾವಿದರಿಗೆ ದಸರಾದಲ್ಲಿ ವೇದಿಕೆ ಒದಗಿಸಲಾಗುತ್ತಿದೆ. ಹೊರ ರಾಜ್ಯಗಳ ಪರಂಪರೆ, ಸಂಸ್ಕೃತಿ ಕೂಡ ಅನಾವರಣಗೊಳ್ಳಲಿದೆ.”

-ಡಾ.ಎಂ.ಡಿ.ಸುದರ್ಶನ್, ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ

ಆಂದೋಲನ ಡೆಸ್ಕ್

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

9 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

9 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

10 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

10 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

10 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

10 hours ago