Andolana originals

ಬರೋಬ್ಬರಿ ೩,೧೭೩ ಕಲಾವಿದರಿಂದ ಅರ್ಜಿ ಸಲ್ಲಿಕೆ!

ದಿನೇಶ್ ಕುಮಾರ್ ಎಚ್.ಎಸ್.

ಕರ್ನಾಟಕ ಹಾಗೂ ಹೊರ ರಾಜ್ಯಗಳ ಕಲಾವಿದರಿಂದಲೂ ಕಾರ್ಯಕ್ರಮ 

ಮೈಸೂರು: ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದೆ. ಈ ಬಾರಿಯ ದಸರಾದಲ್ಲಿ ಕಲಾಸಕ್ತರ ಮುಂದೆ ತಮ್ಮ ಕಲೆಯನ್ನುಪ್ರದರ್ಶಿಸಲು ಕಲಾವಿದರು ಸಿದ್ಧವಾಗಿದ್ದು, ಅವಕಾಶ ಕೋರಿ ಬರೋಬ್ಬರಿ ೩,೧೭೩ ಮಂದಿ ಕಲಾವಿದರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಅರ್ಜಿ ಸಲ್ಲಿಸಿದ್ದಾರೆ.

ನಾಡಹಬ್ಬ ದಸರೆಯ ಒಂಬತ್ತು ದಿನಗಳಲ್ಲಿ ದೇಶದ ವಿವಿಧೆ ಡೆಗಳಿಂದಆಗಮಿಸುವ ಕಲಾ ವಿದರು, ಕಲಾ ರಸಿಕರಿಗೆ ತಮ್ಮಲ್ಲಿರುವ ಕಲೆಯನ್ನು ಉಣಬಡಿಸುತ್ತಾರೆ. ಈ ಬಾರಿ ಸೆ.೨೨ರಂದು ದಸರಾ ಉದ್ಘಾಟನೆಯಾಗಲಿದ್ದು, ಸೆ.೨೯ರವರೆಗೆ ಅರಮನೆ ವೇದಿಕೆ ಸೇರಿದಂತೆ ನಗರದ ವಿವಿಧ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ದಸರಾ ವೇಳೆ ಅರಮನೆಯ ವೇದಿಕೆಯಲ್ಲಿ ೮ ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಉಳಿದಂತೆ ನಗರದ ಒಂಬತ್ತು ವಿವಿಧ ಸ್ಥಳಗಳಲ್ಲಿ ಸಾಂಸ್ಕೃತಿಕ ಕಾರ್ಯ ಕ್ರಮಗಳು ನಡೆಯಲಿವೆ.

ಇದನ್ನೂ ಓದಿ: ಮೈಸೂರು ದಸರಾ | ಸಮಾಜಮುಖಿ ಕೆಲಸ ಮಾಡುತ್ತಿರುವ ಸಿನಿಮಾ : ಸಚಿವ ಮಹದೇವಪ್ಪ

ಈ ಹಿನ್ನೆಲೆಯಲ್ಲಿ ದಸರಾ ಸಾಂಸ್ಕೃತಿಕ ಉಪ ಸಮಿತಿಯು ಒಟ್ಟು ೪೮೮ ಕಾರ್ಯಕ್ರಮಗಳನ್ನು ವಿವಿಧ ವೇದಿಕೆಗಳಲ್ಲಿ ಆಯೋ ಜಿಸಲು ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಕಲಾವಿದರಿಂದ ಅರ್ಜಿಯನ್ನೂ ಆಹ್ವಾನಿಸಿತ್ತು. ಹೀಗಾಗಿ ೩,೧೭೩ ಮಂದಿ ಅವಕಾಶಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ನಗರದ ಜಗನ್ಮೋಹನ ಅರಮನೆ, ಕಲಾಮಂದಿರ, ಕಿರುರಂಗ ಮಂದಿರ, ನಾದಬ್ರಹ್ಮ, ಗಾನಭಾರತಿ, ಚಿಕ್ಕ ಗಡಿಯಾರ, ಪುರಭವನ, ನಂಜನಗೂಡಿನ ಅರಮನೆ ಮಾಳ ಹೀಗೆ ಮೈಸೂರು ಅರಮನೆ ಆವರಣ ಸೇರಿದಂತೆ ೧೦ ವೇದಿಕೆಗಳಲ್ಲಿ ಕಾರ್ಯಕ್ರಮ ಜರುಗಲಿದೆ.

ನಾಟಕ, ಭರತನಾಟ್ಯ, ಸಮೂಹ ಗಾಯನ, ನೃತ್ಯ ರೂಪಕ, ಸಂಗೀತ, ಭಾವಗೀತೆ, ಕೂಚುಪುಡಿ, ವಚನ ಗಾಯನ, ವಚನ ರೂಪಕ ಸೇರಿದಂತೆ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳು ಜನರನ್ನು ಸೆಳೆಯಲಿವೆ. ಹೊರ ರಾಜ್ಯದ ಕಲಾವಿದರು: ಇದೇ ವೇಳೆ ನಮ್ಮ ರಾಜ್ಯದ ಕಲಾವಿದರ ಜೊತೆಗೆ ಹೊರ ರಾಜ್ಯಗಳಿಂದಲೂ ಕಲಾವಿದರು ತಮ್ಮ ಪರಂಪರೆ ಹಾಗೂ ಸಂಸ್ಕೃತಿಯನ್ನು ಮೈಸೂರಿನಲ್ಲಿ ಅನಾವರಣಗೊಳಿಸಲಿದ್ದಾರೆ.

ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ, ಹೊಸದಿಲ್ಲಿ, ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳ ಕಲಾವಿದರು ಆಗಮಿಸಿ ಪ್ರದರ್ಶನ ನೀಡಲಿದ್ದಾರೆ. ನಾಗಪುರದಿಂದ ಆಗಮಿಸುವ ಕಲಾವಿದರು. ಸೆ.೨೨ರಂದು ಸಂಜೆ ಕಲಾಮಂದಿರದಲ್ಲಿ ‘ಸಾಮ್ರಾಟ್ ಅಶೋಕ’ ನಾಟಕ ಪ್ರಸ್ತುತಪಡಿಸಲಿದ್ದು, ಇದು ವಿಶೇಷ ಆಕರ್ಷಣೆಯಾಗಲಿದೆ.

” ನಾಡಹಬ್ಬ ದಸರಾ ವೇಳೆ ನಡೆಯುವ ಕಾರ್ಯಕ್ರಮಗಳ ಪಟ್ಟಿ ಈಗಾಗಲೇ ಅಂತಿಮ ಹಂತದಲ್ಲಿದ್ದು, ಸೋಮವಾರ ಜಿಲ್ಲಾಧಿಕಾರಿಯವರು ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ. ಜಾತಿ, ಧರ್ಮ, ಲಿಂಗಬೇಧವಿಲ್ಲದೆಅರ್ಹ ಕಲಾವಿದರಿಗೆ ದಸರಾದಲ್ಲಿ ವೇದಿಕೆ ಒದಗಿಸಲಾಗುತ್ತಿದೆ. ಹೊರ ರಾಜ್ಯಗಳ ಪರಂಪರೆ, ಸಂಸ್ಕೃತಿ ಕೂಡ ಅನಾವರಣಗೊಳ್ಳಲಿದೆ.”

-ಡಾ.ಎಂ.ಡಿ.ಸುದರ್ಶನ್, ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

8 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

9 hours ago

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

1 day ago