Andolana originals

ಬರೋಬ್ಬರಿ ೩,೧೭೩ ಕಲಾವಿದರಿಂದ ಅರ್ಜಿ ಸಲ್ಲಿಕೆ!

ದಿನೇಶ್ ಕುಮಾರ್ ಎಚ್.ಎಸ್.

ಕರ್ನಾಟಕ ಹಾಗೂ ಹೊರ ರಾಜ್ಯಗಳ ಕಲಾವಿದರಿಂದಲೂ ಕಾರ್ಯಕ್ರಮ 

ಮೈಸೂರು: ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದೆ. ಈ ಬಾರಿಯ ದಸರಾದಲ್ಲಿ ಕಲಾಸಕ್ತರ ಮುಂದೆ ತಮ್ಮ ಕಲೆಯನ್ನುಪ್ರದರ್ಶಿಸಲು ಕಲಾವಿದರು ಸಿದ್ಧವಾಗಿದ್ದು, ಅವಕಾಶ ಕೋರಿ ಬರೋಬ್ಬರಿ ೩,೧೭೩ ಮಂದಿ ಕಲಾವಿದರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಅರ್ಜಿ ಸಲ್ಲಿಸಿದ್ದಾರೆ.

ನಾಡಹಬ್ಬ ದಸರೆಯ ಒಂಬತ್ತು ದಿನಗಳಲ್ಲಿ ದೇಶದ ವಿವಿಧೆ ಡೆಗಳಿಂದಆಗಮಿಸುವ ಕಲಾ ವಿದರು, ಕಲಾ ರಸಿಕರಿಗೆ ತಮ್ಮಲ್ಲಿರುವ ಕಲೆಯನ್ನು ಉಣಬಡಿಸುತ್ತಾರೆ. ಈ ಬಾರಿ ಸೆ.೨೨ರಂದು ದಸರಾ ಉದ್ಘಾಟನೆಯಾಗಲಿದ್ದು, ಸೆ.೨೯ರವರೆಗೆ ಅರಮನೆ ವೇದಿಕೆ ಸೇರಿದಂತೆ ನಗರದ ವಿವಿಧ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ದಸರಾ ವೇಳೆ ಅರಮನೆಯ ವೇದಿಕೆಯಲ್ಲಿ ೮ ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಉಳಿದಂತೆ ನಗರದ ಒಂಬತ್ತು ವಿವಿಧ ಸ್ಥಳಗಳಲ್ಲಿ ಸಾಂಸ್ಕೃತಿಕ ಕಾರ್ಯ ಕ್ರಮಗಳು ನಡೆಯಲಿವೆ.

ಇದನ್ನೂ ಓದಿ: ಮೈಸೂರು ದಸರಾ | ಸಮಾಜಮುಖಿ ಕೆಲಸ ಮಾಡುತ್ತಿರುವ ಸಿನಿಮಾ : ಸಚಿವ ಮಹದೇವಪ್ಪ

ಈ ಹಿನ್ನೆಲೆಯಲ್ಲಿ ದಸರಾ ಸಾಂಸ್ಕೃತಿಕ ಉಪ ಸಮಿತಿಯು ಒಟ್ಟು ೪೮೮ ಕಾರ್ಯಕ್ರಮಗಳನ್ನು ವಿವಿಧ ವೇದಿಕೆಗಳಲ್ಲಿ ಆಯೋ ಜಿಸಲು ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಕಲಾವಿದರಿಂದ ಅರ್ಜಿಯನ್ನೂ ಆಹ್ವಾನಿಸಿತ್ತು. ಹೀಗಾಗಿ ೩,೧೭೩ ಮಂದಿ ಅವಕಾಶಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ನಗರದ ಜಗನ್ಮೋಹನ ಅರಮನೆ, ಕಲಾಮಂದಿರ, ಕಿರುರಂಗ ಮಂದಿರ, ನಾದಬ್ರಹ್ಮ, ಗಾನಭಾರತಿ, ಚಿಕ್ಕ ಗಡಿಯಾರ, ಪುರಭವನ, ನಂಜನಗೂಡಿನ ಅರಮನೆ ಮಾಳ ಹೀಗೆ ಮೈಸೂರು ಅರಮನೆ ಆವರಣ ಸೇರಿದಂತೆ ೧೦ ವೇದಿಕೆಗಳಲ್ಲಿ ಕಾರ್ಯಕ್ರಮ ಜರುಗಲಿದೆ.

ನಾಟಕ, ಭರತನಾಟ್ಯ, ಸಮೂಹ ಗಾಯನ, ನೃತ್ಯ ರೂಪಕ, ಸಂಗೀತ, ಭಾವಗೀತೆ, ಕೂಚುಪುಡಿ, ವಚನ ಗಾಯನ, ವಚನ ರೂಪಕ ಸೇರಿದಂತೆ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳು ಜನರನ್ನು ಸೆಳೆಯಲಿವೆ. ಹೊರ ರಾಜ್ಯದ ಕಲಾವಿದರು: ಇದೇ ವೇಳೆ ನಮ್ಮ ರಾಜ್ಯದ ಕಲಾವಿದರ ಜೊತೆಗೆ ಹೊರ ರಾಜ್ಯಗಳಿಂದಲೂ ಕಲಾವಿದರು ತಮ್ಮ ಪರಂಪರೆ ಹಾಗೂ ಸಂಸ್ಕೃತಿಯನ್ನು ಮೈಸೂರಿನಲ್ಲಿ ಅನಾವರಣಗೊಳಿಸಲಿದ್ದಾರೆ.

ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ, ಹೊಸದಿಲ್ಲಿ, ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳ ಕಲಾವಿದರು ಆಗಮಿಸಿ ಪ್ರದರ್ಶನ ನೀಡಲಿದ್ದಾರೆ. ನಾಗಪುರದಿಂದ ಆಗಮಿಸುವ ಕಲಾವಿದರು. ಸೆ.೨೨ರಂದು ಸಂಜೆ ಕಲಾಮಂದಿರದಲ್ಲಿ ‘ಸಾಮ್ರಾಟ್ ಅಶೋಕ’ ನಾಟಕ ಪ್ರಸ್ತುತಪಡಿಸಲಿದ್ದು, ಇದು ವಿಶೇಷ ಆಕರ್ಷಣೆಯಾಗಲಿದೆ.

” ನಾಡಹಬ್ಬ ದಸರಾ ವೇಳೆ ನಡೆಯುವ ಕಾರ್ಯಕ್ರಮಗಳ ಪಟ್ಟಿ ಈಗಾಗಲೇ ಅಂತಿಮ ಹಂತದಲ್ಲಿದ್ದು, ಸೋಮವಾರ ಜಿಲ್ಲಾಧಿಕಾರಿಯವರು ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ. ಜಾತಿ, ಧರ್ಮ, ಲಿಂಗಬೇಧವಿಲ್ಲದೆಅರ್ಹ ಕಲಾವಿದರಿಗೆ ದಸರಾದಲ್ಲಿ ವೇದಿಕೆ ಒದಗಿಸಲಾಗುತ್ತಿದೆ. ಹೊರ ರಾಜ್ಯಗಳ ಪರಂಪರೆ, ಸಂಸ್ಕೃತಿ ಕೂಡ ಅನಾವರಣಗೊಳ್ಳಲಿದೆ.”

-ಡಾ.ಎಂ.ಡಿ.ಸುದರ್ಶನ್, ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ

ಆಂದೋಲನ ಡೆಸ್ಕ್

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

4 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

4 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

4 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

5 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

5 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

13 hours ago