Andolana originals

ಬರೋಬ್ಬರಿ ೩,೧೭೩ ಕಲಾವಿದರಿಂದ ಅರ್ಜಿ ಸಲ್ಲಿಕೆ!

ದಿನೇಶ್ ಕುಮಾರ್ ಎಚ್.ಎಸ್.

ಕರ್ನಾಟಕ ಹಾಗೂ ಹೊರ ರಾಜ್ಯಗಳ ಕಲಾವಿದರಿಂದಲೂ ಕಾರ್ಯಕ್ರಮ 

ಮೈಸೂರು: ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದೆ. ಈ ಬಾರಿಯ ದಸರಾದಲ್ಲಿ ಕಲಾಸಕ್ತರ ಮುಂದೆ ತಮ್ಮ ಕಲೆಯನ್ನುಪ್ರದರ್ಶಿಸಲು ಕಲಾವಿದರು ಸಿದ್ಧವಾಗಿದ್ದು, ಅವಕಾಶ ಕೋರಿ ಬರೋಬ್ಬರಿ ೩,೧೭೩ ಮಂದಿ ಕಲಾವಿದರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಅರ್ಜಿ ಸಲ್ಲಿಸಿದ್ದಾರೆ.

ನಾಡಹಬ್ಬ ದಸರೆಯ ಒಂಬತ್ತು ದಿನಗಳಲ್ಲಿ ದೇಶದ ವಿವಿಧೆ ಡೆಗಳಿಂದಆಗಮಿಸುವ ಕಲಾ ವಿದರು, ಕಲಾ ರಸಿಕರಿಗೆ ತಮ್ಮಲ್ಲಿರುವ ಕಲೆಯನ್ನು ಉಣಬಡಿಸುತ್ತಾರೆ. ಈ ಬಾರಿ ಸೆ.೨೨ರಂದು ದಸರಾ ಉದ್ಘಾಟನೆಯಾಗಲಿದ್ದು, ಸೆ.೨೯ರವರೆಗೆ ಅರಮನೆ ವೇದಿಕೆ ಸೇರಿದಂತೆ ನಗರದ ವಿವಿಧ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ದಸರಾ ವೇಳೆ ಅರಮನೆಯ ವೇದಿಕೆಯಲ್ಲಿ ೮ ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಉಳಿದಂತೆ ನಗರದ ಒಂಬತ್ತು ವಿವಿಧ ಸ್ಥಳಗಳಲ್ಲಿ ಸಾಂಸ್ಕೃತಿಕ ಕಾರ್ಯ ಕ್ರಮಗಳು ನಡೆಯಲಿವೆ.

ಇದನ್ನೂ ಓದಿ: ಮೈಸೂರು ದಸರಾ | ಸಮಾಜಮುಖಿ ಕೆಲಸ ಮಾಡುತ್ತಿರುವ ಸಿನಿಮಾ : ಸಚಿವ ಮಹದೇವಪ್ಪ

ಈ ಹಿನ್ನೆಲೆಯಲ್ಲಿ ದಸರಾ ಸಾಂಸ್ಕೃತಿಕ ಉಪ ಸಮಿತಿಯು ಒಟ್ಟು ೪೮೮ ಕಾರ್ಯಕ್ರಮಗಳನ್ನು ವಿವಿಧ ವೇದಿಕೆಗಳಲ್ಲಿ ಆಯೋ ಜಿಸಲು ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಕಲಾವಿದರಿಂದ ಅರ್ಜಿಯನ್ನೂ ಆಹ್ವಾನಿಸಿತ್ತು. ಹೀಗಾಗಿ ೩,೧೭೩ ಮಂದಿ ಅವಕಾಶಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ನಗರದ ಜಗನ್ಮೋಹನ ಅರಮನೆ, ಕಲಾಮಂದಿರ, ಕಿರುರಂಗ ಮಂದಿರ, ನಾದಬ್ರಹ್ಮ, ಗಾನಭಾರತಿ, ಚಿಕ್ಕ ಗಡಿಯಾರ, ಪುರಭವನ, ನಂಜನಗೂಡಿನ ಅರಮನೆ ಮಾಳ ಹೀಗೆ ಮೈಸೂರು ಅರಮನೆ ಆವರಣ ಸೇರಿದಂತೆ ೧೦ ವೇದಿಕೆಗಳಲ್ಲಿ ಕಾರ್ಯಕ್ರಮ ಜರುಗಲಿದೆ.

ನಾಟಕ, ಭರತನಾಟ್ಯ, ಸಮೂಹ ಗಾಯನ, ನೃತ್ಯ ರೂಪಕ, ಸಂಗೀತ, ಭಾವಗೀತೆ, ಕೂಚುಪುಡಿ, ವಚನ ಗಾಯನ, ವಚನ ರೂಪಕ ಸೇರಿದಂತೆ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳು ಜನರನ್ನು ಸೆಳೆಯಲಿವೆ. ಹೊರ ರಾಜ್ಯದ ಕಲಾವಿದರು: ಇದೇ ವೇಳೆ ನಮ್ಮ ರಾಜ್ಯದ ಕಲಾವಿದರ ಜೊತೆಗೆ ಹೊರ ರಾಜ್ಯಗಳಿಂದಲೂ ಕಲಾವಿದರು ತಮ್ಮ ಪರಂಪರೆ ಹಾಗೂ ಸಂಸ್ಕೃತಿಯನ್ನು ಮೈಸೂರಿನಲ್ಲಿ ಅನಾವರಣಗೊಳಿಸಲಿದ್ದಾರೆ.

ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ, ಹೊಸದಿಲ್ಲಿ, ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳ ಕಲಾವಿದರು ಆಗಮಿಸಿ ಪ್ರದರ್ಶನ ನೀಡಲಿದ್ದಾರೆ. ನಾಗಪುರದಿಂದ ಆಗಮಿಸುವ ಕಲಾವಿದರು. ಸೆ.೨೨ರಂದು ಸಂಜೆ ಕಲಾಮಂದಿರದಲ್ಲಿ ‘ಸಾಮ್ರಾಟ್ ಅಶೋಕ’ ನಾಟಕ ಪ್ರಸ್ತುತಪಡಿಸಲಿದ್ದು, ಇದು ವಿಶೇಷ ಆಕರ್ಷಣೆಯಾಗಲಿದೆ.

” ನಾಡಹಬ್ಬ ದಸರಾ ವೇಳೆ ನಡೆಯುವ ಕಾರ್ಯಕ್ರಮಗಳ ಪಟ್ಟಿ ಈಗಾಗಲೇ ಅಂತಿಮ ಹಂತದಲ್ಲಿದ್ದು, ಸೋಮವಾರ ಜಿಲ್ಲಾಧಿಕಾರಿಯವರು ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ. ಜಾತಿ, ಧರ್ಮ, ಲಿಂಗಬೇಧವಿಲ್ಲದೆಅರ್ಹ ಕಲಾವಿದರಿಗೆ ದಸರಾದಲ್ಲಿ ವೇದಿಕೆ ಒದಗಿಸಲಾಗುತ್ತಿದೆ. ಹೊರ ರಾಜ್ಯಗಳ ಪರಂಪರೆ, ಸಂಸ್ಕೃತಿ ಕೂಡ ಅನಾವರಣಗೊಳ್ಳಲಿದೆ.”

-ಡಾ.ಎಂ.ಡಿ.ಸುದರ್ಶನ್, ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

49 mins ago

ಓದುಗರ ಪತ್ರ: ಸಾರಿಗೆ ನಿಗಮದ ಬಸ್‌ಗಳಲ್ಲಿ ಮೊಬೈಲ್ ಹಾವಳಿ ತಡೆಗಟ್ಟಿ

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…

52 mins ago

ಓದುಗರ ಪತ್ರ: ಶಾಲಾ ವಾಹನ ಮಾಸಿಕ ಶುಲ್ಕ ಏರಿಕೆ ತಡೆಗೆ ಕ್ರಮ ಅಗತ್ಯ

ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…

57 mins ago

ಹೋಂ ಸ್ಟೇಗಳ ದಾಖಲೆ ಪರಿಶೀಲನೆ ಚುರುಕು

ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…

4 hours ago

ಅವಳಿ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ

ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…

4 hours ago

ಮೈಸೂರು ‘ಯೋಗ ಜಿಲ್ಲೆ’ ಘೋಷಣೆಗೆ ತಯಾರಿ

ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ  ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…

4 hours ago