Andolana originals

ವಸ್ತು ಪ್ರದರ್ಶನಕ್ಕೆ ವಿನೂತನ ಮನರಂಜನೆಯ ಸ್ಪರ್ಶ

ಎಚ್.ಎಸ್.ದಿನೇಶ್‌ಕುಮಾರ್

ಮೈಸೂರು: ನಗರದ ವಸ್ತುಪ್ರದರ್ಶನ ಆವರಣದಲ್ಲಿ ಇದೇ ಮೊದಲ ಬಾರಿಗೆ ಡ್ರ್ಯಾಗನ್ ಪಾಂಡ್ ನಿರ್ಮಾಣಗೊಂಡಿದ್ದು, ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯಲಿದೆ. ಇದರ ಜೊತೆಗೆ ಲೇಸರ್ ಶೋ ಕೂಡ ಜನಾಕರ್ಷಣೆಯಕೇಂದ್ರ ಬಿಂದುವಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದಲೇ ಉದ್ಘಾಟಿಸುವ ಇರ್ಯಾದೆ ಇದೆ ಎಂದು ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್ ತಿಳಿಸಿದ್ದಾರೆ.

ಈ ಬಾರಿಯ ದಸರಾ ಉತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ದಸರಾ ವಸ್ತುಪ್ರದರ್ಶನದಲ್ಲಿ ಸಾರ್ವಜನಿಕರನ್ನು ಸೆಳೆಯಲು ವಿಭಿನ್ನ ಹಾಗೂ ವಿಶೇಷವಾದ ಮನರಂಜನೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಸಾವಾನ್ಯವಾಗಿ ದಸರಾ ಮಹೋತ್ಸವದಲ್ಲಿ ಯುವ ಸಂಭ್ರಮ, ಯುವ ದಸರಾ, ಆಹಾರ ಮೇಳ ಮುಂತಾದ ಕಾರ್ಯಕ್ರಮಗಳ ಜೊತೆಗೆ ದಸರಾ ವಸ್ತು ಪ್ರದರ್ಶನ ಕೂಡ ಜನಾಕರ್ಷಕ ವಾಗಿರುತ್ತದೆ.

ಏಕೆಂದರೆ ಈ ಎಲ್ಲದರಲ್ಲಿ ಸಿಗುವ ಸಂಭ್ರಮ ಸಡಗರವೆಲ್ಲ ವಸ್ತು ಪ್ರದರ್ಶನದಲ್ಲಿ ಒಂದೆಡೆ ಸಿಗು ತ್ತದೆ. ಆಟ, ಊಟ, ಶಾಪಿಂಗ್, ಕಲೆ, ಸಂಸ್ಕತಿ ಎಲ್ಲವೂ ಒಂದೆಡೆ ಸಿಗಲಿದೆ. ಹೀಗಾಗಿ ವಸ್ತು ಪ್ರದರ್ಶನ ಈ ಬಾರಿ ಹೊಸ ಮೆರುಗು ಪಡೆದುಕೊಳ್ಳಲಿದೆ.

ಜನಾಕರ್ಷಕವಾಗಲಿರುವ ಡ್ರ್ಯಾಗನ್: ಇದೇ ಮೊದಲ ಬಾರಿಗೆ ಸುಮಾರು ೪.೫ ಕೋಟಿ ರೂ. ವೆಚ್ಚದಲ್ಲಿ ರೂಪುಗೊಂಡಿರುವ ಡ್ರ್ಯಾಗನ್ ಪಾಂಡ್, ವಸ್ತು ಪ್ರದರ್ಶನ ವೀಕ್ಷಿಸಲು ಬರುವ ಜನರನ್ನು ರಂಜಿಸಲು ಸಿದ್ಧವಾಗಿದೆ. ಡ್ರ್ಯಾಗನ್ ಮಾದರಿಯ ಸುತ್ತಲೂ ಕೊಳವನ್ನು ನಿರ್ಮಿಸಲಾಗಿದ್ದು, ಅಲ್ಲಿ ಬೋಟಿಂಗ್ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಗೆ ಭೇಟಿ ನೀಡುವವರು ದೋಣಿ ವಿಹಾರ ನಡೆಸುತ್ತಲೇ ಡ್ರ್ಯಾಗನ್ ಚಮತ್ಕಾರವನ್ನು ವೀಕ್ಷಿಸಬಹುದು.

ಲೇಸರ್ ಶೋ: ಪಾಂಡ್‌ನ ಸುತ್ತ ವೀಕ್ಷಕರ ಗ್ಯಾಲರಿ ನಿರ್ಮಾಣವಾಗಿದ್ದು, ಅಲ್ಲಿ ಲೇಸರ್ ಶೋ ನಡೆಸಲು ಸಿದ್ಧತೆ ನಡೆದಿದೆ. ಸುಮಾರು ೨೫ ನಿಮಿಷಗಳ ಲೇಸರ್ ಶೋನಲ್ಲಿ ವಂದೇ ಮಾತರಂ, ಮಾ ತುಜೇ ಸಲಾಂ ಸೇರಿದಂತೆ ಸಾಕಷ್ಟು ಗೀತೆಗಳ ಸಂಗೀತವನ್ನು ಹಿನ್ನೆಲೆಯಾಗಿ ನೀಡಲಾಗಿದೆ. ಮುಂದಿನ ಒಂದು ವಾರದಲ್ಲಿ ಇದು ಲೋಕಾರ್ಪಣೆಗೊಳ್ಳಲಿದೆ.

ವಿಶಿಷ್ಟ ದೀಪಾಲಂಕಾರ: ಇದೇ ಮೊದಲ ಬಾರಿಗೆ ವಸ್ತು ಪ್ರದರ್ಶನದ ಆವರಣದಲ್ಲಿ ವಿವಿಧ ಮಾದರಿಯ ದೀಪಾಲಂಕಾರ ಮಾಡಲಾಗಿದೆ. ಇದು ಸಾರ್ವಜನಿಕರನ್ನು ಸೆಳೆಯುತ್ತಿದೆ. ಇದರ ಜೊತೆಗೆ ಪಾರಂಪರಿಕ ಬ್ಯಾಟರಿ ವಾಹನದ ಮೂಲಕ ಹಿರಿಯರನ್ನು ಕರೆದೊಯ್ಯುವ ವ್ಯವಸ್ಥೆ ಮಾಡಲಾಗಿದೆ.

ಮ್ಯೂಸಿಕಲ್ ಫೌಂಟೇನ್: ಈ ಬಾರಿ ವಸ್ತು ಪ್ರದರ್ಶನದ ಮುಖ್ಯ ದ್ವಾರದ ಬಳಿ ನಿರ್ಮಾಣ ಮಾಡಲಾಗಿರುವ ಮ್ಯೂಸಿ ಕಲ್ ಫೌಂಟೇನ್ ಜನರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಸುಮಾರು ೨೦ ನಿಮಿಷಗಳ ಕಾಲ ನಡೆಯುವ ಕೆಆರ್‌ಎಸ್ ಬೃಂದಾವನ ಮಾದರಿಯ ಮ್ಯೂಸಿಕಲ್ ಫೌಂಟೇನ್ ಜನರನ್ನು ಮನಸೂರೆಗೊಂಡಿದೆ.

ಮಕ್ಕಳ ರಂಜನೆಗೆ ಬರವಿಲ್ಲ: ಇನ್ನು ಇದೇ ಮೊದಲಬಾರಿಗೆ ವಸ್ತು ಪ್ರದರ್ಶನದ ಒಳಾವರಣದಲ್ಲಿ ಮಕ್ಕಳ ಮನರಂಜನೆಯನ್ನು ಗುರಿಯಾಗಿಸಿಕೊಂಡು ಸಾಕಷ್ಟು ಎಲೆಕ್ಟ್ರಾನಿಕ್ ಅಟಿಕೆಗಳನ್ನು ಪರಿಚಯಿಸಲಾಗಿದೆ. ಅದರಲ್ಲಿ ಕುಳಿತು ಒಂದು ಸುತ್ತು ಹಾಕುವ ಮಕ್ಕಳು ಹೋ…, ಎಂದು ಸಂತಸದಿಂದ ಕೂಗುವುದನ್ನು ಕಾಣಬಹುದು.

ಸೆಲ್ಛಿ ಸ್ಪಾಟ್: ಕಳೆದ ಬಾರಿ ಕಟ್ಟಿಗೆ ಅರಮನೆ ಸೆಲ್ಛಿ ಸ್ಪಾಟ್ ಆಗಿತ್ತು. ಈಬಾರಿ ಅದರ ಜೊತೆಗೆ ಹಿಮ ಕರಡಿಯ ಮಾದರಿಯು ಜನರಿಗೆ ಸೆಲ್ಛಿ ಸ್ಪಾಟ್ ಆಗಿದೆ. ರಾತ್ರಿ ವೇಳೆ ಲೈಟಿಂಗ್‌ನಿಂದಾಗಿ ಕಂಗೊಳಿಸುವ ಹಿಮ ಕರಡಿ ಮಾದರಿಯ ಮುಂದೆ ನಿಂತು ಜನರು ಸೆಲಿ ಕ್ಲಿಕ್ಕಿಸಿಕೊಳ್ಳುವುದು ಸಾಮಾನ್ಯವಾಗಿದೆ.

” ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಸ್ತು ಪ್ರದರ್ಶನ ಆವರಣವನ್ನು ಪ್ರವಾಸಿ ಸ್ನೇಹಿಯನ್ನಾಗಿ ರೂಪಿಸಲು ಎಲ್ಲಾ ರೀತಿಯ ನೆರವು ನೀಡಿದ್ದಾರೆ. ಪ್ರವಾಸಿಗರು ಹಾಗೂ ಸ್ಥಳೀಯರು ವಸ್ತು ಪ್ರದರ್ಶನ ಆವರಣಕ್ಕೆ ಬಂದಲ್ಲಿ ಮನರಂಜನೆ, ಆಟ, ತಿನಿಸಿಗಳು ಒಂದೇ ಕಡೆ ಸಿಗಬೇಕು ಎಂಬ ಸದುದ್ದೇಶದಿಂದ ಹೆಚ್ಚಿನ ಆಸಕ್ತಿ ವಹಿಸಿ ಹೊಸ ಯೋಜನೆಗಳನ್ನು ಪರಿಚಯಿಸಲಾಗುತ್ತಿದೆ.”

-ಅಯೂಬ್‌ಖಾನ್, ಅಧ್ಯಕ್ಷರು, ವಸ್ತುಪ್ರದರ್ಶನ ಪ್ರಾಧಿಕಾರ.

ಸತೀಶ್ ಜಾರಕಿಹೊಳಿ ಮೆಚ್ಚುಗೆ…:

ಕಳೆದ ವಾರ ವಸ್ತುಪ್ರದರ್ಶನ ಆವರಣಕ್ಕೆ ಭೇಟಿ ನೀಡಿದ್ದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಅಲ್ಲಿನ ವ್ಯವಸ್ಥೆಗಳನ್ನು ಕಂಡು ಮೆಚ್ಚುಗೆ ಸೂಚಿಸಿದ್ದಾರೆ. ವಸ್ತು ಪ್ರದರ್ಶನ ಆವರಣದಲ್ಲಿನ ವ್ಯವಸ್ಥೆಗಳನ್ನು ಕಂಡು ನಿಜಕ್ಕೂ ನನಗೆ ಖುಷಿಯಾಗಿದೆ. ಒಂದೇ ಸೂರಿನಡಿ ಏನೆಲ್ಲಾ ನಿರ್ಮಾಣ ಮಾಡಬಹುದು ಎಂಬುದನ್ನು ಅಯೂಬ್ ಖಾನ್ ತೋರಿಸಿಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಪ್ರಾಧಿಕಾರದ ಅಧ್ಯಕ್ಷಗಿರಿಯನ್ನು ಶಾಸಕರೇ ಕೇಳುವಂತಹ ವಾತಾವರಣವನ್ನು ಸೃಷ್ಟಿ ಮಾಡಲಾಗಿದೆ. ಇದರ ಕೀರ್ತಿ ಅಯೂಬ್‌ಗೆ ಸಲ್ಲಬೇಕು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

3 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

9 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

9 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

9 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

9 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

9 hours ago